TSK

TSK · ಆದಿಕಾಂಡ 10:5

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಈ ಮೂವರು ನೋಹನ ಮಕ್ಕಳು. ಇವರಿಂದಲೇ ಜನರು ಉತ್ಪತ್ತಿಯಾಗಿ ಭೂಮಿಯಲ್ಲೆಲ್ಲಾ ಹರಡಿಕೊಂಡರು.

¶ ಎಬರನಿಗೆ ಇಬ್ಬರು ಮಕ್ಕಳು ಹುಟ್ಟಿದರು. ಒಬ್ಬನಿಗೆ ಪೆಲೆಗೆಂಬ ಹೆಸರು; ಅವನ ಕಾಲದಲ್ಲಿ ಭೂಮಿಯು ವಿಭಾಗಿಸಲ್ಪಟ್ಟಿತ್ತು. ಅವನ ತಮ್ಮನ ಹೆಸರು ಯೊಕ್ತಾನ್.

¶ ಆಗ ಭೂಲೋಕದವರೆಲ್ಲರಿಗೂ ಒಂದೇ ಭಾಷೆ; ಒಂದೇ ಮಾತು ಇತ್ತು. ಭಾಷಾಭೇದಗಳೇನೂ ಇರಲಿಲ್ಲ.

ಸಮಸ್ತ ಲೋಕದ ಭಾಷೆಯನ್ನು ಯೆಹೋವನು ಅಲ್ಲಿ ಗಲಿಬಿಲಿ ಮಾಡಿ, ಅವರನ್ನು ಭೂಲೋಕದಲ್ಲೆಲ್ಲಾ ಚದರಿಸಿದ್ದರಿಂದ ಆ ಪಟ್ಟಣಕ್ಕೆ ಬಾಬೆಲ್ (ದೇವರ ಬಾಗಿಲು) ಎಂಬ ಹೆಸರಾಯಿತು.

¶ ಅಹಷ್ವೇರೋಷ್ ರಾಜನು ತನ್ನ ರಾಜ್ಯಕ್ಕೆ ಸೇರಿರುವ ಎಲ್ಲಾ ದೇಶಗಳಿಗೂ ಮತ್ತು ಸಮುದ್ರದ್ವೀಪಗಳಿಗೂ ತೆರಿಗೆಯನ್ನು ವಿಧಿಸಿದನು.

ಆ ದಿನದಲ್ಲಿ ಕರ್ತನು ಉಳಿದ ತನ್ನ ಜನರನ್ನು ಬಿಡಿಸಿಕೊಳ್ಳುವುದಕ್ಕೆ ಎರಡನೆಯ ಸಾರಿ ಕೈಹಾಕಿ, ಅಶ್ಶೂರ, ಐಗುಪ್ತ, ಪತ್ರೋಸ್, ಕೂಷ್, ಏಲಾಮ್, ಶಿನಾರ್, ಹಮಾಥ್ ಸಮುದ್ರದ ಕರಾವಳಿ ದ್ವೀಪಗಳಿಂದಲೂ ಉಳಿದವರನ್ನು ಬರಮಾಡಿಕೊಳ್ಳುವನು.

ಆಹಾ, ಆತನ ಗಣನೆಯಲ್ಲಿ ಜನಾಂಗಗಳು ಕಪಿಲೆಯಿಂದ ಉದುರುವ ತುಂತುರಿನಂತೆಯೂ, ತಕ್ಕಡಿಯಲ್ಲಿನ ಧೂಳಿನ ಹಾಗೂ ಇರುತ್ತವೆ. ಇಗೋ, ದ್ವೀಪಗಳನ್ನು ಅಣುರೇಣುವಿನಂತೆ ಎತ್ತುತ್ತಾನೆ.

ಲೋಕದಲ್ಲಿ ಸದ್ಧರ್ಮವನ್ನು ಸ್ಥಾಪಿಸುವ ತನಕ ಇವನು ಕಳೆಗುಂದದೆಯೂ, ಜಜ್ಜಿಹೋಗದೆಯೂ ತನ್ನ ಕಾರ್ಯದಲ್ಲಿ ನಿರತನಾಗಿರುವನು. ದ್ವೀಪಗಳು ಇವನ ಧರ್ಮಪ್ರಮಾಣಕ್ಕೆ ಕಾದಿರುವವು.

ದ್ವೀಪನಿವಾಸಿಗಳೇ, ನನ್ನ ಕಡೆಗೆ ಕಿವಿಗೊಡಿರಿ, ದೂರದ ಜನಾಂಗಗಳೇ, ಆಲಿಸಿರಿ! ನಾನು ಗರ್ಭದಲ್ಲಿದ್ದಾಗಲೇ ಯೆಹೋವನು ನನ್ನನ್ನು ಕರೆದನು, ತಾಯಿಯ ಉದರದಲ್ಲಿದ್ದಂದಿನಿಂದಲೂ ನನ್ನ ಹೆಸರನ್ನು ಹೇಳುತ್ತಿದ್ದಾನೆ.

ತನ್ನ ವಿರೋಧಿಗಳಲ್ಲಿಟ್ಟ ಕ್ರೋಧವನ್ನು ಈಡೇರಿಸಿ, ತನ್ನ ಶತ್ರುಗಳಿಗೆ ದಂಡನೆಯನ್ನು ವಿಧಿಸಿ, ಅವರವರ ಕೃತ್ಯಗಳಿಗೆ ತಕ್ಕಂತೆ ಮುಯ್ಯಿತೀರಿಸುವನು; ಕರಾವಳಿಯಲ್ಲಿರುವವರಿಗೂ ತಕ್ಕ ಪ್ರತಿಫಲವನ್ನು ನೀಡುವನು.

“ಕಿತ್ತೀಮ್ ದ್ವೀಪಗಳಿಗೆ ಹೋಗಿ ನೋಡಿರಿ, ಕೇದಾರಿಗೆ ಕಳುಹಿಸಿ ವಿಚಾರಮಾಡಿರಿ, ಇಂತಹ ಕಾರ್ಯವು ಎಲ್ಲಿಯಾದರೂ ನಡೆಯಿತೇ ಎಂದು ಚೆನ್ನಾಗಿ ಆಲೋಚಿಸಿರಿ.

ಯೆಹೋವನು ಅವರಿಗೆ ಭಯಂಕರನಾಗುವನು; ಲೋಕದ ದೇವರುಗಳನ್ನೆಲ್ಲಾ ನಾಶಮಾಡುವನು; ಸಮಸ್ತ ಜನರು, ಪ್ರತಿಯೊಂದು ಪ್ರಾಂತ್ಯದ ನಿವಾಸಿಗಳು ಸಕಲ ಜನಾಂಗಗಳವರು ತಮ್ಮ ತಮ್ಮ ಸ್ಥಳಗಳಲ್ಲೇ ಆತನನ್ನು ಆರಾಧಿಸುವರು.