TSK

TSK · ಆದಿಕಾಂಡ 18:30

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಅವನು ತಿರುಗಿ ದೇವರಿಗೆ, “ಸ್ವಾಮೀ, ಸಿಟ್ಟಾಗಬಾರದು; ಇನ್ನೊಂದು ಸಾರಿ ಮಾತನಾಡುತ್ತೇನೆ. ಇನ್ನು ಒಂದೇ ಸಾರಿ ಈ ಉಣ್ಣೆಯಿಂದ ನಿನ್ನನ್ನು ಪರೀಕ್ಷಿಸುವುದಕ್ಕೆ ಅಪ್ಪಣೆಯಾಗಲಿ; ಈ ಉಣ್ಣೆ ಮಾತ್ರವೇ ಒಣಗಿದ್ದು ನೆಲದ ಮೇಲೆಲ್ಲಾ ಹನಿ ಬಿದ್ದಿರಲಿ” ಅಂದನು.

“ಅಯ್ಯೋ, ನಾನು ಅಲ್ಪನೇ ಸರಿ, ನಿನಗೆ ಪ್ರತ್ಯುತ್ತರವಾಗಿ ಏನು ಹೇಳಲಿ? ಬಾಯಿಯ ಮೇಲೆ ಕೈಯಿಟ್ಟುಕೊಳ್ಳುವೆನು.

ಯೆಹೋವನೇ, ನೀನು ದೀನರ ಕೋರಿಕೆಯನ್ನು ನೆರವೇರಿಸುವವನೇ ಆಗಿದ್ದಿ; ಅವರ ಹೃದಯವನ್ನು ಧೈರ್ಯಪಡಿಸುತ್ತಿ; ಅವರ ಮೊರೆಗೆ ಕಿವಿಗೊಡುತ್ತಿ.

ಆಗ ನಾನು, “ಅಯ್ಯೋ, ನನ್ನ ಗತಿಯನ್ನು ಏನು ಹೇಳಲಿ ನಾಶವಾದೆನಲ್ಲಾ! ನಾನು ಹೊಲಸು ತುಟಿಯವನು. ಹೊಲಸು ತುಟಿಯವರ ಮಧ್ಯದಲ್ಲಿ ವಾಸಿಸುವವನು. ಇಂಥ ನನ್ನ ಕಣ್ಣುಗಳು ರಾಜಾಧಿರಾಜನನ್ನು, ಸೇನಾಧೀಶ್ವರನಾದ ಯೆಹೋವನನ್ನು ಕಂಡೆವಲ್ಲಾ!” ಎಂದು ಕೂಗಿಕೊಳ್ಳಲು,

ಆದ್ದರಿಂದ ಯಾರೂ ಕದಲಿಸಲಾರದ ರಾಜ್ಯವನ್ನು ಪಡೆದುಕೊಳ್ಳುವವರಾದ ನಾವು ಕೃತಜ್ಞತೆಯುಳ್ಳವರಾಗಿ, ಆತನಿಗೆ ಸಮರ್ಪಕವಾದ ಆರಾಧನೆಯನ್ನು ಭಕ್ತಿಯಿಂದಲೂ ಮತ್ತು ಭಯದಿಂದಲೂ ಮಾಡೋಣ.