TSK

TSK · ಎಜ್ರನು 8:28

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಅವರು ದೇವರಿಗೆ ಮೀಸಲಾಗಿರಬೇಕು; ತಾವು ಸೇವಿಸುವ ದೇವರ ಹೆಸರನ್ನು ಅಪಕೀರ್ತಿಗೆ ಗುರಿಪಡಿಸಬಾರದು. ತಮ್ಮ ದೇವರ ಆಹಾರವನ್ನು ಅಂದರೆ ಯೆಹೋವನ ಹೋಮದ್ರವ್ಯಗಳನ್ನು ಅವರು ಸಮರ್ಪಿಸುವವರು ಆಗಿರುವುದರಿಂದ ಪವಿತ್ರರಾಗಿರಬೇಕು.

ದೇವದರ್ಶನ ಗುಡಾರದ ವಿಷಯದಲ್ಲಿ ಕೆಹಾತ್ಯರು ಮಾಡಬೇಕಾದ ಕೆಲಸ ಯಾವುದೆಂದರೆ; ಅವರು ಮಹಾಪರಿಶುದ್ಧ ವಸ್ತುಗಳನ್ನು ನೋಡಿಕೊಳ್ಳಬೇಕು.

ಅವನು ತಂದ ಕಾಣಿಕೆ: ದೇವಸ್ಥಾನದ ನಾಣ್ಯ ತೂಕದ ಮೇರೆಗೆ ನೂರ ಮೂವತ್ತು ಶೆಕೆಲ್ ತೂಕದ ಒಂದು ಬೆಳ್ಳಿಯ ತಟ್ಟೆ. ಎಪ್ಪತ್ತು ಶೆಕೆಲ್ ತೂಕದ ಒಂದು ಬೆಳ್ಳಿಯ ಬಟ್ಟಲು; ಈ ಎರಡರಲ್ಲಿಯೂ ಧಾನ್ಯನೈವೇದ್ಯಕ್ಕಾಗಿ ಎಣ್ಣೆ ಬೆರಸಿದ ಗೋದಿಯ ಹಿಟ್ಟು ತುಂಬಿತ್ತು.

¶ ಲೇವಿ ಕುಲದ ವಿಷಯದಲ್ಲಿ, “ಯೆಹೋವನೇ ನಿನ್ನ ನಿರ್ಣಯವನ್ನು ತಿಳಿಸುವ ಊರೀಮ್ ಮತ್ತು ತುಮ್ಮೀಮ್ ಎಂಬ ವಸ್ತುಗಳು ನಿನ್ನ ಭಕ್ತರಾದ ಇವರ ವಶದಲ್ಲಿ ಉಂಟಷ್ಟೆ. ನೀನು ಮಸ್ಸದಲ್ಲಿ ಅವರನ್ನು ಪರೀಕ್ಷಿಸಿದಿಯಲ್ಲಾ; ಮೆರೀಬದಲ್ಲಿ ನೀರು ಹೊರಟ ಸ್ಥಳದ ಹತ್ತಿರ ಅವರೊಡನೆ ವಿವಾದಮಾಡಿದಿ.

ಅವರು ಆರೋನ್ಯರ ಕೈಕೆಳಗಿದ್ದುಕೊಂಡು ಯೆಹೋವನ ಆಲಯದ ಪರಿಚಾರಿಕೆಯನ್ನು ನಡೆಸುತ್ತಿದ್ದರು. ಅವರ ಕೆಲಸಗಳು ಯಾವುದೆಂದರೆ, ಅಂಗಳಗಳ ಕೋಣೆಗಳನ್ನು ಸ್ವಚ್ಛಮಾಡಿ ನೋಡಿಕೊಳ್ಳುವುದೂ, ದೇವಾಲಯಕ್ಕೆ ಸಂಬಂಧಪಟ್ಟವುಗಳನ್ನೆಲ್ಲಾ ಶುದ್ಧಮಾಡುವುದೂ,

ಕೆಲಸ ಮುಗಿದಾಗ ಅವರು ಉಳಿದ ಹಣವನ್ನು ಅರಸನಿಗೂ, ಯೆಹೋಯಾದನಿಗೂ ಒಪ್ಪಿಸಿದರು. ಇವರು ಅದರಿಂದ ಯೆಹೋವನ ಆಲಯದ ಆರಾಧನೆಗಾಗಿಯೂ, ಯಜ್ಞಸಮರ್ಪಣೆಗಾಗಿಯೂ ಉಪಯೋಗವಾಗುವ ಧೂಪಾರತಿ, ಬೆಳ್ಳಿಬಂಗಾರದ ಪಾತ್ರೆ ಮೊದಲಾದ ಸಾಮಾನುಗಳನ್ನು ಮಾಡಿಸಿದರು. ಯೆಹೋಯಾದನ ಜೀವಮಾನದಲ್ಲೆಲ್ಲಾ ಯೆಹೋವನ ಆಲಯದಲ್ಲಿ ಪ್ರತಿನಿತ್ಯವೂ ಸರ್ವಾಂಗಹೋಮಯಜ್ಞವು ನಡೆಯುತ್ತಿತ್ತು.

ತೊಲಗಿರಿ, ತೊಲಗಿರಿ, ಬಾಬೆಲಿನಿಂದ ಹೊರಡಿರಿ, ಅಶುದ್ಧವಾದ ಯಾವುದನ್ನೂ ಮುಟ್ಟದಿರಿ, ಅದರಿಂದ ದೂರ ಹೋಗಿ, ಯೆಹೋವನ ಆರಾಧನೆಯ ಉಪಕರಣಗಳನ್ನು ಹೊರುವವರೇ, ಶುದ್ಧರಾಗಿರಿ!