¶ ಅವನು ಅಲ್ಲಿಂದ ಹೊರಟು ಬೇತೇಲಿನ ಪೂರ್ವದಲ್ಲಿರುವ ಗುಡ್ಡಕ್ಕೆ ಬಂದು ತನ್ನ ಗುಡಾರವನ್ನು ಹಾಕಿ ಇಳಿದುಕೊಂಡನು. ಪಶ್ಚಿಮಕ್ಕೆ ಬೇತೇಲ್, ಪೂರ್ವಕ್ಕೆ ಆಯಿ ಎಂಬ ಊರುಗಳಿದ್ದವು. ಅಲ್ಲಿಯೂ ಅಬ್ರಾಮನು ಯೆಹೋವನಿಗೋಸ್ಕರ ಯಜ್ಞವೇದಿಯನ್ನು ಕಟ್ಟಿಸಿ ಆತನ ಹೆಸರಿನಲ್ಲಿ ಆರಾಧಿಸಿದನು.
TSK
TSK · ಆದಿಕಾಂಡ 12:7
Treasury of Scripture Knowledge references in ಕನ್ನಡ IRV.
ನೀನು ನೋಡುವ ಈ ದೇಶವನ್ನೆಲ್ಲಾ ನಿನಗೂ ನಿನ್ನ ಸಂತತಿಗೂ ಶಾಶ್ವತವಾಗಿ ಕೊಡುವೆನು.
¶ ತರುವಾಯ ಅಬ್ರಾಮನು ಗುಡಾರವನ್ನು ತೆಗೆದುಕೊಂಡು ಹೆಬ್ರೋನಿನಲ್ಲಿರುವ ಮಮ್ರೆ ಮೋರೆ ಎಂಬ ತೋಪಿಗೆ ಬಂದು ಅಲ್ಲೇ ವಾಸಮಾಡಿಕೊಂಡು, ಯೆಹೋವನಿಗೆ ಯಜ್ಞವೇದಿಯನ್ನು ಕಟ್ಟಿಸಿದನು.
¶ ಅಬ್ರಾಮನು ತೊಂಭತೊಂಭತ್ತು ವರ್ಷದವನಾದಾಗ ಯೆಹೋವನು ಅವನಿಗೆ ದರ್ಶನದಲ್ಲಿ, “ನಾನು ಸರ್ವಶಕ್ತನಾದ ದೇವರು; ನನ್ನೆದುರಿನಲ್ಲಿ ದೋಷ ಇಲ್ಲದವನಾಗಿ ನಡೆದುಕೊ.
ನೀನು ಪ್ರವಾಸಿಯಾಗಿರುವ ಕಾನಾನ್ ದೇಶವನ್ನೆಲ್ಲಾ ನಿನಗೂ ನಿನ್ನ ಸಂತತಿಗೂ ಶಾಶ್ವತ ಸ್ವತ್ತಾಗಿ ಕೊಟ್ಟು ಎಂದೆಂದಿಗೂ ಅವರಿಗೆ ದೇವರಾಗಿರುವೆನು” ಎಂದನು.
ದೇವರು ಹೇಳಿದ ಸ್ಥಳಕ್ಕೆ ಅವರು ಸೇರಿದಾಗ ಅಬ್ರಹಾಮನು ಯಜ್ಞವೇದಿಯನ್ನು ಕಟ್ಟಿ, ಕಟ್ಟಿಗೆಯನ್ನು ಜೋಡಿಸಿ ತನ್ನ ಮಗನಾದ ಇಸಾಕನ ಕೈಕಾಲುಗಳನ್ನು ಕಟ್ಟಿ ಅವನನ್ನು ಯಜ್ಞವೇದಿಯ ಮೇಲೆ ಇದ್ದ ಕಟ್ಟಿಗೆಯ ಮೇಲೆ ಮಲಗಿಸಿದನು.
ನೀನು ಈ ದೇಶದಲ್ಲಿ ಪ್ರವಾಸಿಯಾಗಿರು; ನಾನು ನಿನ್ನ ಬಳಿಯಲ್ಲಿದ್ದು ನಿನ್ನನ್ನು ಅಭಿವೃದ್ಧಿಪಡಿಸಿ ನಿನಗೂ, ನಿನ್ನ ಸಂತತಿಯವರಿಗೂ ಈ ಪ್ರದೇಶಗಳನ್ನೆಲ್ಲಾ ಕೊಡುವೆನು. ಹೀಗೆ ನಿನ್ನ ತಂದೆಯಾದ ಅಬ್ರಹಾಮನಿಗೆ ಮಾಡಿದ ವಾಗ್ದಾನವನ್ನು ನೆರವೇರಿಸುವೆನು,
ದೇವರು ಅಬ್ರಹಾಮನಿಗೆ ಕೊಟ್ಟಿರುವ ಆಶೀರ್ವಾದವನ್ನು ನಿನಗೂ, ನಿನ್ನ ಸಂತತಿಗೂ ಕೊಡಲಿ, ದೇವರು ಅಬ್ರಹಾಮನಿಗೆ ವಾಗ್ದಾನ ಮಾಡಿದ ಹಾಗೆ, ನೀನು ಈಗ ಪ್ರವಾಸಿಯಾಗಿರುವ ದೇಶವನ್ನು ಸ್ವತ್ತಾಗಿ ಹೊಂದುವಂತೆ ದೇವರು ನಿನ್ನನ್ನು ಆಶೀರ್ವದಿಸಿ ನಿನಗೂ ನಿನ್ನ ಸಂತತಿಗೂ ಕೊಡಲಿ” ಎಂದನು.
¶ ಆಗ ಯಾಕೋಬನು, “ನಾನು ದೇವರನ್ನು ಪ್ರತ್ಯಕ್ಷವಾಗಿ ನೋಡಿದೆನಲ್ಲಾ; ಆದರೂ ನನ್ನ ಪ್ರಾಣ ಉಳಿದಿದೆ” ಎಂದು ಹೇಳಿ ಆ ಸ್ಥಳಕ್ಕೆ ಪೆನೀಯೇಲ್ ಎಂದು ಹೆಸರಿಟ್ಟನು,
ಅವನು ತನ್ನ ಅಣ್ಣನ ಬಳಿಯಿಂದ ಓಡಿಹೋದಾಗ ದೇವರು ಅವನಿಗೆ ಪ್ರತ್ಯಕ್ಷನಾದನು. ಅದುದರಿಂದ ಅವನು ಅಲ್ಲಿ ಯಜ್ಞವೇದಿಯನ್ನು ಕಟ್ಟಿಸಿ ಆ ಸ್ಥಳಕ್ಕೆ ಏಲ್ ಬೇತೇಲ್ ಎಂದು ಹೆಸರಿಟ್ಟನು.
¶ ಯೋಸೇಫನು ತನ್ನ ಅಣ್ಣತಮ್ಮಂದಿರಿಗೆ, “ನನಗೆ ಅವಸಾನಕಾಲ ಸಮೀಪಿಸಿತು. ಆದರೆ ದೇವರು ನಿಶ್ಚಯವಾಗಿ ನಿಮ್ಮನ್ನು ಪರಾಂಬರಿಸಿ ತಾನು ಅಬ್ರಹಾಮ, ಇಸಾಕ್, ಯಾಕೋಬರಿಗೆ ಕೊಡುತ್ತೇನೆಂದು ಪ್ರಮಾಣಮಾಡಿ ಹೇಳಿದ ದೇಶಕ್ಕೆ ನೀವು ಹೋಗಿ ಸೇರುವಂತೆ ಮಾಡುವನು” ಎಂದು ತಿಳಿದುಕೊಳ್ಳಿರಿ.
ನಾನು ಅವರಿಗೆ ಕಾನಾನ್ ದೇಶವನ್ನು ಅಂದರೆ, ಅವರು ಪರದೇಶದವರಾಗಿ ವಾಸವಾಗಿದ್ದ ಪ್ರವಾಸದ ದೇಶವನ್ನು ನಾನು ಅವರಿಗೆ ಕೊಡುವೆನೆಂದು ಅವರ ಸಂಗಡ ನನ್ನ ಒಡಂಬಡಿಕೆಯನ್ನು ಮಾಡಿಕೊಂಡಿರುವೆನು.
ಮೋಶೆಯು ಯೆಹೋವನ ಆಜ್ಞೆಗಳನ್ನೆಲ್ಲಾ ಬರೆದಿಟ್ಟನು. ಬೆಳಿಗ್ಗೆ ಎದ್ದು ಆ ಬೆಟ್ಟದ ತಪ್ಪಲಲ್ಲಿ ಯಜ್ಞವೇದಿಯನ್ನು ಕಟ್ಟಿಸಿ ಇಸ್ರಾಯೇಲರ ಹನ್ನೆರಡು ಕುಲಗಳಿಗೆ ಸರಿಯಾಗಿ ಹನ್ನೆರಡು ಕಲ್ಲಿನ ಕಂಬಗಳನ್ನು ಸ್ಥಾಪನೆಮಾಡಿಸಿದನು.
“ನೀವು ಈ ಕುಲಗಳಿಗೆ ಅವರವರ ಸಂಖ್ಯೆಯ ಪ್ರಕಾರ ಆ ದೇಶವನ್ನು ಸ್ವದೇಶವಾಗುವಂತೆ ಹಂಚಿಕೊಡಬೇಕು.
ಆ ದೇಶವನ್ನು ನಿಮಗೇ ಕೊಟ್ಟಿದ್ದೇನೆ. ಯೆಹೋವನೆಂಬ ನಾನು ನಿಮ್ಮ ಪೂರ್ವಿಕರಾದ ಅಬ್ರಹಾಮ್, ಇಸಾಕ್, ಯಾಕೋಬರಿಗೂ ಮತ್ತು ಅವರ ಸಂತತಿಯವರಿಗೂ ಆ ದೇಶವನ್ನು ಕೊಡುತ್ತೇನೆಂದು ಪ್ರಮಾಣಪೂರ್ವಕವಾಗಿ ವಾಗ್ದಾನ ಮಾಡಿದೆನಲ್ಲಾ. ಅದರಲ್ಲಿ ಪ್ರವೇಶಮಾಡಿ ಸ್ವಾಧೀನಮಾಡಿಕೊಳ್ಳಿರಿ’” ಎಂದು ಅಜ್ಞಾಪಿಸಿದನು.
ನಿಮ್ಮ ದೇವರಾದ ಯೆಹೋವನನ್ನು ಪ್ರೀತಿಸಿ, ಆತನ ಮಾತಿಗೆ ವಿಧೇಯರಾಗಿರಿ, ಆತನನ್ನು ಹೊಂದಿಕೊಂಡೇ ಇರಿ. ಯೆಹೋವನು ನಿಮ್ಮ ಪೂರ್ವಿಕರಾದ ಅಬ್ರಹಾಮ್, ಇಸಾಕ್ ಮತ್ತು ಯಾಕೋಬರಿಗೆ ಪ್ರಮಾಣ ಮಾಡಿಕೊಟ್ಟ ದೇಶದಲ್ಲಿ ನೀವು ಬದುಕಿಕೊಳ್ಳುವುದಕ್ಕೂ ಬಹುಕಾಲ ಇರುವುದಕ್ಕೂ ಆತನೇ ಆಧಾರ” ಎಂದು ಹೇಳಿದನು.
¶ ಯೆಹೋವನ ಸೇವಕನಾದ ಮೋಶೆಯು ಇಸ್ರಾಯೇಲರಿಗೆ ಆಜ್ಞಾಪಿಸಿದಂತೆ ಹಾಗೂ ಮೋಶೆಯ ಧರ್ಮಶಾಸ್ತ್ರದಲ್ಲಿ ಬರೆದಿರುವಂತೆ ಯೆಹೋಶುವನು ಇಸ್ರಾಯೇಲಿನ ದೇವರಾದ ಯೆಹೋವನಿಗೆ ಏಬಾಲ್ ಬೆಟ್ಟದಲ್ಲಿ ಒಂದು ಯಜ್ಞವೇದಿಯನ್ನು ಕಟ್ಟಿಸಿದನು. ಉಳಿಯು ಮುಟ್ಟದ ಹುಟ್ಟುಕಲ್ಲುಗಳಿಂದಲೇ ಅದನ್ನು ಕಟ್ಟಿಸಿದನು
ಗಿದ್ಯೋನನು ಅಲ್ಲಿ ಯೆಹೋವನಿಗೋಸ್ಕರ ಒಂದು ಯಜ್ಞವೇದಿಯನ್ನು ಕಟ್ಟಿ ಅದಕ್ಕೆ ಯೆಹೋವ ಷಾಲೋಮ್ ಎಂದು ಹೆಸರಿಟ್ಟನು; ಅದು ಈ ವರೆಗೂ ಅಬೀಯೆಜೆರನ ಗೋತ್ರದವರ ಒಫ್ರದಲ್ಲಿರುತ್ತದೆ.
ಅಲ್ಲಿ ಅವನು ಯೆಹೋವನಿಗೋಸ್ಕರ ಯಜ್ಞವೇದಿಯನ್ನು ಕಟ್ಟಿಸಿ, ಅದರ ಮೇಲೆ ಆತನಿಗೆ ಸರ್ವಾಂಗಹೋಮಗಳನ್ನೂ, ಸಮಾಧಾನಯಜ್ಞಗಳನ್ನೂ ಅರ್ಪಿಸಿದನು. ಹೀಗೆ ದೇಶದ ಮೇಲಿದ್ದ ಯೆಹೋವನ ಕೋಪವು ಶಾಂತವಾಯಿತು. ಇಸ್ರಾಯೇಲ್ಯರಲ್ಲಿದ್ದ ವ್ಯಾಧಿಯು ಗುಣವಾಯಿತು.
ಆತನು ಆ ಒಡಂಬಡಿಕೆಯನ್ನು ಅಬ್ರಹಾಮನ ಸಂಗಡ ಮಾಡಿಕೊಂಡನು ಮತ್ತು ಇಸಾಕನಿಗಾಗಿ ವಾಗ್ದಾನ ಮಾಡಿ ಭರವಸೆ ನೀಡಿದನು.
ನಮ್ಮ ದೇವರಾದ ನೀನು ನಿನ್ನ ಪ್ರಜೆಗಳಾದ ಇಸ್ರಾಯೇಲರ ಎದುರಿನಿಂದ ಈ ದೇಶದ ನಿವಾಸಿಗಳನ್ನು ಓಡಿಸಿ, ದೇಶವನ್ನು ನಿನ್ನ ಸ್ನೇಹಿತನಾದ ಅಬ್ರಹಾಮನ ಸಂತಾನದವರಿಗೆ ಶಾಶ್ವತ ಸ್ವತ್ತಾಗಿ ಕೊಟ್ಟಿರುವೆಯಲ್ಲಾ?.
ಆಗ ದೇವರ ಮನುಷ್ಯನಾದ ಮೋಶೆಯ ಧರ್ಮಶಾಸ್ತ್ರದಲ್ಲಿ ಬರೆದಿರುವ ಪ್ರಕಾರ ಸರ್ವಾಂಗಹೋಮಗಳನ್ನು ಸಮರ್ಪಿಸುವುದಕ್ಕಾಗಿ ಯೋಚಾದಾಕನ ಮಗನಾದ ಯೇಷೂವನೂ, ಯಾಜಕರಾದ ಅವನ ಬಂಧುಗಳೂ, ಶೆಯಲ್ತೀಯೇಲನ ಮಗನಾದ ಜೆರುಬ್ಬಾಬೆಲನೂ ಮತ್ತು ಅವನ ಬಂಧುಗಳೂ ಇಸ್ರಾಯೇಲ್ ದೇವರ ಯಜ್ಞವೇದಿಯನ್ನು ಪುನಃ ಕಟ್ಟುವುದಕ್ಕೆ ಪ್ರಾರಂಭಿಸಿದರು.
ಅವರಲ್ಲಿ ಸ್ವಲ್ಪ ಜನರು ಕಾನಾನ್ ದೇಶದಲ್ಲಿ ಪ್ರವಾಸಿಗಳಾಗಿ ಇರುವಾಗಲೇ,
ಆ ಮಾತಿನ ಅರ್ಥವೇನಂದರೆ ಶರೀರಸಂಬಂಧವಾಗಿ ಹುಟ್ಟಿದವರೆಲ್ಲರೂ ದೇವರ ಮಕ್ಕಳಲ್ಲ. ವಾಗ್ದಾನ ಸಂಬಂಧವಾಗಿ ಹುಟ್ಟಿದವರೇ ಅಬ್ರಹಾಮನ ಸಂತತಿಯವರೆಂದು ಎಣಿಸಲ್ಪಡುವರು ಎಂಬುದು.
¶ ಸಹೋದರರೇ, ನಾವು ಇಸಾಕನಂತೆ ವಾಗ್ದಾನದ ಫಲವಾಗಿ ಹುಟ್ಟಿದ ಮಕ್ಕಳಾಗಿದ್ದೇವೆ.