¶ ಲೋಟನು ಕಣ್ಣೆತ್ತಿ ನೋಡಲಾಗಿ, ಯೊರ್ದನ್ ಹೊಳೆಯ ಸುತ್ತಲಿನ ಪ್ರದೇಶವು ಚೋಗರಿನವರೆಗೆ ನೀರಾವರಿಯ ಪ್ರದೇಶವೆಂದು ತಿಳಿದುಕೊಂಡನು. ಯೆಹೋವನು ಸೊದೋಮ್ ಗೊಮೋರ ಪಟ್ಟಣಗಳನ್ನು ನಾಶಮಾಡುವುದಕ್ಕಿಂತ ಮೊದಲು ಆ ಸೀಮೆಯು ಯೆಹೋವನ ವನದಂತೆಯೂ, ಐಗುಪ್ತ ದೇಶದಂತೆಯೂ ನೀರಾವರಿಯ ಪ್ರದೇಶವಾಗಿತ್ತು.
TSK
TSK · ಆದಿಕಾಂಡ 19:22
Treasury of Scripture Knowledge references in ಕನ್ನಡ IRV.
ಆ ಪುರುಷನು ತಾನು ಗೆಲ್ಲದೆ ಇರುವುದನ್ನು ಕಂಡು ಯಾಕೋಬನ ತೊಡೆಯ ಕೀಲನ್ನು ಮುಟ್ಟಿದ್ದರಿಂದ ಯಾಕೋಬನು ಅವನ ಸಂಗಡ ಹೋರಾಡುತ್ತಿರುವಾಗಲೇ ಅವನ ತೊಡೆಯ ಕೀಲು ತಪ್ಪಿತು.
ಬಿಡು, ನಾನು ಅವರನ್ನು ನಾಶಮಾಡಿ, ಅವರ ಹೆಸರನ್ನು ಭೂಮಿಯ ಮೇಲೆ ಉಳಿಯದಂತೆ ಮಾಡುವೆನು. ತರುವಾಯ ಅವರಿಗಿಂತಲೂ ಮಹಾ ಬಲಿಷ್ಠ ಜನಾಂಗವು ನಿನ್ನಿಂದುಂಟಾಗುವಂತೆ ಮಾಡುವೆನು” ಎಂದು ಹೇಳಿದನು.
ಅತ್ಯುನ್ನತನಾದ ದೇವರ ಮೊರೆಹೊಕ್ಕವನು, ಸರ್ವಶಕ್ತನ ಆಶ್ರಯದಲ್ಲಿ ಸುರಕ್ಷಿತನಾಗಿರುವನು.
ಯೆಹೋವನು ಹೀಗನ್ನುತ್ತಾನೆ, “ರಸ ದೊರೆಯಬಹುದಾದ ದ್ರಾಕ್ಷಿಯ ಗೊಂಚಲನ್ನು ಒಬ್ಬನು ನೋಡಿ, ‘ಹಾಳುಮಾಡಬೇಡ, ಅದರಲ್ಲಿ ಪ್ರಯೋಜನವಿದೆ’ ಎನ್ನುವಂತೆ, ನಾನು ನನ್ನ ಸೇವಕರನ್ನು ಲಕ್ಷ್ಯಕ್ಕೆ ತಂದು, ಇವರನ್ನೆಲ್ಲಾ ಹಾಳುಮಾಡಬಾರದು ಎಂದು ಅಂದುಕೊಳ್ಳುವೆನು,
ಆತನು ಅಲ್ಲಿ ಕೆಲವು ರೋಗಿಗಳ ಮೇಲೆ ಕೈಯಿಟ್ಟು ಸ್ವಸ್ಥಮಾಡಿದನೇ ಹೊರತು ಬೇರೆ ಯಾವ ಮಹತ್ಕಾರ್ಯವನ್ನೂ ಮಾಡುವುದಕ್ಕಾಗಲಿಲ್ಲ.
ತಂದೆಯಾದ ದೇವರಿಂದ ಮತ್ತು ನಮ್ಮ ರಕ್ಷಕನಾದ ಯೇಸು ಕ್ರಿಸ್ತನಿಂದ ನಿನಗೆ ಕೃಪೆ, ಕರುಣೆ ಮತ್ತು ಶಾಂತಿ ದೊರಕಲಿ.