¶ ಮನುಷ್ಯರು ಕಟ್ಟುತ್ತಿದ್ದ ಆ ಪಟ್ಟಣವನ್ನೂ, ಗೋಪುರವನ್ನೂ ನೋಡುವುದಕ್ಕೆ ಯೆಹೋವನು ಇಳಿದು ಬಂದನು.
TSK
TSK · ಆದಿಕಾಂಡ 18:21
Treasury of Scripture Knowledge references in ಕನ್ನಡ IRV.
ಆದಕಾರಣ ಅವರನ್ನು ಐಗುಪ್ತ್ಯರ ಕೈಯೊಳಗಿಂದ ಬಿಡಿಸುವುದಕ್ಕೂ ಆ ದೇಶದಿಂದ ಅವರನ್ನು ಹಾಲೂ ಮತ್ತು ಜೇನೂ ಹರಿಯುವ ವಿಸ್ತಾರವಾದ ಒಳ್ಳೆಯ ದೇಶಕ್ಕೆ ಅಂದರೆ ಕಾನಾನ್ಯರು, ಹಿತ್ತಿಯರು, ಅಮೋರಿಯರು, ಪೆರಿಜೀಯರು, ಹಿವ್ವಿಯರು, ಯೆಬೂಸಿಯರು ವಾಸವಾಗಿರುವ ದೇಶಕ್ಕೆ ನಡೆಸಿಕೊಂಡು ಹೋಗುವುದಕ್ಕೂ ಇಳಿದು ಬಂದಿದ್ದೇನೆ.
ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಈ ನಲ್ವತ್ತು ವರ್ಷ ಅರಣ್ಯದಲ್ಲಿ ನಡಿಸಿದ್ದನ್ನೂ, ನೀವು ಆತನ ಆಜ್ಞೆಗಳನ್ನು ಕೈಕೊಳ್ಳುತ್ತಿರೋ ಇಲ್ಲವೋ ಎಂದು ತಿಳಿದುಕೊಳ್ಳುವುದಕ್ಕೆ ನಿಮ್ಮನ್ನು ಕಷ್ಟಕ್ಕೆ ಒಳಪಡಿಸಿ, ನಿಮ್ಮ ಮನೋಭಾವವನ್ನು ಪರೀಕ್ಷಿಸಿದ್ದನ್ನೂ ನೆನಪಿಗೆ ತಂದುಕೊಳ್ಳಿರಿ.
“ದೇವಾಧಿದೇವನಾದ ಯೆಹೋವನು ಇದಕ್ಕೆ ಸಾಕ್ಷಿ; ಆ ದೇವಾಧಿದೇವನಾದ ಯೆಹೋವನಿಗೆ ಇದು ಗೊತ್ತಿದೆ. ಇಸ್ರಾಯೇಲರಿಗೂ ಗೊತ್ತಾಗುವುದು. ನಾವು ದ್ರೋಹಿಗಳು, ಯೆಹೋವನ ವಿರುದ್ಧವಾಗಿ ಪಾಪಮಾಡಿದವರು ಆಗಿದ್ದರೆ ಯೆಹೋವನು ನಮ್ಮನ್ನು ಈ ಹೊತ್ತೇ ನಮ್ಮ ಜೀವವನ್ನು ತೆಗೆದುಬಿಡಲಿ.
ನಮ್ಮ ದ್ರೋಹಗಳನ್ನು ನಿನ್ನ ಮುಂದೆಯೂ, ನಮ್ಮ ಗುಪ್ತಪಾಪಗಳನ್ನು ನಿನ್ನ ತೇಜೋದೃಷ್ಟಿಯಲ್ಲಿಯೂ ಇಟ್ಟುಕೊಂಡಿದ್ದಿ.
ಯೆಹೂದದ ಪಾಪವು ಉಕ್ಕಿನ ಕಂಠದಿಂದಲೂ ಹಾಗೂ ವಜ್ರದ ಮೊನೆಯಿಂದಲೂ ಲಿಖಿತವಾಗಿದೆ. ಅದು ಅವರ ಹೃದಯದ ಹಲಗೆಯಲ್ಲಿಯೂ, ಅವರ ಯಜ್ಞವೇದಿಗಳ ಕೊಂಬುಗಳಲ್ಲಿಯೂ ಕೆತ್ತಿದೆ.
“ನೀನು ಇಲ್ಲಿಂದ ಹೊರಟು ಆ ದೊಡ್ಡ ಪಟ್ಟಣವಾದ ನಿನೆವೆಗೆ ಹೋಗಿ ಅದನ್ನು ಕಟುವಾಗಿ ಖಂಡಿಸಿ ಹೇಳು, ಏಕೆಂದರೆ ಅಲ್ಲಿರುವ ನಿವಾಸಿಗಳ ದುಷ್ಟತನವು ನನ್ನ ಸನ್ನಿಧಿಗೆ ಮುಟ್ಟಿದೆ” ಎಂದು ಅಪ್ಪಣೆಮಾಡಿದನು.
ಆ ಕಾಲದಲ್ಲಿ ನಾನು ದೀಪಗಳನ್ನು ಹಿಡಿದು, ಯೆರೂಸಲೇಮನ್ನೆಲ್ಲಾ ಹುಡುಕಿಬಿಡುವೆನು; ಯೆಹೋವನು ಮೇಲನ್ನಾಗಲಿ, ಕೇಡನ್ನಾಗಲಿ ಮಾಡನು ಎಂದು ಮನಸ್ಸಿನೊಳಗೆ ಅಂದುಕೊಳ್ಳುವವರಾಗಿ, ಮಡ್ಡಿಯಂತೆ ಮಂದವಾಗಿರುವ ದ್ರಾಕ್ಷಾರಸಕ್ಕೆ ಸಮಾನರಾದ ಜನರನ್ನು ದಂಡಿಸುವೆನು.
‹ನಾನು ನನ್ನ ಸ್ವಂತ ಚಿತ್ತದಂತೆ ಮಾಡುವುದಕ್ಕಾಗಿ ಬಂದಿಲ್ಲ, ಆದರೆ, ನನ್ನನ್ನು ಕಳುಹಿಸಿದಾತನ ಚಿತ್ತವನ್ನೇ ನೆರವೇರಿಸುವುದಕ್ಕೆ ಪರಲೋಕದಿಂದ ಇಳಿದು ಬಂದಿರುವೆ.›
ಯಾಕೆಂದರೆ ಕರ್ತನು ತಾನೇ ಆಜ್ಞಾಘೋಷದೊಡನೆಯೂ, ಪ್ರಧಾನದೂತನ ಶಬ್ದದೊಡನೆಯೂ, ದೇವರ ತುತ್ತೂರಿ ಧ್ವನಿಯೊಡನೆಯೂ ಆಕಾಶದಿಂದ ಇಳಿದುಬರುವನು. ಆಗ ಕ್ರಿಸ್ತನಲ್ಲಿ ಸತ್ತವರು ಮೊದಲು ಎದ್ದು ಬರುವರು.