TSK

TSK · ಆದಿಕಾಂಡ 13:15

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಅಲ್ಲಿ ಯೆಹೋವನು ಅಬ್ರಾಮನಿಗೆ ದರ್ಶನದಲ್ಲಿ, “ನಾನು ಈ ದೇಶವನ್ನು ನಿನ್ನ ಸಂತಾನಕ್ಕೆ ಕೊಡುವೆನು” ಅಂದನು. ತನಗೆ ದರ್ಶನಕೊಟ್ಟ ಯೆಹೋವನಿಗೆ ಅಬ್ರಾಮನು ಯಜ್ಞವೇದಿಯನ್ನು ಕಟ್ಟಿಸಿದನು.

ನಾನು ನಿನಗೂ ನಿನ್ನ ಸಂತತಿಗೂ ದೇವರಾಗಿರುವೆನೆಂದೂ ನಿನಗೋಸ್ಕರವೂ ನಿನ್ನ ಸಂತತಿಯ ಎಲ್ಲಾ ತಲತಲಾಂತರಗಳಿಗೋಸ್ಕರವೂ ಮಾಡಿಕೊಂಡ ನನ್ನ ಒಡಂಬಡಿಕೆಯನ್ನು ಸ್ಥಿರಪಡಿಸುವೆನು.

ನನ್ನ ತಂದೆಯ ಮನೆಯಿಂದಲೂ ನಾನು ಹುಟ್ಟಿದ ದೇಶದಿಂದಲೂ ನನ್ನನ್ನು ಕರತಂದು, ‘ನಿನ್ನ ಸಂತತಿಗೆ ಈ ದೇಶವನ್ನು ಕೊಡುವೆನು’ ಎಂದು ಪ್ರಮಾಣಮಾಡಿ ಹೇಳಿದ ಪರಲೋಕದ ದೇವರಾದ ಯೆಹೋವನು ನಿನ್ನ ಮುಂದೆ ತನ್ನ ದೂತನನ್ನು ಕಳುಹಿಸಿ, ನೀನು ಅಲ್ಲಿಂದ ನನ್ನ ಮಗನಿಗೋಸ್ಕರ ಹೆಣ್ಣನ್ನು ತೆಗೆದುಕೊಂಡು ಬರುವಂತೆ ಅನುಕೂಲಮಾಡುವನು.

ದೇವರು ಅಬ್ರಹಾಮನಿಗೆ ಕೊಟ್ಟಿರುವ ಆಶೀರ್ವಾದವನ್ನು ನಿನಗೂ, ನಿನ್ನ ಸಂತತಿಗೂ ಕೊಡಲಿ, ದೇವರು ಅಬ್ರಹಾಮನಿಗೆ ವಾಗ್ದಾನ ಮಾಡಿದ ಹಾಗೆ, ನೀನು ಈಗ ಪ್ರವಾಸಿಯಾಗಿರುವ ದೇಶವನ್ನು ಸ್ವತ್ತಾಗಿ ಹೊಂದುವಂತೆ ದೇವರು ನಿನ್ನನ್ನು ಆಶೀರ್ವದಿಸಿ ನಿನಗೂ ನಿನ್ನ ಸಂತತಿಗೂ ಕೊಡಲಿ” ಎಂದನು.

ನಾನು ಅಬ್ರಹಾಮ ಮತ್ತು ಇಸಾಕರಿಗೆ ವಾಗ್ದಾನ ಮಾಡಿದ ದೇಶವನ್ನು ನಿನಗೂ ನಿನ್ನ ತರುವಾಯ ಬರುವ ನಿನ್ನ ಸಂತತಿಯವರಿಗೂ ಕೊಡುವೆನು” ಎಂದು ಹೇಳಿದನು.

¶ ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ, “ನೀನು ಐಗುಪ್ತ ದೇಶದಿಂದ ಕರೆದುತಂದ ಈ ಜನರನ್ನು ನಿನ್ನ ಸಂಗಡ ಕರೆದುಕೊಂಡು ಈ ಸ್ಥಳವನ್ನು ಬಿಟ್ಟು, ‘ನಾನು ಅಬ್ರಹಾಮ, ಇಸಾಕ ಮತ್ತು ಯಾಕೋಬರಿಗೆ ಮತ್ತು ನಿಮ್ಮ ಸಂತತಿಯವರಿಗೆ ಕೊಡುವೆನೆಂದು’ ಪ್ರಮಾಣ ಮಾಡಿದ ದೇಶಕ್ಕೆ ಹೊರಟುಹೋಗು.

ಅಲ್ಲಿಂದ ಅದು ಯೊರ್ದನ್ ನದಿಗೆ ಇಳಿದು ಅದನ್ನು ಅನುಸರಿಸಿ ಲವಣಸಮುದ್ರದ ಬಳಿಯಲ್ಲಿ ಮುಗಿಯಬೇಕು. ಇವೇ ನಿಮ್ಮ ದೇಶದ ಮೇರೆಗಳು’” ಎಂದನು.

“ನಾನು ಅಬ್ರಹಾಮ್, ಇಸಾಕ್ ಮತ್ತು ಯಾಕೋಬರಿಗೆ ಪ್ರಮಾಣಮಾಡಿ ಅವರ ಸಂತತಿಯವರಿಗೆ ಕೊಡುವೆನೆಂದು ವಾಗ್ದಾನಮಾಡಿದ ದೇಶವು ಇದೇ; ನಿನಗೆ ಪ್ರತ್ಯಕ್ಷವಾಗಿ ತೋರಿಸಿದ್ದೇನೆ. ಆದರೆ ನೀನು ನದಿ ದಾಟಿ ಅಲ್ಲಿಗೆ ಹೋಗಕೂಡದು” ಎಂದು ಹೇಳಿದನು.

ನಮ್ಮ ದೇವರಾದ ನೀನು ನಿನ್ನ ಪ್ರಜೆಗಳಾದ ಇಸ್ರಾಯೇಲರ ಎದುರಿನಿಂದ ಈ ದೇಶದ ನಿವಾಸಿಗಳನ್ನು ಓಡಿಸಿ, ದೇಶವನ್ನು ನಿನ್ನ ಸ್ನೇಹಿತನಾದ ಅಬ್ರಹಾಮನ ಸಂತಾನದವರಿಗೆ ಶಾಶ್ವತ ಸ್ವತ್ತಾಗಿ ಕೊಟ್ಟಿರುವೆಯಲ್ಲಾ?.

ಯೆಹೋವನ ಆಶೀರ್ವಾದವು ಯಾರಿಗಿರುವುದೋ ಅವರು ದೇಶವನ್ನು ಅನುಭವಿಸುವರು; ಆತನ ಶಾಪವು ಯಾರಿಗಿರುವುದೋ ಅವರು ತೆಗೆದುಹಾಕಲ್ಪಡುವರು.

ಆತನು ಆ ಒಡಂಬಡಿಕೆಯನ್ನು ಅಬ್ರಹಾಮನ ಸಂಗಡ ಮಾಡಿಕೊಂಡನು; ಇಸಾಕನಿಗೆ ತನ್ನ ವಾಗ್ದಾನಗಳನ್ನು ಕೊಟ್ಟನು.

ನಿನ್ನ ಸ್ವಕೀಯಜನರು ಸ್ವಲ್ಪಕಾಲ ಮಾತ್ರ ನಿನ್ನ ಸ್ವತ್ತಾದ ಪವಿತ್ರಸ್ಥಳವನ್ನು ಅನುಭವಿಸುತ್ತಿದ್ದರು; ಈಗ ನಮ್ಮ ವೈರಿಗಳು ಅದನ್ನು ತುಳಿದುಬಿಟ್ಟಿದ್ದಾರೆ.

ಈ ದೇಶದಲ್ಲಿ ಅವನಿಗೆ ಕಾಲಿಡುವಷ್ಷ್ಟು ಭೂಮಿಯನ್ನು ಸ್ವತ್ತಾಗಿ ಕೊಡದೆ ಅವನಿಗೆ ಮಕ್ಕಳೇ ಇಲ್ಲದಿರುವಾಗ ನೀನಿರುವ ದೇಶವನ್ನು ನಿನಗೂ, ನಿನ್ನ ನಂತರ ಬರುವ ನಿನ್ನ ಸಂತತಿಗೂ ಸ್ವತ್ತಾಗಿ ಕೊಡುವೆನೆಂದು ಅವನಿಗೆ ವಾಗ್ದಾನಮಾಡಿದನು.