ಅಲ್ಲಿ ಯೆಹೋವನು ಅಬ್ರಾಮನಿಗೆ ದರ್ಶನದಲ್ಲಿ, “ನಾನು ಈ ದೇಶವನ್ನು ನಿನ್ನ ಸಂತಾನಕ್ಕೆ ಕೊಡುವೆನು” ಅಂದನು. ತನಗೆ ದರ್ಶನಕೊಟ್ಟ ಯೆಹೋವನಿಗೆ ಅಬ್ರಾಮನು ಯಜ್ಞವೇದಿಯನ್ನು ಕಟ್ಟಿಸಿದನು.
TSK
TSK · ಆದಿಕಾಂಡ 17:8
Treasury of Scripture Knowledge references in ಕನ್ನಡ IRV.
ನೀನೆದ್ದು, ಈ ದೇಶದ ಎಲ್ಲಾ ಕಡೆಯಲ್ಲಿಯೂ ತಿರುಗಾಡು; ಇದನ್ನು ನಿನಗೆ ಕೊಡುವೆನು” ಎಂದು ಹೇಳಿದನು.
“ನಾನು ನಿಮ್ಮಲ್ಲಿ ಪರದೇಶದವನೂ, ಪ್ರವಾಸಿಯೂ ಆಗಿದ್ದೇನೆ. ಈಗ ಮರಣಹೊಂದಿರುವ ನನ್ನ ಪತ್ನಿಯ ಸಮಾಧಿಗೋಸ್ಕರ ಸ್ವಲ್ಪ ಭೂಮಿಯನ್ನು ನನ್ನ ಸ್ವಂತಕ್ಕೆ ಕೊಡಿ” ಎಂದು ಕೇಳಿಕೊಂಡನು.
¶ ಯಾಕೋಬನು ತನ್ನ ತಂದೆಯಾದ ಇಸಾಕನ ಬಳಿಗೆ ಮಮ್ರೆಗೆ ಬಂದನು. ಮಮ್ರೆಯು ಹೆಬ್ರೋನೆಂಬ ಕಿರ್ಯತರ್ಬಕ್ಕೆ ಸೇರಿರುವುದು. ಅದು ಅಬ್ರಹಾಮ ಇಸಾಕರು ಪರದೇಶಸ್ಥರಾಗಿ ವಾಸವಾಗಿದ್ದ ಸ್ಥಳ.
ಆತನು ನನಗೆ, ‘ನಿನ್ನನ್ನು ಅಭಿವೃದ್ಧಿಪಡಿಸಿ ನಿನ್ನ ಸಂತತಿಯನ್ನು ಹೆಚ್ಚಿಸುವೆನು. ಅನೇಕ ಜನಾಂಗಗಳು ನಿನ್ನಿಂದುಟಾಗುವಂತೆ ಮಾಡುವೆನು. ನಿನ್ನ ತರುವಾಯ ನಿನ್ನ ಸಂತತಿಗೆ ಈ ದೇಶವನ್ನು ಶಾಶ್ವತ ಸೊತ್ತನ್ನಾಗಿ ಕೊಡುವೆನು’” ಎಂದು ಹೇಳಿದನು.
ನಾನು ನಿಮ್ಮನ್ನು ನನ್ನ ಪ್ರಜೆಗಳನ್ನಾಗಿ ಆರಿಸಿಕೊಂಡು ನಿಮಗೆ ದೇವರಾಗಿರುವೆನು. ಐಗುಪ್ತ್ಯರು ಮಾಡಿಸುವ ಬಿಟ್ಟೀ ಸೇವೆಯನ್ನು ನಾನು ನಿಮಗೆ ತಪ್ಪಿಸಿದಾಗ ಯೆಹೋವನೆಂಬ ನಾನೇ ನಿಮ್ಮ ದೇವರಾಗಿದ್ದೇನೆ ಎಂಬುದು ನಿಮಗೆ ತಿಳಿಯುವುದು.
ಆದುದರಿಂದ ಇಸ್ರಾಯೇಲರು ಸಬ್ಬತ್ ದಿನವನ್ನು ಆಚರಿಸಬೇಕು. ಈ ಆಚರಣೆಯು ಅವರಿಗೂ, ಅವರ ಸಂತತಿಯವರಿಗೂ ಶಾಶ್ವತವಾದ ನಿಯಮವಾಗಿದೆ.
ಅವರಿಗೆ ಅಂಗಿಗಳನ್ನು ತೊಡಿಸಿ ಅವರು ನನಗೋಸ್ಕರ ಯಾಜಕರಾಗುವುದಕ್ಕಾಗಿ ನೀನು ಅವರ ತಂದೆಯನ್ನು ಅಭಿಷೇಕಿಸಿದಂತೆಯೇ ಅವರನ್ನೂ ಅಭಿಷೇಕಿಸಬೇಕು. ಈ ಅಭಿಷೇಕದಿಂದ ಯಾಜಕತ್ವವು ಅವರಿಗೂ ಅವರ ಸಂತತಿಯವರಿಗೂ ಶಾಶ್ವತವಾಗಿರುವುದು” ಎಂದು ಹೇಳಿದನು.
ಇಸ್ರಾಯೇಲರ ಎಲ್ಲಾ ದೋಷಗಳನ್ನು ನಿವಾರಣೆಮಾಡುವುದಕ್ಕಾಗಿ ಅವರಿಗೋಸ್ಕರ ವರ್ಷಕ್ಕೆ ಒಂದಾವರ್ತಿ ದೋಷಪರಿಹಾರವನ್ನು ಮಾಡಬೇಕೆಂಬುದೇ ನಿಮಗೆ ಶಾಶ್ವತನಿಯಮ” ಎಂದು ಹೇಳಿದನು. ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆಯೇ ಆರೋನನು ಮಾಡಿದನು.
¶ ಮೋಶೆಯು ತನ್ನ ಮಾವನಾಗಿದ್ದ ಮಿದ್ಯಾನ್ಯನಾದ ರೆಗೂವೇಲನ ಮಗನಾದ ಹೋಬಾಬನಿಗೆ, “ಯೆಹೋವನು ನಮಗೆ ಕೊಡುತ್ತೇನೆಂದು ವಾಗ್ದಾನ ಮಾಡಿದ ದೇಶಕ್ಕೆ ನಾವು ಪ್ರಯಾಣಮಾಡುತ್ತಾ ಇದ್ದೇವೆ. ಇಸ್ರಾಯೇಲರಿಗೆ ಒಳಿತನ್ನು ಉಂಟುಮಾಡುತ್ತೇನೆಂದು ಯೆಹೋವನು ತಾನೇ ಹೇಳಿದ್ದಾನೆ. ಆದುದರಿಂದ ನೀನೂ ನಮ್ಮ ಜೊತೆಯಲ್ಲಿ ಬಾ; ನಮ್ಮಿಂದ ನಿನಗೂ ಒಳ್ಳೆಯದಾಗುವುದು” ಎಂದು ಹೇಳಿದನು.
¶ ಯೆಹೋವನು ಮೋಶೆಗೆ, “ನೀನು ಈ ಅಬಾರೀಮ್ ಬೆಟ್ಟವನ್ನು ಹತ್ತಿ ನಾನು ಇಸ್ರಾಯೇಲರಿಗೆ ವಾಗ್ದಾನಮಾಡಿದ ದೇಶವನ್ನು ನೋಡು.
ಯಾಕೆಂದರೆ ನೀವು ಕೇವಲ ನಿಮ್ಮ ದೇವರಾದ ಯೆಹೋವನ ಪರಿಶುದ್ಧ ಜನರೇ. ಆತನು ಭೂಲೋಕದಲ್ಲಿರುವ ಸಮಸ್ತ ಜನಾಂಗಗಳಲ್ಲಿ ನಿಮ್ಮನ್ನೇ ಸ್ವಕೀಯ ಜನರಾಗುವುದಕ್ಕೆ ಆರಿಸಿಕೊಂಡಿದ್ದಾನೆ ಎಂಬುದು ನಿಮಗೆ ತಿಳಿದಿರಬೇಕು.
ನಿಮ್ಮ ಪೂರ್ವಿಕರಾದ ಅಬ್ರಹಾಮ್, ಇಸಾಕ್ ಮತ್ತು ಯಾಕೋಬರಿಗೆ ವಾಗ್ದಾನ ಮಾಡಿದಂತೆಯೂ ನಿಮ್ಮನ್ನು ತನಗೆ ಸ್ವಕೀಯಜನರನ್ನಾಗಿಯೂ, ತನ್ನನ್ನು ನಿಮಗೆ ದೇವರನ್ನಾಗಿಯೂ ಸ್ಥಾಪಿಸಿಕೊಳ್ಳುತ್ತಾನೆ.
“ನೀನು ಈ ಅಬಾರೀಮ್ ಬೆಟ್ಟಗಳನ್ನು ಅಂದರೆ ಮೋವಾಬ್ಯರ ದೇಶದಲ್ಲಿ ಯೆರಿಕೋ ಪಟ್ಟಣಕ್ಕೆ ಎದುರಾಗಿರುವ ನೆಬೋ ಬೆಟ್ಟವನ್ನು ಹತ್ತಿ, ನಾನು ಇಸ್ರಾಯೇಲರಿಗೆ ಸ್ವದೇಶವಾಗುವುದಕ್ಕೆ ಕೊಡುವ ಕಾನಾನ್ ದೇಶವನ್ನು ನೋಡು.
“ನನ್ನ ಸೇವಕನಾದ ಮೋಶೆ ಸತ್ತನು; ನೀನು ಈಗ ಹೊರಟು ಸಮಸ್ತ ಇಸ್ರಾಯೇಲ್ ಜನರೊಂದಿಗೆ ಈ ಯೊರ್ದನ್ ನದಿಯನ್ನು ದಾಟಿ, ನಾನು ಅವರಿಗೆ ಕೊಡುವ ದೇಶಕ್ಕೆ ಹೋಗು.
ನೀವು ಇನ್ನೂ ಬಹು ಜನರು ಕಾನಾನ್ ದೇಶದಲ್ಲಿ ಪ್ರವಾಸಿಗಳು ಆಗಿರುವಾಗಲೇ
ಆತನು ಆ ಒಡಂಬಡಿಕೆಯನ್ನು ಅಬ್ರಹಾಮನ ಸಂಗಡ ಮಾಡಿಕೊಂಡನು; ಇಸಾಕನಿಗೆ ತನ್ನ ವಾಗ್ದಾನಗಳನ್ನು ಕೊಟ್ಟನು.
ಕಲ್ಲಾದ ಹೃದಯವನ್ನು ಅವರೊಳಗಿಂದ ತೆಗೆದು ಮೃದುವಾದ ಹೃದಯವನ್ನು ಅವರಿಗೆ ಅನುಗ್ರಹಿಸುವೆನು; ಅವರು ನನಗೆ ಪ್ರಜೆಯಾಗಿರುವರು, ನಾನು ಅವರಿಗೆ ದೇವರಾಗಿರುವೆನು.
ಅವರು ಯೆರೂಸಲೇಮಿನೊಳಗೆ ವಾಸಿಸುವರು; ಸತ್ಯಸಂಧತೆಯಿಂದಲೂ ಮತ್ತು ಸದ್ಧರ್ಮದಿಂದಲೂ ಅವರು ನನಗೆ ಪ್ರಜೆಯಾಗಿರುವರು. ಹಾಗೆಯೇ ನಾನು ಅವರಿಗೆ ದೇವರಾಗಿರುವೆನು.”