“ನನ್ನ ದಣಿಯಾದ ಅಬ್ರಹಾಮನ ದೇವರಾಗಿರುವ ಯೆಹೋವನಿಗೆ ಸ್ತೋತ್ರವಾಗಲಿ. ಆತನು ತನ್ನ ಪ್ರೀತಿಯನ್ನೂ ಸತ್ಯತೆಯನ್ನೂ ನನ್ನ ದಣಿಯಿಂದ ತೆಗೆಯಲಿಲ್ಲ; ನನ್ನನ್ನು ನನ್ನ ದಣಿಯ ಬಂಧುಗಳ ಮನೆಗೆ ನೆಟ್ಟನೆ ದಾರಿಯಿಂದಲೇ ಕರೆದುಕೊಂಡು ಬಂದಿದ್ದಾನೆ” ಎಂದನು.
TSK
TSK · ಆದಿಕಾಂಡ 14:20
Treasury of Scripture Knowledge references in ಕನ್ನಡ IRV.
ಪೈರು ಕೊಯ್ಯುವ ಕಾಲದಲ್ಲಿ ಐದರಲ್ಲೊಂದು ಪಾಲು ಫರೋಹನಿಗೆ ಸಲ್ಲಬೇಕು; ಮಿಕ್ಕ ನಾಲ್ಕು ಪಾಲು ನಿಮ್ಮದು; ಅದು ಬೀಜಕ್ಕೆ ಆಗುತ್ತದೆ ಮತ್ತು ನಿಮಗೂ ನಿಮ್ಮ ಮನೆಯವರಿಗೂ ನಿಮ್ಮ ಕುಟುಂಬಕ್ಕೆ ಸೇರಿದವರೆಲ್ಲರಿಗೂ ಆಹಾರಕ್ಕಾಗುತ್ತದೆ” ಎಂದು ಹೇಳಿದನು.
¶ “‘ಹೊಲದ ಬೆಳೆಯಾಗಲಿ ಇಲ್ಲವೇ ತೋಟದ ಹಣ್ಣುಗಳಾಗಲಿ ಭೂಮಿಯಿಂದುಂಟಾದ ಎಲ್ಲಾ ಆದಾಯದಲ್ಲಿ ಹತ್ತನೆಯ ಒಂದು ಪಾಲು ಯೆಹೋವನದಾಗಿರಬೇಕು, ಅದು ಯೆಹೋವನಿಗೆ ಮೀಸಲಾದದ್ದು.
ಧಾನ್ಯ, ದ್ರಾಕ್ಷಿ, ಎಣ್ಣೇಕಾಯಿ ಈ ಬೆಳೆಗಳ ದಶಮಾಂಶಗಳನ್ನೂ, ದನ ಮತ್ತು ಕುರಿಗಳ ಚೊಚ್ಚಲು ಮರಿಗಳನ್ನೂ, ಹರಕೆಮಾಡಿದ ಪದಾರ್ಥಗಳನ್ನೂ, ಕಾಣಿಕೆಗಳನ್ನೂ, ಯಾಜಕರಿಗೋಸ್ಕರ ಪ್ರತ್ಯೇಕಿಸಿದ ಪದಾರ್ಥಗಳನ್ನೂ ನಿಮ್ಮ ನಿಮ್ಮ ಊರುಗಳಲ್ಲಿ ತಿನ್ನಬಾರದು.
¶ ಪ್ರತಿ ಮೂರನೆಯ ವರ್ಷದ ಬೆಳೆಯ ದಶಮಭಾಗವನ್ನು ತಂದು ನೀವು ಇರುವ ಊರಿನಲ್ಲಿಯೇ ಕೂಡಿಸಬೇಕು.
ಅಹೀಮಾಚನು ಹತ್ತಿರ ಬಂದು ಅರಸನಿಗೆ, “ಶುಭವಾಗಲಿ” ಎಂದು ಹೇಳಿ ಸಾಷ್ಟಾಂಗನಮಸ್ಕಾರ ಮಾಡಿ, “ಅರಸನಿಗೆ ವಿರೋಧವಾಗಿ ಕೈಯೆತ್ತಿದವರನ್ನು ಸ್ವಾಧೀನಪಡಿಸಿದ ನಿನ್ನ ದೇವರಾದ ಯೆಹೋವನಿಗೆ ಸ್ತೋತ್ರವಾಗಲಿ” ಎಂದನು.
ಅವು ಸಿದ್ಧವಾದ ಮೇಲೆ ಜನರು ಕಾಣಿಕೆಗಳನ್ನೂ, ತಮ್ಮ ಆದಾಯದ ದಶಮಾಂಶವನ್ನೂ ಹಾಗು ದೇವರ ನೈವೇದ್ಯಕ್ಕಾಗಿ ಮುಡುಪಾಗಿ ಇಟ್ಟಿದ್ದನ್ನು ನಂಬಿಕೆಯಿಂದ ತಂದು ಅವುಗಳಲ್ಲಿ ಹಾಕುತ್ತಿದ್ದರು. ಈ ಎಲ್ಲಾ ಉಗ್ರಾಣಗಳ ಮೇಲ್ವಿಚಾರಣೆಗೆ ಲೇವಿಯನಾದ ಕೋನನ್ಯನು ಮುಖ್ಯಸ್ಥನಾಗಿದ್ದನು. ಅವನ ತಮ್ಮನಾದ ಶಿಮ್ಮಿಯು ದ್ವಿತೀಯ ಸ್ಥಾನದವನಾಗಿದ್ದನು.
ಆಗ ಎಲ್ಲಾ ಯೆಹೂದ್ಯರು ತಮ್ಮ ತಮ್ಮ ಧಾನ್ಯ, ದ್ರಾಕ್ಷಾರಸ, ಎಣ್ಣೆ ಇವುಗಳಲ್ಲಿ ದಶಮಾಂಶವನ್ನು ತಂದು ಭಂಡಾರಗಳಲ್ಲಿ ಹಾಕಿದರು.
ಅನುದಿನವೂ ನಮ್ಮ ಭಾರವನ್ನು ಹೊರುತ್ತಿರುವ ಕರ್ತನಿಗೆ ಸ್ತೋತ್ರವಾಗಲಿ. ನಮ್ಮನ್ನು ರಕ್ಷಿಸುವ ದೇವರು ಆತನೇ. ಸೆಲಾ
ನನ್ನ ಶರಣನಾದ ಯೆಹೋವನಿಗೆ ಕೊಂಡಾಟವಾಗಲಿ. ಆತನು ನನ್ನ ಕೈಗಳಿಗೆ ಯುದ್ಧವಿದ್ಯೆಯನ್ನು, ನನ್ನ ಬೆರಳುಗಳಿಗೆ ಕಾಳಗವನ್ನು ಕಲಿಸಿದ್ದಾನೆ.
“ನರಮನುಷ್ಯನು ದೇವರಿಂದ ಕದ್ದುಕೊಳ್ಳಬಹುದೇ? ನೀವೋ ನನ್ನಿಂದ ಕದ್ದುಕೊಳ್ಳುತ್ತಿದ್ದೀರಿ. ‘ನಿನ್ನಿಂದ ಏನು ಕದ್ದುಕೊಂಡಿದ್ದೇವೆ?’ ಎಂದು ಕೇಳುತ್ತೀರೋ. ದಶಮಾಂಶವನ್ನು, ನನಗೋಸ್ಕರ ಪ್ರತ್ಯೇಕಿಸಬೇಕಾದ ಪದಾರ್ಥ, ಇವುಗಳನ್ನೇ.
‹ವಾರಕ್ಕೆ ಎರಡಾವರ್ತಿ ಉಪವಾಸಮಾಡುತ್ತೇನೆ; ನಾನು ಸಂಪಾದಿಸಿದ ಎಲ್ಲಾದರಲ್ಲಿಯೂ ಹತ್ತರಲ್ಲೊಂದು ಪಾಲು ಕೊಡುತ್ತೇನೆ’ ಎಂದು ಪ್ರಾರ್ಥಿಸಿದನು.›
¶ ನಮ್ಮ ಕರ್ತನಾದ ಯೇಸುಕ್ರಿಸ್ತನ ದೇವರೂ ತಂದೆಯೂ ಆಗಿರುವಾತನಿಗೆ ಸ್ತೋತ್ರವಾಗಲಿ, ಆತನು ಪರಲೋಕದಲ್ಲಿನ ಸಕಲ ಆತ್ಮೀಕ ಆಶೀರ್ವಾದಗಳನ್ನು ನಮಗೆ ಕ್ರಿಸ್ತನಲ್ಲಿ ಅನುಗ್ರಹಿಸಿದ್ದಾನೆ.
¶ ನಮ್ಮ ಕರ್ತನಾದ ಯೇಸು ಕ್ರಿಸ್ತನ ತಂದೆಯೂ ದೇವರೂ ಆಗಿರುವಾತನಿಗೆ ಸ್ತೋತ್ರವಾಗಲಿ. ಆತನು ಯೇಸು ಕ್ರಿಸ್ತನನ್ನು ಸತ್ತವರೊಳಗಿಂದ ಎಬ್ಬಿಸಿದ್ದರಲ್ಲಿ, ತನ್ನ ಮಹಾ ಕರುಣಾನುಸಾರವಾಗಿ ನಮ್ಮನ್ನು ತಿರುಗಿ ಜೀವಿಸುವಂತೆ ಮಾಡಿ ಜೀವಕರವಾದ ನಿರೀಕ್ಷೆಯನ್ನು ನಮ್ಮಲ್ಲಿ ಹುಟ್ಟಿಸಿ,