ನಿನ್ನ ಸಂತಾನದವರನ್ನು ಭೂಮಿಯ ಧೂಳಿನಷ್ಟು ಅಸಂಖ್ಯವಾಗಿ ಮಾಡುವೆನು. ಭೂಮಿಯಲ್ಲಿರುವ ಧೂಳನ್ನು ಲೆಕ್ಕಮಾಡುವುದಾದರೆ ನಿನ್ನ ಸಂತಾನವನ್ನೂ ಲೆಕ್ಕಿಸಬಹುದು.
TSK
TSK · ಆದಿಕಾಂಡ 12:2
Treasury of Scripture Knowledge references in ಕನ್ನಡ IRV.
“ಆಕಾಶದ ಕಡೆಗೆ ನೋಡು, ನಕ್ಷತ್ರಗಳನ್ನು ಲೆಕ್ಕಿಸುವುದು ನಿನ್ನಿಂದಾದರೆ ಲೆಕ್ಕಿಸು.” ನಂತರ ಯೆಹೋವನು ಅಬ್ರಾಮನಿಗೆ, “ನಿನ್ನ ಸಂತಾನವು ನಕ್ಷತ್ರಗಳಷ್ಟಾಗುವುದು” ಎಂದು ಹೇಳಿದನು.
ಇಷ್ಮಾಯೇಲನ ವಿಷಯದಲ್ಲಿ ನೀನು ಮಾಡಿದ ಬಿನ್ನಹವನ್ನು ಕಿವಿಗೊಟ್ಟು ಕೇಳಿದ್ದೇನೆ. ಅವನನ್ನೂ ಆಶೀರ್ವದಿಸಿದ್ದೇನೆ; ಅವನನ್ನು ಅಭಿವೃದ್ಧಿಮಾಡಿ ಅವನಿಗೆ ಅತ್ಯಧಿಕವಾದ ಸಂತಾನವನ್ನು ಕೊಡುವೆನು. ಅವನು ಹನ್ನೆರಡು ಮಂದಿ ಅರಸರನ್ನು ಪಡೆಯುವನು, ಅವನಿಂದ ಮಹಾ ಜನಾಂಗವಾಗುವಂತೆ ಮಾಡುವೆನು.
¶ ದೇವರು ಆ ಪ್ರದೇಶದ ಪಟ್ಟಣಗಳನ್ನು ನಾಶಮಾಡಿದಾಗ, ಅಬ್ರಹಾಮನನ್ನು ನೆನಪುಮಾಡಿಕೊಂಡನು. ಲೋಟನು ವಾಸವಾಗಿದ್ದ ಪಟ್ಟಣಗಳನ್ನು ಹಾಳುಮಾಡಿ ಆ ಸ್ಥಳದೊಳಗಿಂದ ಲೋಟನನ್ನು ಹೊರಗೆ ಕಳುಹಿಸಿ ಪಾರುಮಾಡಿದನು.
ನೀನು ನನ್ನ ಮಾತಿಗೆ ವಿಧೇಯನಾಗಿ ಭೂಮಿಯ ಎಲ್ಲಾ ಜನಾಂಗಗಳಿಗೆ ನಿನ್ನ ಸಂತತಿಯ ಮೂಲಕ ಆಶೀರ್ವಾದವುಂಟಾಗುವುದು ಎಂಬುದಾಗಿ ಯೆಹೋವನು ವಾಗ್ದಾನ ಮಾಡಿದ್ದಾನೆ.” ಎಂದನು.
ಯೆಹೋವನು ನನ್ನ ದಣಿಯನ್ನು ಬಹಳವಾಗಿ ಅಭಿವೃದ್ಧಿಪಡಿಸಿ ಅವನಿಗೆ ಕುರಿದನಗಳನ್ನೂ, ಬೆಳ್ಳಿ ಬಂಗಾರವನ್ನೂ, ದಾಸದಾಸಿಯರನ್ನೂ, ಒಂಟೆಗಳನ್ನೂ, ಕತ್ತೆಗಳನ್ನೂ ಕೊಟ್ಟಿದ್ದರಿಂದ ಅವನು ಧನವಂತನಾದನು.
ಜನಗಳು ನಿನ್ನನ್ನು ಆರಾಧಿಸಲಿ, ಜನಾಂಗಗಳು ನಿನಗೆ ಅಧೀನವಾಗಲಿ. ನಿನ್ನ ಅಣ್ಣತಮ್ಮಂದಿರಿಗೆ ನೀನು ದೊರೆಯಾಗಿರು, ನಿನ್ನ ತಾಯಿಯ ಮಕ್ಕಳು ನಿನಗೆ ಅಡ್ಡಬೀಳಲಿ. ನಿನ್ನನ್ನು ಶಪಿಸುವವರಿಗೆ ಶಾಪವೂ, ನಿನ್ನನ್ನು ಆಶೀರ್ವದಿಸುವವರಿಗೆ ಆಶೀರ್ವಾದವೂ ಉಂಟಾಗಲಿ” ಎಂದನು.
ದೇವರು ಅಬ್ರಹಾಮನಿಗೆ ಕೊಟ್ಟಿರುವ ಆಶೀರ್ವಾದವನ್ನು ನಿನಗೂ, ನಿನ್ನ ಸಂತತಿಗೂ ಕೊಡಲಿ, ದೇವರು ಅಬ್ರಹಾಮನಿಗೆ ವಾಗ್ದಾನ ಮಾಡಿದ ಹಾಗೆ, ನೀನು ಈಗ ಪ್ರವಾಸಿಯಾಗಿರುವ ದೇಶವನ್ನು ಸ್ವತ್ತಾಗಿ ಹೊಂದುವಂತೆ ದೇವರು ನಿನ್ನನ್ನು ಆಶೀರ್ವದಿಸಿ ನಿನಗೂ ನಿನ್ನ ಸಂತತಿಗೂ ಕೊಡಲಿ” ಎಂದನು.
¶ ದೇವರು ಅವನಿಗೆ, “ನಾನೇ ಸರ್ವಶಕ್ತನಾದ ದೇವರು, ನೀನು ಬಹು ಸಂತಾನವುಳ್ಳವನಾಗಿ ಹೆಚ್ಚುವೆ, ನಿನ್ನಿಂದ ಜನಾಂಗವೂ, ಜನಾಂಗಗಳ ಗುಂಪು ಉಂಟಾಗುವುದು. ಅನೇಕ ಜನಾಂಗಗಳ ಅರಸರು ನಿನ್ನಿಂದ ಹುಟ್ಟುವರು.
ಆದರೆ ಇಸ್ರಾಯೇಲರ ಮಕ್ಕಳು ಅತ್ಯಧಿಕವಾಗಿ ಅಭಿವೃದ್ಧಿಯಾಗಿ, ಹೆಚ್ಚಿನ ಸಂಖ್ಯೆಯಲ್ಲಿ ಬೆಳೆದು ಬಲ ಹೊಂದಿದರು. ಆ ದೇಶವು ಅವರಿಂದ ತುಂಬಿಹೋಯಿತು.
ನಾನು ಇವರಿಗೆ ವ್ಯಾಧಿಯನ್ನು ಉಂಟುಮಾಡಿ ಇವರನ್ನು ನಿರ್ಮೂಲಮಾಡುವೆನು. ಈ ಜನರಿಗಿಂತ ನಿನ್ನನ್ನು ದೊಡ್ಡದಾಗಿಯೂ, ಬಲಿಷ್ಠವಾಗಿಯೂ ಇರುವ ಜನಾಂಗವಾಗುವಂತೆ ಮಾಡುವೆನು” ಎಂದು ಹೇಳಿದನು.
ಆಗ ನೀವು ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ, “ಅರಾಮ್ಯನಾದ ನಮ್ಮ ಮೂಲಪಿತೃವು ಗತಿಯಿಲ್ಲದವನಾಗಿ ಅಲೆದಾಡುತ್ತಾ ಸ್ವಲ್ಪ ಜನರೊಡನೆ ಐಗುಪ್ತದೇಶಕ್ಕೆ ಹೋಗಿ ಅಲ್ಲಿ ಇಳಿದುಕೊಂಡನು. ಅಲ್ಲಿ ಅವನ ಸಂತಾನದವರು ಹೆಚ್ಚಿ ಅವರು ಮಹಾಬಲಿಷ್ಠ ಜನಾಂಗವಾದರು.
ಅರಸನಾದ ದಾವೀದನ ಸೇವಕರು ನಮ್ಮ ಒಡೆಯನೂ, ಅರಸನೂ ಆದ ದಾವೀದನ ಮುಂದೆ ಬಂದು, ‘ನಿನ್ನ ದೇವರು ನಿನ್ನ ಹೆಸರಿಗಿಂತಲೂ ಸೊಲೊಮೋನನ ಹೆಸರನ್ನು ಪ್ರಸಿದ್ಧಿಗೆ ತರಲಿ. ರಾಜ್ಯವನ್ನು ನಿನ್ನ ಕಾಲದಲ್ಲಿ ಇದ್ದದ್ದಕ್ಕಿಂತ ಅವನ ಕಾಲದಲ್ಲಿ ಹೆಚ್ಚು ಬಲಪಡಿಸಲಿ’ ಎಂದು ಅವನನ್ನು ಹರಿಸಿದ್ದಾರೆ.
ನಿನ್ನ ಕೆಟ್ಟತನದಿಂದ ನಿನ್ನಂಥ ಮನುಷ್ಯನಿಗೇ ನಷ್ಟವಾದೀತು, ನಿನ್ನ ನೀತಿಯಿಂದ ನರಜನ್ಮದವನಿಗೇನು ಲಾಭ ಸಿಕ್ಕಬಹುದು.
ನೀನು ಪುರಾತನ ಕಾಲದಿಂದಲೂ ನಮ್ಮ ಪೂರ್ವಿಕರಿಗೆ ಪ್ರಮಾಣಮಾಡಿರುವಂತೆ ಯಾಕೋಬನ ವಂಶದವರಿಗೆ ಸತ್ಯಪರನಾಗಿಯೂ, ಅಬ್ರಹಾಮನ ವಂಶದವರಿಗೆ ಪ್ರೀತಿಪರನಾಗಿಯೂ ನಡೆಯುವಿ.
ಅನಂತರ ಸುನ್ನತಿಯನ್ನು, ಮೊದಲೇ ಅವನಿಗಿದ್ದ ನಂಬಿಕೆಯ ಗುರುತಾಗಿಯೂ, ಮುದ್ರೆಯಾಗಿಯೂ ಹೊಂದಿದನು. ಹೀಗಿರುವುದರಿಂದ ಅವನು ನಂಬುವವರೆಲ್ಲರಿಗೂ, ಅವರು ಸುನ್ನತಿಯಿಲ್ಲದವರಾಗಿದಾಗ್ಯೂ ಮೂಲಪಿತೃವಾದನು; ಇದರಿಂದ ಅವರು ನೀತಿವಂತರೆಂದು ಎಣಿಸಲ್ಪಟ್ಟರು.
¶ ಅಬ್ರಹಾಮನಿಗೆ ಉಂಟಾದ ಆಶೀರ್ವಾದವು, ಕ್ರಿಸ್ತ ಯೇಸುವಿನಲ್ಲಿ ಅನ್ಯಜನರಿಗೆಲ್ಲ ಸಿಗುವಂತೆಯೂ ಮತ್ತು ದೇವರು ವಾಗ್ದಾನ ಮಾಡಿದ ಪರಿಶುದ್ಧಾತ್ಮನು ನಮಗೆ ನಂಬಿಕೆಯ ಮೂಲಕ ದೊರಕುವಂತೆಯೂ, ತನ್ನ ಮರಣದ ಮೂಲಕ ಕ್ರಿಸ್ತನು ನಮ್ಮನ್ನು ಕೊಂಡುಕೊಂಡನು.