ಕಾಲ ಕ್ರಮೇಣವಾಗಿ ಈ ಕಾನಾನ್ಯರ ವಂಶಸ್ಥರಾದ ಸೀನಿಯರು, ಅರ್ವಾದಿಯರು, ಚೆಮಾರಿಯರು, ಹದೋರಾಮರು, ಹಮಾತಿಯರು ಹರಡಿ ಕಾನಾನನಿಂದ ಹುಟ್ಟಿದರು.
TSK
TSK · ಆದಿಕಾಂಡ 12:6
Treasury of Scripture Knowledge references in ಕನ್ನಡ IRV.
¶ ಆ ದಿನದಲ್ಲಿ ಯೆಹೋವನು ಅಬ್ರಾಮನ ಸಂಗಡ ಒಡಂಬಡಿಕೆ ಮಾಡಿಕೊಂಡು, “ಐಗುಪ್ತ ದೇಶದ ನದಿಯಿಂದ ಯೂಫ್ರೆಟಿಸ್ ಮಹಾ ನದಿಯವರೆಗೂ ಇರುವ ಈ ದೇಶವನ್ನೆಲ್ಲಾ ನಿನ್ನ ಸಂತತಿಯವರಿಗೆ ಕೊಟ್ಟಿದ್ದೇನೆ.
ದೇಶಾಧಿಪತಿಯಾಗಿರುವ ಹಿವ್ವಿಯನಾದ ಹಮೋರನ ಮಗ ಶೆಕೆಮನು ಆಕೆಯನ್ನು ನೋಡಿ ತೆಗೆದುಕೊಂಡು ಹೋಗಿ ಮಾನಭಂಗಪಡಿಸಿದನು.
ಆಗ ಅವರು ತಮ್ಮಲ್ಲಿದ್ದ ಎಲ್ಲಾ ಅನ್ಯ ದೇವರುಗಳನ್ನು, ತಮ್ಮ ಕಿವಿಯಲ್ಲಿದ್ದ ಓಲೆಗಳನ್ನು ಯಾಕೋಬನಿಗೆ ಕೊಟ್ಟರು. ಅವನು ಅವುಗಳನ್ನು ಶೆಕೆಮ್ ಪಟ್ಟಣದ ಹತ್ತಿರವಿರುವ ಏಲಾ ಮರದ ಕೆಳಗೆ ಹೂಣಿಟ್ಟನು.
ಇಸ್ರಾಯೇಲ್ಯರು ನಫ್ತಾಲಿ ಕುಲದವರ ಪರ್ವತಪ್ರದೇಶವಾದ ಗಲಿಲಾಯ ಪ್ರಾಂತ್ಯದಲ್ಲಿನ ಕೆದೆಷ್, ಎಫ್ರಾಯೀಮ್ ಪರ್ವತ ಪ್ರದೇಶದಲ್ಲಿನ ಶೆಕೆಮ್ ಹಾಗೂ ಯೆಹೂದ್ಯರ ಬೆಟ್ಟದ ಸೀಮೆಯಲ್ಲಿ ಹೆಬ್ರೋನ್ ಅನ್ನಿಸಿಕೊಳ್ಳುವ ಕಿರ್ಯತರ್ಬ ಎಂಬ ಪಟ್ಟಣಗಳನ್ನು ನೇಮಿಸಿದರು.
¶ ಆನಂತರ ಯೆರುಬ್ಬಾಳನೆನಿಸಿಕೊಳ್ಳುವ ಗಿದ್ಯೋನನೂ, ಅವನ ಸಂಗಡ ಇದ್ದ ಜನರೂ ಬೆಳಿಗ್ಗೆ ಎದ್ದು ಹೊರಟು ಹೋಗಿ ಹರೋದಿನ ಬುಗ್ಗೆಯ ಬಳಿಯಲ್ಲಿ ಬಿಡಾರ ಹಾಕಿಕೊಂಡರು. ಇವರ ಉತ್ತರದಿಕ್ಕಿನಲ್ಲಿ ಮೋರೆಗುಡ್ಡದ ಹಿಂದಿನ ತಗ್ಗಿನಲ್ಲಿ ಮಿದ್ಯಾನ್ಯರ ದಂಡಿಳಿದಿತ್ತು.
¶ ರೆಹಬ್ಬಾಮನು ಶೆಕೆಮಿಗೆ ಹೋದನು. ಅಲ್ಲಿ ಎಲ್ಲಾ ಇಸ್ರಾಯೇಲರೂ ಅವನನ್ನು ಅರಸನನ್ನಾಗಿ ಮಾಡುವುದಕ್ಕೆ ಸೇರಿಬಂದಿದ್ದರು.
ಹೋಗುವಾಗ ಸಮಾರ್ಯ ಸೀಮೆಗೆ ಸೇರಿದ ಸುಖರೆಂಬ ಊರಿಗೆ ಬಂದನು. ಅದು ಯಾಕೋಬನು ತನ್ನ ಮಗನಾದ ಯೋಸೇಫನಿಗೆ ಕೊಟ್ಟ ಭೂಮಿಯ ಹತ್ತಿರದಲ್ಲಿತ್ತು.
ನಂಬಿಕೆಯಿಂದಲೇ ಅವನು ವಾಗ್ದಾನದ ದೇಶಕ್ಕೆ ಬಂದಾಗ, ಅಲ್ಲಿ ಅನ್ಯ ದೇಶದವನಂತೆ ಗುಡಾರಗಳಲ್ಲಿ ಇದ್ದುಕೊಂಡು ಪ್ರವಾಸಿಯಾಗಿ ಬದುಕಿದನು. ಅದೇ ವಾಗ್ದಾನಕ್ಕೆ ಸಹಭಾಧ್ಯರಾಗಿದ್ದ ಇಸಾಕನೂ, ಯಾಕೋಬನೂ ಅವನಂತೆಯೇ ಗುಡಾರಗಳಲ್ಲಿ ವಾಸಿಸಿದರು.