¶ ತೆರಹನ ವಂಶದವರ ಚರಿತ್ರೆಯು: ತೆರಹನು ಅಬ್ರಾಮ, ನಾಹೋರ್, ಹಾರಾನ್ ಎಂಬುವರನ್ನು ಪಡೆದನು. ಹಾರಾನನು ಲೋಟನನ್ನು ಪಡೆದನು.
TSK
TSK · ಆದಿಕಾಂಡ 13:8
Treasury of Scripture Knowledge references in ಕನ್ನಡ IRV.
ಆಗ ತನ್ನ ಅಣ್ಣತಮ್ಮಂದಿರಿಗೆ, “ನೀವು ದಾರಿಯಲ್ಲಿ ಜಗಳಮಾಡಬೇಡಿರಿ” ಎಂದು ಬುದ್ಧಿ ಹೇಳಿ ಅವರಿಗೆ ಹೋಗುವುದಕ್ಕೆ ಅಪ್ಪಣೆಕೊಟ್ಟನು. ಅವರು ಹೊರಟು ಹೋದರು.
¶ ಅದೇ ಸಮಯದಲ್ಲಿ ಎಬೆದನ ಮಗನಾದ ಗಾಳನೆಂಬುವನು ತನ್ನ ಬಂಧುಗಳೊಡನೆ ಶೆಕೆಮಿಗೆ ಬಂದನು. ಶೆಕೆಮಿನ ಹಿರಿಯರು ಅವನಲ್ಲಿ ಭರವಸವಿಟ್ಟರು.
ಮೃದುವಾದ ಪ್ರತ್ಯುತ್ತರವು ಸಿಟ್ಟನ್ನಾರಿಸುವುದು, ಬಿರುನುಡಿಯು ಸಿಟ್ಟನ್ನೇರಿಸುವುದು.
ವ್ಯಾಜ್ಯಕ್ಕೆ ದೂರವಿರುವವನು ಮಾನಕ್ಕೆ ಯೋಗ್ಯನು, ಜಗಳವು ಪ್ರತಿಯೊಬ್ಬ ಮೂರ್ಖನಿಗೂ ಸಹಜ.
ಮರುದಿನ ತಾವು ತಾವೇ ಹೊಡೆದಾಡಿಕೊಳ್ಳುತ್ತಿರುವಾಗ ಅವನು ಅವರಿಗೆ ಎದುರಾಗಿ ಬಂದು, ‘ಜನರೇ, ನೀವು ಸಹೋದರರಲ್ಲವೇ, ನೀವೇಕೆ ಒಬ್ಬರಿಗೊಬ್ಬರು ಅನ್ಯಾಯ ಮಾಡುತ್ತೀರಿ?’ ಎಂದು ಹೇಳಿ ಅವರನ್ನು ಸಮಾಧಾನ ಪಡಿಸಲು ಬಂದನು.
ಆದರೆ ಅದಕ್ಕೆ ಬದಲಾಗಿ ಒಬ್ಬ ವಿಶ್ವಾಸಿಯು ಮತ್ತೊಬ್ಬ ವಿಶ್ವಾಸಿಯ ವಿರುದ್ಧ ನ್ಯಾಯಾಲಯಕ್ಕೆ ಹೋಗುವುದು ಅಲ್ಲದೆ ಅದನ್ನು ಅವಿಶ್ವಾಸಿಯ ಮುಂದೆ ತೆಗೆದುಕೊಂಡು ಹೋಗುವುದು ಸರಿಯೋ?
ಗೊಣಗುಟ್ಟದೆಯೂ, ವಿವಾದಗಳಿಲ್ಲದೆಯೂ ಎಲ್ಲವನ್ನು ಮಾಡಿರಿ.
¶ ಎಲ್ಲರೊಂದಿಗೆ ಸಮಾಧಾನದಿಂದ ಜೀವಿಸಲು ಮತ್ತು ಪರಿಶುದ್ಧರಾಗಿರಲು ಪ್ರಯತ್ನಮಾಡಿರಿ. ಪರಿಶುದ್ಧತೆಯಿಲ್ಲದೆ ಯಾವನೂ ಕರ್ತನನ್ನು ಕಾಣುವುದಿಲ್ಲ.
ಆದರೆ ಮೇಲಿಂದ ಬರುವ ಜ್ಞಾನವು ಮೊದಲು ಪರಿಶುದ್ಧವಾದದ್ದು ಆಮೇಲೆ ಸಮಾಧಾನಕರವಾದದ್ದು, ವಿನಯವುಳ್ಳದ್ದು, ಸಂತೋಷವಾಗಿ ಒಪ್ಪಿಕೊಳ್ಳುವಂಥದ್ದು, ಕರುಣೆ ಮತ್ತು ಒಳ್ಳೆ ಫಲಗಳಿಂದ ತುಂಬಿರುವಂಥದ್ದು, ಪಕ್ಷಪಾತವಿಲ್ಲದ್ದು, ಪ್ರಾಮಾಣಿಕವಾದ್ದದು ಆಗಿದೆ.
ಎಲ್ಲರನ್ನೂ ಸನ್ಮಾನಿಸಿರಿ. ಸಹೋದರರನ್ನು ಪ್ರೀತಿಸಿರಿ. ದೇವರಿಗೆ ಭಯಪಡಿರಿ. ಅರಸನನ್ನು ಗೌರವಿಸಿರಿ.
ಮೊಟ್ಟಮೊದಲು ನಿಮ್ಮ ನಿಮ್ಮೊಳಗೆ ಪ್ರಾಮಾಣಿಕವಾದ ಪ್ರೀತಿಯಿರಲಿ. ಪ್ರೀತಿಯು ಬಹು ಪಾಪಗಳನ್ನು ಮುಚ್ಚುತ್ತದೆ.
ಬೆಳಕಿನಲ್ಲಿದ್ದೇನೆಂದು ಹೇಳಿಕೊಂಡು ತನ್ನ ಸಹೋದರನನ್ನು ದ್ವೇಷಿಸುವವನು ಈವರೆಗೂ ಕತ್ತಲೆಯಲ್ಲಿದ್ದಾನೆ.
¶ ಪ್ರಿಯರೇ, ನಾವು ಒಬ್ಬರನ್ನೊಬ್ಬರು ಪ್ರೀತಿಸೋಣ. ಏಕೆಂದರೆ ಪ್ರೀತಿಯು ದೇವರಿಂದ ಬಂದದ್ದಾಗಿದೆ ಮತ್ತು ಪ್ರೀತಿ ಮಾಡುವ ಪ್ರತಿಯೊಬ್ಬನು ದೇವರಿಂದ ಹುಟ್ಟಿದವನೂ ದೇವರನ್ನು ಬಲ್ಲವನೂ ಆಗಿದ್ದಾನೆ.