ನಿಮ್ಮಲ್ಲಿ ಉಳಿದವರು ತಮ್ಮ ಪಾಪದ ದೆಸೆಯಿಂದಲೂ ಮತ್ತು ತಮ್ಮ ಪೂರ್ವಿಕರ ಪಾಪದ ದೆಸೆಯಿಂದಲೂ ಅವರಂತೆಯೇ ಶತ್ರುಗಳ ದೇಶಗಳಲ್ಲಿ ಕ್ಷೀಣವಾಗಿ ಹೋಗುವರು.
TSK
TSK · ಎಜ್ರನು 9:7
Treasury of Scripture Knowledge references in ಕನ್ನಡ IRV.
¶ ನೀವು ಮಕ್ಕಳನ್ನೂ ಮತ್ತು ಮೊಮ್ಮಕ್ಕಳನ್ನೂ ಪಡೆದು ಬಹುಕಾಲ ಆ ದೇಶದಲ್ಲಿದ್ದ ಮೇಲೆ ದ್ರೋಹಿಗಳಾಗಿ ಯಾವ ವಿಗ್ರಹವನ್ನಾದರೂ ಮಾಡಿಕೊಂಡು, ನಿಮ್ಮ ದೇವರಾದ ಯೆಹೋವನ ದೃಷ್ಟಿಗೆ ಕೆಟ್ಟದ್ದನ್ನು ನಡಿಸಿ,
¶ “ಮುಂದೆ ಹುಟ್ಟುವ ನಿಮ್ಮ ಸಂತತಿಯವರೂ ದೇಶಾಂತರಗಳಿಂದ ಬರುವ ಅನ್ಯರೂ ನಿಮ್ಮ ದೇಶಕ್ಕೆ ಯೆಹೋವನು ಉಂಟುಮಾಡಿದ ರೋಗ ಮತ್ತು ಉಪದ್ರವಗಳನ್ನು ಕಂಡು ಆಶ್ಚರ್ಯಪಡುವರು.
ನಾನು ಪ್ರಮಾಣಮಾಡಿಕೊಟ್ಟ ದೇಶದಲ್ಲಿ ಇವರು ಸೇರುವುದಕ್ಕಿಂತ ಮುಂಚಿತವಾಗಿಯೇ ಇವರು ಈಗಲೂ ಮಾಡುವ ದುರಾಲೋಚನೆಗಳನ್ನು ನಾನು ಬಲ್ಲೆನು. ನಾನು ಇವರ ಪೂರ್ವಿಕರಿಗೆ ಪ್ರಮಾಣಮಾಡಿದಂತೆ ಹಾಲೂ ಮತ್ತು ಜೇನೂ ಹರಿಯುವ ದೇಶಕ್ಕೆ ಇವರನ್ನು ಸೇರಿಸಿದ ಮೇಲೆ ಇವರು ಚೆನ್ನಾಗಿ ಊಟಮಾಡಿ ಕೊಬ್ಬಿದವರಾದಾಗ ಇತರ ದೇವರುಗಳನ್ನು ಅವಲಂಬಿಸಿ, ಸೇವಿಸಿ ನನ್ನನ್ನು ತಾತ್ಸಾರಮಾಡಿ ನನ್ನ ನಿಬಂಧನೆಯನ್ನು ಮೀರುವರು.
ನೀವು ಯೆಹೋವನ ಮಾತನ್ನು ಕೇಳದೆಯೂ, ಆತನ ಆಜ್ಞೆಗಳನ್ನು ಕೈಕೊಳ್ಳದೆಯೂ ಹೋದರೆ, ಆತನ ಹಸ್ತವು ನಿಮ್ಮ ಹಿರಿಯರಿಗೆ ವಿರೋಧವಾಗಿದ್ದಂತೆ ನಿಮಗೂ ವಿರೋಧವಾಗಿಯೇ ಇರುವುದು.
¶ ಇದಲ್ಲದೆ, ಅಶ್ಶೂರದ ಅರಸನು ದೇಶವನ್ನೆಲ್ಲಾ ಸ್ವಾಧೀನಮಾಡಿಕೊಂಡು ಸಮಾರ್ಯಕ್ಕೆ ಬಂದು ಮೂರು ವರ್ಷಗಳವರೆಗೂ ಅದಕ್ಕೆ ಮುತ್ತಿಗೆ ಹಾಕಿದನು.
¶ ಯೆಹೋಯಾಕೀಮನ ಕಾಲದಲ್ಲಿ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಹೊರಟು ಬಂದನು. ಯೆಹೋಯಾಕೀಮನು ಅವನಿಗೆ ಅಧೀನನಾಗಿ ಮೂರು ವರ್ಷಗಳಾದ ನಂತರ ಅವನ ವಿರುದ್ಧವಾಗಿ ತಿರುಗಿ ಬಿದ್ದನು.
ನಿಮ್ಮ ಪೂರ್ವಿಕರು ಸಹೋದರರೂ ನಡೆದಂತೆ ನೀವೂ ನಡೆಯಬೇಡಿರಿ. ಅವರು ತಮ್ಮ ಪೂರ್ವಿಕರ ದೇವರಾದ ಯೆಹೋವನಿಗೆ ವಿರೋಧವಾಗಿ ದ್ರೋಹಿಗಳಾಗಿದ್ದುದರಿಂದ ಆತನು ಅವರನ್ನು ನಾಶನಕ್ಕೆ ಒಪ್ಪಿಸಿದನು. ಅದಕ್ಕೆ ನೀವೇ ಸಾಕ್ಷಿಗಳು.
ಅವರಾದರೋ ದೇವಪ್ರೇಷಿತರನ್ನು ಗೇಲಿಮಾಡಿ, ಯೆಹೋವನ ಮಾತುಗಳನ್ನು ಕಡೆಗಣಿಸಿ ಆತನ ಪ್ರವಾದಿಗಳನ್ನು ಹೀಯಾಳಿಸಿದ್ದರಿಂದ, ಆತನ ಕೋಪಾಗ್ನಿಯು ಆತನ ಪ್ರಜೆಗಳ ಮೇಲೆ ಉರಿಯತೊಡಗಿತು, ಅದರ ತಾಪವು ಆರಿಹೋಗಲೇ ಇಲ್ಲ.
ನೀನು ಅನೇಕ ವರ್ಷಗಳ ತನಕ ಅವರ ವಿಷಯದಲ್ಲಿ ತಾಳ್ಮೆಯುಳ್ಳವನಾಗಿ ಪ್ರವಾದಿಗಳ ಮುಖಾಂತರ ಮಾತನಾಡುತ್ತಿದ್ದ ನಿನ್ನ ಆತ್ಮನಿಂದ ಅವರನ್ನು ಎಷ್ಟು ಎಚ್ಚರಿಸುತ್ತಿದ್ದರೂ ಅವರು ಕಿವಿಗೊಡದೆ ಹೋದ ಮೇಲೆ ನೀನು ಅವರನ್ನು ಅನ್ಯದೇಶಗಳವರ ಕೈಗೆ ಒಪ್ಪಿಸಿಬಿಟ್ಟೆ.
ನೀನು ನಮ್ಮ ಪೂರ್ವಿಕರಿಗೆ, ಇದರ ಉತ್ಪನ್ನವನ್ನೂ, ಸಮೃದ್ಧಿಯನ್ನೂ ಅನುಭವಿಸಿರಿ ಎಂದು ಹೇಳಿ ಕೊಟ್ಟ ದೇಶದಲ್ಲೇ ನಾವು ದಾಸರಾಗಿರಬೇಕಾಗಿ ಬಂದಿದೆ.
ನಿನ್ನನ್ನು ಬಿಟ್ಟರೆ ನಿರೀಕ್ಷಿಸುವವನಿಗೆ ಕಾರ್ಯಕರ್ತನಾದ ಯಾವ ದೇವರನ್ನೂ ಆದಿಯಿಂದ ಯಾರೂ ಕೇಳಲಿಲ್ಲ, ಯಾರ ಕಿವಿಗೂ ಬೀಳಲಿಲ್ಲ, ಯಾರ ಕಣ್ಣೂ ಕಾಣಲಿಲ್ಲ.
ಅದನ್ನು ಯೆರೂಸಲೇಮಿಗೂ, ಯೆಹೂದದ ಪಟ್ಟಣಗಳಿಗೂ, ಅರಸರಿಗೂ ಮತ್ತು ಪ್ರಧಾನರಿಗೂ ಕುಡಿಸಿದೆನು. ಇದರಿಂದ ಅವರು ಹಾಳಾಗಿ ಪರಿಹಾಸ್ಯಕ್ಕೂ ಮತ್ತು ಶಾಪಕ್ಕೂ ಗುರಿಯಾಗುವುದಕ್ಕೆ ಆಸ್ಪದವಾಯಿತು.
ನಿಮ್ಮ ಪೂರ್ವಿಕರು, ಯೆಹೂದದ ಅರಸರು, ಅವರ ಹೆಂಡತಿಯರು, ನೀವು ಮತ್ತು ನಿಮ್ಮ ಹೆಂಡತಿಯರು ಇವರೆಲ್ಲರೂ ಯೆಹೂದ ದೇಶದಲ್ಲಿಯೂ, ಯೆರೂಸಲೇಮಿನ ಬೀದಿಗಳಲ್ಲಿಯೂ ನಡೆಸಿದ ದುರಾಚಾರಗಳನ್ನು ಮರೆತುಬಿಟ್ಟಿರೋ?
ನಮ್ಮ ಪೂರ್ವಿಕರು ಪಾಪಮಾಡಿ ಇಲ್ಲದೆ ಹೋದರು; ಅವರ ದೋಷಫಲವನ್ನು ನಾವು ಅನುಭವಿಸಬೇಕಾಯಿತು.
¶ “ಇದಲ್ಲದೆ, ಇಸ್ರಾಯೇಲರು ತಮ್ಮ ಅಧರ್ಮದ ನಿಮಿತ್ತವೇ ಸೆರೆಯಾಗಿ ಹೋದರೆಂತಲೂ, ಅವರು ನನಗೆ ದ್ರೋಹಮಾಡಿದ್ದರಿಂದ ನಾನು ಅವರಿಗೆ ವಿಮುಖನಾಗಿ ಅವರೆಲ್ಲರೂ ಖಡ್ಗದಿಂದ ಹತರಾಗುವಂತೆ ಅವರನ್ನು ಶತ್ರುಗಳ ವಶ ಮಾಡಿದೆನೆಂತಲೂ ಜನಾಂಗಗಳಿಗೆ ಗೊತ್ತಾಗುವುದು.
ಇಸ್ರಾಯೇಲರೆಲ್ಲರೂ ನಿನ್ನ ಧರ್ಮಪ್ರಮಾಣವನ್ನು ಮೀರಿ ನಿನ್ನ ಮಾತನ್ನು ಕೇಳಲೊಲ್ಲದೆ ಓರೆಯಾಗಿ ಹೋದರು. ಆದಕಾರಣ ನಿನ್ನ ಶಾಪದ ಕೇಡುಗಳೂ, ದೇವಸೇವಕನಾದ ಮೋಶೆಯ ಧರ್ಮನಿಯಮದಲ್ಲಿ ನೀನು ಆಣೆಯಿಟ್ಟು ಪ್ರಕಟಿಸಿದ ವಿಪತ್ತುಗಳೂ ನಮ್ಮ ಮೇಲೆ ಸುರಿಯಲ್ಪಟ್ಟಿವೆ; ನಾವು ದೇವ ದ್ರೋಹಿಗಳೇ ಸರಿ.
‹‘ನಾವು ನಮ್ಮ ಹಿರಿಯರ ಕಾಲದಲ್ಲಿ ಇದ್ದಿದ್ದರೆ ಪ್ರವಾದಿಗಳನ್ನು ಕೊಂದ ಪಾಪದಲ್ಲಿ ಪಾಲುಗಾರರಾಗುತ್ತಿರಲಿಲ್ಲ’ ಅನ್ನುತ್ತೀರಿ.›