TSK

TSK · ಆದಿಕಾಂಡ 17:10

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ಅದೇ ದಿನದಲ್ಲಿ ಅಬ್ರಹಾಮನು ತನ್ನ ಮಗನಾದ ಇಷ್ಮಾಯೇಲನಿಗೂ ತನ್ನ ಮನೆಯಲ್ಲಿದ್ದ ಎಲ್ಲಾ ಗಂಡಸರಿಗೂ, ಅಂದರೆ ಮನೆಯಲ್ಲಿ ಹುಟ್ಟಿದವರಿಗೆ ಮಾತ್ರವಲ್ಲದೆ, ತಾನು ಕ್ರಯಕ್ಕೆ ತೆಗೆದುಕೊಂಡವರಿಗೂ ದೇವರ ಅಪ್ಪಣೆಯಂತೆ ಸುನ್ನತಿಮಾಡಿಸಿದನು.

ಎಂಟನೆಯ ದಿನದಲ್ಲಿ ದೇವರ ಅಪ್ಪಣೆಯ ಮೇರೆಗೆ ಅಬ್ರಹಾಮನು ಇಸಾಕನಿಗೆ ಸುನ್ನತಿ ಮಾಡಿದನು.

¶ “ಆದರೆ ಅವರು ಸುನ್ನತಿ ಮಾಡಿಸಿಕೊಂಡವರಾದ್ದರಿಂದ ನಮ್ಮಲ್ಲಿಯೂ ಪುರುಷರೆಲ್ಲರು ಸುನ್ನತಿ ಮಾಡಿಸಿಕೊಳ್ಳಬೇಕನ್ನುತ್ತಾರೆ. ಹೀಗಾದರೆ ಮಾತ್ರ ಅವರು ನಮ್ಮಲ್ಲಿ ವಾಸ ಮಾಡುವುದಕ್ಕೂ ನಮ್ಮ ಸಂಗಡ ಒಂದೇ ಕುಲವಾಗುವುದಕ್ಕೂ ಒಪ್ಪುವರು.

ನಿಮ್ಮ ಬಳಿಯಲ್ಲಿ ವಾಸವಾಗಿರುವ ಪರದೇಶದವನು ಯೆಹೋವನಿಗೆ ಈ ಪಸ್ಕಹಬ್ಬವನ್ನು ಆಚರಿಸಬೇಕೆಂದು ಅಪೇಕ್ಷಿಸಿದರೆ ಅವನೂ, ಅವನಿಗೆ ಸೇರಿರುವ ಗಂಡಸರೆಲ್ಲರೂ ಸುನ್ನತಿಮಾಡಿಸಿಕೊಳ್ಳಬೇಕು. ತರುವಾಯ ಅವನು ಈ ಹಬ್ಬವನ್ನು ಆಚರಿಸುವುದಕ್ಕೆ ಸಮೀಪ ಬರಲಿ. ಅಂಥವನು ಸ್ವದೇಶದವನಂತೆಯೇ ಇರುವನು. ಆದರೆ ಸುನ್ನತಿಮಾಡಿಸಿಕೊಳ್ಳದವನು ಆ ಭೋಜನವನ್ನು ತಿನ್ನಬಾರದು.

ನಿಮ್ಮ ದೇವರಾದ ಯೆಹೋವನು ನಿಮ್ಮ ಮತ್ತು ನಿಮ್ಮ ಸಂತತಿಯವರ ಹೃದಯಕ್ಕೆ ಸುನ್ನತಿಮಾಡುವನು. ಆಗ ನೀವು ಆತನನ್ನು ಸಂಪೂರ್ಣವಾದ ಹೃದಯದಿಂದಲೂ ಮತ್ತು ಸಂಪೂರ್ಣವಾದ ಮನಸ್ಸಿನಿಂದಲೂ ಪ್ರೀತಿಸಿ ಬದುಕಿಕೊಳ್ಳುವಿರಿ.

ಯೆಹೋಶುವನು ಸುನ್ನತಿ ಮಾಡಿದ್ದಕ್ಕೆ ಕಾರಣವೇನಂದರೆ ಐಗುಪ್ತದಿಂದ ಹೊರಟು ಬಂದ ಗಂಡಸರಲ್ಲಿ ಯುದ್ಧವೀರರೆಲ್ಲರು ಆ ದೇಶವನ್ನು ಬಿಟ್ಟು ಬಂದ ನಂತರ ಅರಣ್ಯದಲ್ಲಿ ಸತ್ತು ಹೋದರು.

¶ “ಆಹಾ, ಐಗುಪ್ತರು, ಯೆಹೂದ್ಯರು, ಎದೋಮ್ಯರು, ಅಮ್ಮೋನ್ಯರು, ಮೋವಾಬ್ಯರು, ಚಂಡಿಕೆಯನ್ನು ಬಿಟ್ಟುಕೊಂಡಿರುವ ಅರಣ್ಯದ ನಿವಾಸಿಗಳು, ಅಂತು ಸುನ್ನತಿಯುಳ್ಳವರಾದರೂ ಸುನ್ನತಿಯಿಲ್ಲದ ಇವರೆಲ್ಲರನ್ನೂ ನಾನು ದಂಡಿಸುವ ದಿನಗಳು ಬರುತ್ತವೆ.

ಇದಲ್ಲದೆ ದೇವರು ಅವನ ಸಂಗಡ ಒಡಂಬಡಿಕೆಯನ್ನು ಮಾಡಿಕೊಂಡು ಅದಕ್ಕೆ ಗುರುತಾಗಿ ಸುನ್ನತಿಯನ್ನು ಏರ್ಪಡಿಸಿದನು. ಅದಕ್ಕನುಸಾರವಾಗಿ ಅಬ್ರಹಾಮನು ಇಸಾಕನನ್ನು ಪಡೆದು ಎಂಟನೆಯ ದಿನದಲ್ಲಿ ಅವನಿಗೆ ಸುನ್ನತಿಮಾಡಿದನು. ಮುಂದೆ ಇಸಾಕನು ಯಾಕೋಬನನ್ನು ಪಡೆದನು, ಯಾಕೋಬನು ಹನ್ನೆರಡು ಮಂದಿ ಪೂರ್ವಿಕರನ್ನು ಪಡೆದನು.

ಪೂರ್ವ ಕಾಲದಲ್ಲಿ ಮಾನವರ ಪಾಪವನ್ನು ದಂಡಿಸದೆ ತಾಳ್ಮೆಯಿಂದಿದ್ದ ದೇವರು, ನಂಬಿಕೆಯುಳ್ಳವರಿಗೆ ಪಾಪಕ್ಷಮೆಯನ್ನು ತರುವ ಸಲುವಾಗಿ ಯೇಸುಕ್ರಿಸ್ತನನ್ನು ರಕ್ತಧಾರೆ ಎರೆಯುವಂತೆ ಮಾಡಿದನು.

ಆತನು ಸುನ್ನತಿಯವರನ್ನು ನೀತಿವಂತರೆಂದು ನಿರ್ಣಯಿಸುವುದಕ್ಕೆ ಅವರ ನಂಬಿಕೆಯೇ ಆಧಾರ. ಹಾಗೆಯೇ ಸುನ್ನತಿಯಿಲ್ಲದವರನ್ನು ನಿರ್ಣಯಿಸುವುದಕ್ಕೂ ನಂಬಿಕೆಯೇ ಕಾರಣ.

ದೇವರು ಕರೆದ ಕಾಲದಲ್ಲಿ ಯಾವನಾದರೂ ಸುನ್ನತಿಯುಳ್ಳವನಾಗಿದ್ದನೋ ಅವನು ಸುನ್ನತಿಯಿಲ್ಲದವನಂತಾಗಬಾರದು. ದೇವರು ಕರೆದಾಗ ಯಾವನಾದರೂ ಸುನ್ನತಿಯಿಲ್ಲದವನಾಗಿದ್ದಾನೋ ಅವನು ಸುನ್ನತಿಮಾಡಿಸಿಕೊಳ್ಳಬಾರದು.

ಸುನ್ನತಿ ಮಾಡಿಸಿಕೊಳ್ಳುವ ಪ್ರತಿಯೊಬ್ಬನಿಗೆ, ನೀನು ಧರ್ಮಶಾಸ್ತ್ರದಲ್ಲಿ ಹೇಳಿರುವುದನ್ನೆಲ್ಲಾ ಮಾಡುವ ಹಂಗಿನಲ್ಲಿದ್ದೀ ಎಂದು ತಿರುಗಿ ಪ್ರಮಾಣವಾಗಿ ಹೇಳುತ್ತೇನೆ.

¶ ಆದಕಾರಣ ಹಿಂದೊಮ್ಮೆ ನೀವು ಜನ್ಮದಿಂದ ಅನ್ಯಜನರಾಗಿದ್ದೀರಿ ಎಂಬುದು ನಿಮಗೆ ನೆನಪಿರಲಿ. ಶರೀರದಲ್ಲಿ ಮನುಷ್ಯನಿಂದ ಸುನ್ನತಿಯನ್ನು ಮಾಡಿಸಿಕೊಂಡು ಸುನ್ನತಿಯವರೆನ್ನಿಸಿಕೊಳ್ಳುವವರಿಂದ ‘ಸುನ್ನತಿಯಿಲ್ಲದವರು’ ಎಂದು ಕರೆಯಲ್ಪಟ್ಟಿದ್ದೀರಿ.

ದೇವರು ಆತನಲ್ಲಿ ನಿಮಗೆ ಮನುಷ್ಯರ ಕೈಯಿಂದ ಮಾಡಲಾಗದಂತಹ ಸುನ್ನತಿಯನ್ನು ಮಾಡಿದ್ದಾನೆ. ಕ್ರಿಸ್ತನ ಸುನ್ನತಿಯು ಶಾರೀರಿಕವಾದ ಪಾಪಸ್ವಭಾವವನ್ನು ತೆಗೆದುಹಾಕುವುದೇ.