ಯೆಹೋವನು ಅನ್ಯಜನರ ಸಂಕಲ್ಪಗಳನ್ನು ವ್ಯರ್ಥಮಾಡುತ್ತಾನೆ; ಅವರ ಯೋಚನೆಗಳನ್ನು ನಿಷ್ಫಲಮಾಡುತ್ತಾನೆ.
TSK
TSK · ಗಲಾತ್ಯದವರಿಗೆ 2:21
Treasury of Scripture Knowledge references in ಕನ್ನಡ IRV.
ಹೀಗಿರಲು ‘ನಾವು ಜ್ಞಾನಿಗಳು, ಯೆಹೋವನ ಧರ್ಮಶಾಸ್ತ್ರವು ನಮ್ಮಲ್ಲಿಯೇ ಇದೆ’ ಎಂದು ನೀವು ಅಂದುಕೊಳ್ಳುವುದು ಹೇಗೆ? ಆಹಾ, ಶಾಸ್ತ್ರಿಗಳ ಸುಳ್ಳು ಲೇಖನಿಯು ಅದನ್ನು ಸುಳ್ಳಾಗಿ ಮಾಡಿದೆ.
¶ ಹಾಗಾದರೆ ಈ ವಿಷಯಗಳಲ್ಲಿ ನಾವು ಏನು ಹೇಳೋಣ? ದೇವರು ನಮ್ಮ ಜೊತೆಯಲ್ಲಿ ಇದ್ದರೆ ನಮ್ಮನ್ನು ಎದುರಿಸುವವರು ಯಾರು?
ಕೃಪೆಯಿಂದ ಆರಿಸಿಕೊಂಡನು ಅಂದ ಮೇಲೆ ಒಳ್ಳೆಯ ಕಾರ್ಯದಿಂದಲ್ಲ. ಹಾಗಲ್ಲದ ಪಕ್ಷಕ್ಕೆ ಕೃಪೆಯನ್ನು ಇನ್ನು ಕೃಪೆಯನ್ನುವುದಕ್ಕಾಗುವುದಿಲ್ಲ.
ಕ್ರಿಸ್ತನೂ ಎದ್ದುಬರಲಿಲ್ಲವಾದರೆ ನಮ್ಮ ಬೋಧನೆಯು ವ್ಯರ್ಥ ಮತ್ತು ನಿಮ್ಮ ನಂಬಿಕೆಯು ಸಹ ವ್ಯರ್ಥವಾದದ್ದು.
ಯಾವನಾದರೂ ಯೇಸು ಕ್ರಿಸ್ತನ ಮೇಲೆ ನಂಬಿಕೆ ಇಡುವುದರಿಂದಲೇ ಹೊರತು ಧರ್ಮಶಾಸ್ತ್ರದ ನೇಮನಿಷ್ಠೆಗಳನ್ನು ಅನುಸರಿಸುವುದರಿಂದ ನೀತಿವಂತನೆಂದು ನಿರ್ಣಯಿಸಲ್ಪಡುವುದಿಲ್ಲವೆಂಬುದು ನಮಗೆ ತಿಳಿದಿರುವುದರಿಂದ ನಾವು ಸಹ ಧರ್ಮಶಾಸ್ತ್ರದ ನೇಮನಿಷ್ಠೆಗಳನ್ನು ಬಿಟ್ಟು ಕ್ರಿಸ್ತ ಯೇಸುವಿನಲ್ಲಿ ನಂಬಿಕೆಯಿಟ್ಟೆವು. ಏಕೆಂದರೆ ಯಾರೂ ಧರ್ಮಶಾಸ್ತ್ರದ ನೇಮನಿಷ್ಠೆಗಳನ್ನನುಸರಿಸಿ ನೀತಿವಂತನೆಂದು ನಿರ್ಣಯಿಸಲ್ಪಡುವುದಿಲ್ಲ.
¶ ಹಾಗಾದರೆ ಮೋಶೆಯ ಧರ್ಮಶಾಸ್ತ್ರವು ದೇವರ ವಾಗ್ದಾನಗಳಿಗೆ ವಿರುದ್ಧವೋ? ಹಾಗೆ ಎಂದಿಗೂ ತಿಳಿದುಕೊಳ್ಳಬಾರದು. ಬದುಕಿಸುವುದಕ್ಕೆ ಶಕ್ತವಾಗಿರುವ ಧರ್ಮಶಾಸ್ತ್ರವು ಕೊಡಲ್ಪಟ್ಟಿದ್ದರೆ ಅದನ್ನು ಅನುಸರಿಸುವುದರ ಮೂಲಕ ನಿಸ್ಸಂದೇಹವಾಗಿ ನೀತಿಯುಂಟಾಗುತ್ತಿತ್ತು.
¶ ಇಸ್ರಾಯೇಲರಿಗೆ ಕೊಡಲಾದ ಧರ್ಮಶಾಸ್ತ್ರ ಲೇವಿಯರ ಯಾಜಕತ್ವದ ಮೇಲೆ ಆಧಾರಗೊಂಡಿದೆ. ಲೇವಿಯರ ಈ ಯಾಜಕತ್ವದಿಂದಲೇ ಸಂಪೂರ್ಣ ಸಿದ್ಧಿ ಪ್ರಾಪ್ತವಾಗುತ್ತಿದ್ದಾದರೆ, ಆರೋನನ ಪರಂಪರೆಗೆ ಸೇರದ, ಮೆಲ್ಕಿಜೆದೇಕನ ಪರಂಪರೆಗೆ ಸೇರಿದ ಬೇರೊಬ್ಬ ಯಾಜಕನು ಬರುವುದರ ಅಗತ್ಯವೇನಿತ್ತು?