ನೋಡಿದ ಮೇಲೆ ಯೆಹೋವನು, “ಇವರು ಒಂದೇ ಜನಾಂಗ; ಇವರೆಲ್ಲರಿಗೂ ಒಂದೇ ಭಾಷೆ. ಪ್ರಾರಂಭದಲ್ಲೇ ಇವರು ಇಷ್ಟು ದೊಡ್ಡ ಯೋಜನೆಯೊಂದಿಗೆ ಒಟ್ಟಾಗಿ ಕೆಲಸ ಮಾಡಲಾರಂಭಿಸಿದ್ದಾರೆ. ಇನ್ನು ಮುಂದೆ ಇವರು ಏನು ಮಾಡಲು ಉದ್ದೇಶಿಸಿದರೂ ಇವರಿಗೆ ಯಾವುದೂ ಅಸಾಧ್ಯವಾಗುವುದಿಲ್ಲ.
TSK
TSK · ಆದಿಕಾಂಡ 19:9
Treasury of Scripture Knowledge references in ಕನ್ನಡ IRV.
ಆ ಮನುಷ್ಯನು ಅವನಿಗೆ, “ನಿನ್ನನ್ನು ನಮ್ಮ ಮೇಲೆ ಅಧಿಕಾರಿಯನ್ನಾಗಿಯೂ, ನ್ಯಾಯಾಧಿಪತಿಯನ್ನಾಗಿಯೂ, ಇಟ್ಟವರು ಯಾರು? ಆ ಐಗುಪ್ತ್ಯನನ್ನು ಕೊಂದು ಹಾಕಿದಂತೆ ನನ್ನನ್ನೂ ಕೊಂದುಹಾಕಬೇಕೆಂದಿದ್ದಿಯೋ?” ಅಂದನು. ಈ ಮಾತನ್ನು ಕೇಳಿ ಮೋಶೆಯು ಭಯಪಟ್ಟು, “ನಿಶ್ಚಯವಾಗಿ ನಾನು ಮಾಡಿದ ಕಾರ್ಯವು ಬಯಲಿಗೆ ಬಂತಲ್ಲಾ” ಅಂದುಕೊಂಡನು.
“ಇಲ್ಲಿ ಬಾ, ನಿನ್ನ ಮಾಂಸವನ್ನು ಮೃಗ ಪಕ್ಷಿಗಳಿಗೆ ಹಂಚಿಕೊಡುತ್ತೇನೆ” ಅಂದನು.
ಧರ್ಮನಿಂದಕನನ್ನು ಶಿಕ್ಷಿಸುವವನು ತನ್ನನ್ನು ಅವಮಾನಕ್ಕೆ ಗುರಿಮಾಡಿಕೊಳ್ಳುವನು, ಕೆಟ್ಟವನನ್ನು ಗದರಿಸುವವನಿಗೇ ಕಳಂಕವಾಗುವುದು.
ಮೂರ್ಖತನದಲ್ಲಿ ಮುಳುಗಿರುವ ಮೂಢನನ್ನು ಎದುರಾಗುವುದಕ್ಕಿಂತಲೂ, ಮರಿಗಳನ್ನು ಕಳೆದುಕೊಂಡ ಕರಡಿಯನ್ನು ಎದುರಾಗುವುದು ಲೇಸು.
¶ ಈ ಲೋಕದಲ್ಲಿ ನಡೆಯುವ ಎಲ್ಲಾ ಸಂಗತಿಗಳಿಗೂ ಕೆಟ್ಟ ಪ್ರತಿಫಲ ಉಂಟು ಮತ್ತು ಎಲ್ಲರಿಗೂ ಒಂದೇ ಗತಿಯಾಗುವುದು. ಇದಲ್ಲದೆ ಮನುಷ್ಯರ ಹೃದಯದಲ್ಲಿ ಕೆಟ್ಟತನವು ತುಂಬಿದೆ. ಅವರು ಬದುಕಿರುವ ತನಕ ಹುಚ್ಚುತನವು ಅವರ ಮನಸ್ಸನ್ನು ಹಿಡಿದಿರುವುದು. ಅನಂತರ ಅವರು ಸಾಯುತ್ತಾರೆ.
ಅವರು, ‘ಹತ್ತಿರ ಬರಬೇಡ, ನಾನು ಮಡಿವಂತನು, ನೀನು ಸೇರತಕ್ಕವನಲ್ಲ’ ಎನ್ನುತ್ತಾ, ಅಂತು ಪ್ರತಿನಿತ್ಯವೂ ಮುಖದೆದುರಿಗೆ ನನ್ನನ್ನು ಕೆಣಕುತ್ತಾ, ನನ್ನ ಮೂಗಿಗೆ ದಿನವೆಲ್ಲಾ ಉರಿಯುವ ಬೆಂಕಿಯ ಹೊಗೆಯಾಗಿದ್ದಾರೆ.
ಅಸಹ್ಯಕಾರ್ಯಗಳನ್ನು ಮಾಡಿ ಅವಮಾನಕ್ಕೆ ಗುರಿಯಾದರೂ ಎಳ್ಳಷ್ಟೂ ನಾಚಿಕೆಪಡಲಿಲ್ಲ, ಲಜ್ಜೆಯ ಗಂಧವನ್ನೂ ತಿಳಿಯಲಿಲ್ಲ. ಆದಕಾರಣ ನಾನು ದಂಡಿಸುವ ಸಮಯದಲ್ಲಿ ಅವರು ಮುಗ್ಗರಿಸುವರು, ಬೀಳುವವರ ಸಂಗಡ ಬಿದ್ದೇ ಹೋಗುವರು” ಎಂದು ಯೆಹೋವನು ನುಡಿಯುತ್ತಾನೆ.
¶ ಆಗ ನೆಬೂಕದ್ನೆಚ್ಚರನು ಕೋಪೋದ್ರೇಕದಿಂದ ಮುಖಭಾವವನ್ನು ಶದ್ರಕ್, ಮೇಶಕ್, ಅಬೇದ್ನೆಗೋ ಎಂಬುವವರ ಕಡೆಗೆ ತಿರುಗಿಸಿಕೊಂಡು ಬೆಂಕಿಯನ್ನು ನಿತ್ಯಕ್ಕಿಂತ ಏಳರಷ್ಟು ಹೆಚ್ಚಾಗಿ ಉರಿಸಬೇಕು ಎಂದು ಆಜ್ಞಾಪಿಸಿದನು.
ಮರುದಿನ ತಾವು ತಾವೇ ಹೊಡೆದಾಡಿಕೊಳ್ಳುತ್ತಿರುವಾಗ ಅವನು ಅವರಿಗೆ ಎದುರಾಗಿ ಬಂದು, ‘ಜನರೇ, ನೀವು ಸಹೋದರರಲ್ಲವೇ, ನೀವೇಕೆ ಒಬ್ಬರಿಗೊಬ್ಬರು ಅನ್ಯಾಯ ಮಾಡುತ್ತೀರಿ?’ ಎಂದು ಹೇಳಿ ಅವರನ್ನು ಸಮಾಧಾನ ಪಡಿಸಲು ಬಂದನು.