ಅವರು ಬೋರಲುಬಿದ್ದು, “ದೇವರೇ, ಎಲ್ಲಾ ಮನುಷ್ಯರ ಆತ್ಮಗಳಿಗೆ ದೇವರಾಗಿರುವವನೇ, ಇವರಲ್ಲಿ ದೋಷಿಯಾದವನು ಒಬ್ಬನೇ ಆಗಿರಲಾಗಿ ಸರ್ವಸಮೂಹದವರೆಲ್ಲರ ಮೇಲೆ ಕೋಪಗೊಳ್ಳಬಹುದೋ?” ಎಂದು ಬಿನ್ನೈಸಿದನು.
TSK
TSK · ಆದಿಕಾಂಡ 18:25
Treasury of Scripture Knowledge references in ಕನ್ನಡ IRV.
ಹೊಲಗಳೂ, ಅವುಗಳ ಪೈರುಗಳೂ ಉಲ್ಲಾಸಿಸಲಿ; ಮತ್ತು ವನದ ಮರಗಳು ಉತ್ಸಾಹ ಧ್ವನಿ ಮಾಡಲಿ.
ದೇವರು ಅನ್ಯಾಯವಾದ ತೀರ್ಪನ್ನು ಕೊಡುವನೋ? ಸರ್ವಶಕ್ತನಾದ ದೇವರು ನೀತಿಯನ್ನು ಡೊಂಕುಮಾಡುವನೋ?
ಎಲ್ಲಾ ಒಂದೇ. ಆದಕಾರಣ ‘ನಾನು, ನಿರ್ದೋಷಿಯನ್ನೂ, ದೋಷಿಯನ್ನೂ ಆತನು ನಾಶ ಮಾಡುತ್ತೇನೆ’ ಎಂದು ಹೇಳುತ್ತಾನೆ.
ಹೌದು, ದೇವರು ಕೆಟ್ಟದ್ದನ್ನು ನಡೆಸುವುದೇ ಇಲ್ಲ, ಸರ್ವಶಕ್ತನಾದ ದೇವರು ನೀತಿಯನ್ನು ಡೊಂಕುಮಾಡುವುದೇ ಇಲ್ಲ.
ದೋಷಿಯು ಮನಸ್ಸನ್ನು ಬದಲಾಯಿಸಿಕೊಳ್ಳದೆ ಹೋದರೆ ಆತನು ತನ್ನ ಕತ್ತಿಯನ್ನು ಮಸೆಯುವನು. ತನ್ನ ಬಿಲ್ಲನ್ನು ಬಗ್ಗಿಸಿ ಸಿದ್ಧಮಾಡಿದ್ದಾನೆ.
ದೇವರು ತಾನೇ ನ್ಯಾಯಾಧಿಪತಿ; ಆತನು ನೀತಿಸ್ವರೂಪನೆಂದು ಆಕಾಶಮಂಡಲವು ಘೋಷಿಸುತ್ತದೆ. ಸೆಲಾ
ಎಲ್ಲಾ ನಿವಾಸಿಗಳೊಡನೆ ಭೂಮಿಯು ಕರಗಿ ಹೋದರೂ, ಅದರ ಸ್ತಂಭಗಳನ್ನು ಸ್ಥಾಪಿಸುವವನು ನಾನೇ” ಎಂಬುದು. ಸೆಲಾ
ಆತನು ಭೂನಿವಾಸಿಗಳಿಗೆ ನ್ಯಾಯತೀರಿಸಲಿಕ್ಕೆ ಬರುತ್ತಾನೆ; ಆತನು ಲೋಕಕ್ಕೆ ನೀತಿಗನುಸಾರವಾಗಿಯೂ, ಜನಾಂಗಗಳಿಗೆ ಯಥಾರ್ಥವಾಗಿಯೂ ತೀರ್ಪುಕೊಡುವನು.
¶ ಪಾಪಿಯು ನೂರು ಸಲ ಅಧರ್ಮ ಮಾಡಿ ಬಹು ಕಾಲ ಬದುಕಿದರೂ, ದೇವರ ಮುಂದೆ ಹೆದರಿ, ಆತನಲ್ಲಿ ಭಯಭಕ್ತಿಯುಳ್ಳವರಿಗೆ ಒಳ್ಳೆಯದೇ ಆಗುವುದೆಂದು ಬಲ್ಲೆನು.
ಸಜ್ಜನರು ನಾಶವಾಗುತ್ತಾರೆ, ಯಾರೂ ಮನಸ್ಸಿಗೆ ತಾರರು; ಸದ್ಭಕ್ತರು ಗತಿಸುತ್ತಾರೆ, ಆಹಾ, ಶಿಷ್ಟರು ಕೇಡಿನಿಂದ ಪಾರಾಗಿದ್ದಾರೆ ಎಂದು ಯಾರೂ ಯೋಚಿಸರು.
ಆಗ ಶಿಷ್ಟರಿಗೂ, ದುಷ್ಟರಿಗೂ, ದೇವರನ್ನು ಸೇವಿಸುವವರಿಗೂ, ಸೇವಿಸದೇ ಇರುವವರಿಗೂ ಇರುವ ವ್ಯತ್ಯಾಸವನ್ನು ಮತ್ತೆ ಕಾಣುವಿರಿ.
¶ ಆದರೆ ನಮ್ಮ ಅನ್ಯಾಯದ ನಡವಳಿಕೆಯಿಂದ ದೇವರು ನೀತಿವಂತನೆಂದು ಪ್ರಸಿದ್ಧಿಗೆ ಬರುವುದಾದರೆ ನಾವು ಏನು ಹೇಳೋಣ? ಉಗ್ರದಂಡನೆಯನ್ನು ಮಾಡುವ ದೇವರು ಅನ್ಯಾಯಗಾರನೋ? ಎಂದಿಗೂ ಇಲ್ಲ. ಈ ಮಾತನ್ನು ಮನುಷ್ಯನ ರೀತಿಯಲ್ಲಿ ಆಡುತ್ತಿದ್ದೇನೆ.