¶ ಯೆಹೋವನಾದ ದೇವರು ಉಂಟುಮಾಡಿದ ಎಲ್ಲಾ ಕಾಡುಮೃಗಗಳಲ್ಲಿ ಸರ್ಪವು ಅತಿ ಯುಕ್ತಿಯುಳ್ಳದ್ದಾಗಿತ್ತು. ಸರ್ಪವು ಸ್ತ್ರೀಯ ಬಳಿಗೆ ಬಂದು, “ಏನಮ್ಮಾ, ತೋಟದಲ್ಲಿರುವ ಯಾವ ಮರದ ಹಣ್ಣನ್ನು ನೀವು ತಿನ್ನಬಾರದೆಂದು ದೇವರು ಅಪ್ಪಣೆ ಕೊಟ್ಟಿರುವುದು ನಿಜವೋ?” ಎಂದು ಕೇಳಲು.
TSK
TSK · ಆದಿಕಾಂಡ 2:17
Treasury of Scripture Knowledge references in ಕನ್ನಡ IRV.
¶ ಅದಕ್ಕಾತನು, “ನೀನು ಬೆತ್ತಲೆಯಾಗಿದ್ದೀಯೆಂದು ನಿನಗೆ ತಿಳಿಸಿದವರಾರು? ತಿನ್ನಬಾರದೆಂದು ನಾನು ನಿನಗೆ ಆಜ್ಞಾಪಿಸಿದ ಮರದ ಹಣ್ಣನ್ನು ತಿಂದಿದ್ದಿಯಾ?” ಎಂದು ಕೇಳಿದನು.
ನೀನು ಪುನಃ ಮಣ್ಣಿಗೆ ಸೇರುವ ತನಕ ಬೆವರು ಸುರಿಸುತ್ತಾ ಬೇಕಾದ ಆಹಾರವನ್ನು ಸಂಪಾದಿಸಬೇಕು. ನೀನು ಮಣ್ಣಿನಿಂದ ತೆಗೆಯಲ್ಪಟ್ಟವನಾಗಿರುವುದರಿಂದ ನೀನು ಮಣ್ಣೇ; ಪುನಃ ಮಣ್ಣಿಗೆ ಸೇರತಕ್ಕವನಾಗಿದ್ದೀ” ಎಂದು ಹೇಳಿದನು.
ಅವರೆಲ್ಲರೂ ಅರಣ್ಯದಲ್ಲಿಯೇ ಸಾಯುವರೆಂದು ಯೆಹೋವನು ಅವರ ವಿಷಯದಲ್ಲಿ ಹೇಳಿದ್ದನು. ಆದುದರಿಂದ ಯೆಫುನ್ನೆಯ ಮಗನಾದ ಕಾಲೇಬ್ ಮತ್ತು ನೂನನ ಮಗನಾದ ಯೆಹೋಶುವ ಇವರಿಬ್ಬರ ಹೊರತಾಗಿ ಅವರಲ್ಲಿ ಯಾರೂ ಉಳಿಯಲಿಲ್ಲ.
¶ “ನೋಡಿರಿ, ಈಗ ನಾನು ಜೀವ ಮತ್ತು ಶುಭಗಳನ್ನೂ ಹಾಗೂ ಮರಣ ಮತ್ತು ಅಶುಭಗಳನ್ನೂ ನಿಮ್ಮ ಮುಂದೆ ಇಟ್ಟಿದ್ದೇನೆ.
ಇಸ್ರಾಯೇಲ್ ಸಂತತಿಯವರಲ್ಲಿ ಯುದ್ಧ ವಿದ್ಯೆಯನ್ನು ಅರಿಯದವರಿಗೆ ಅದನ್ನು ಕಲಿಸಿಕೊಡುವುದಕ್ಕೂ ಯೆಹೋವನು ಉಳಿಸಿದ ಜನಾಂಗಗಳವರು ಯಾರಾರೆಂದರೆ,
ಅದಕ್ಕೆ ಸೌಲನು, “ಯೋನಾತಾನನೇ, ನಾನು ನಿನ್ನನ್ನು ಕೊಲ್ಲದೆ ಬಿಟ್ಟರೆ ದೇವರು ನನಗೆ ಬೇಕಾದದ್ದನ್ನು ಮಾಡಲಿ” ಎಂದನು.
ಆಗ ಅರಸನು ಅವನಿಗೆ, “ಅಹೀಮೆಲೆಕನೇ ನೀನೂ ನಿನ್ನ ಮನೆಯವರೂ ಸಾಯಲೇ ಬೇಕು” ಎಂದು ಹೇಳಿ ತನ್ನ ಬಳಿಯಲ್ಲಿದ್ದ
“ನೀನು ಈ ಊರನ್ನು ಬಿಟ್ಟು ಎಲ್ಲಿಗಾದರೂ ಹೋದರೆ ಅದೇ ದಿನದಲ್ಲಿ ನಿನಗೆ ಮರಣ ಶಿಕ್ಷೆಯಾಗುವುದು ಎಂದು ಖಂಡಿತವಾಗಿ ಹೇಳಿ ಯೆಹೋವನ ಹೆಸರಿನಲ್ಲಿ ನಿನ್ನಿಂದ ಪ್ರಮಾಣ ತೆಗೆದುಕೊಂಡೆನಲ್ಲವೋ? ಆಗ, ‘ನೀನು ಹೇಳುವುದು ಒಳ್ಳೇಯದು, ಹಾಗೆಯೇ ಮಾಡುತ್ತೇನೆ’ ಎಂದು ಹೇಳಿದಿಯಲ್ಲಾ.
ನಾನು ದುಷ್ಟನಿಗೆ, ‘ನೀನು ಖಂಡಿತವಾಗಿ ಸಾಯುವೆ’ ಎಂದು ನುಡಿಯುವಾಗ ನೀನು ಅವನನ್ನು ಎಚ್ಚರಿಸದೆಯೂ, ಅವನು ತನ್ನ ಕೆಟ್ಟಮಾರ್ಗವನ್ನು ಬಿಟ್ಟು ತನ್ನ ಪ್ರಾಣವನ್ನು ಉಳಿಸಿಕೊಳ್ಳುವಂತೆ ಅವನಿಗೆ ಬುದ್ಧಿಹೇಳದೆಯೂ ಇದ್ದರೆ ಆ ದುಷ್ಟನು ತನ್ನ ಅಪರಾಧದಿಂದ ಸಾಯಬೇಕಾಗುವುದು; ಅವನ ಮರಣಕ್ಕೆ ನೀನು ಹೊಣೆಯಾಗುವೆ.
ಅಸಹ್ಯಕಾರ್ಯವನ್ನು ಮಾಡಿ, ಸಾಲಕ್ಕೆ ಬಡ್ಡಿತೆಗೆದು, ಲಾಭಕ್ಕೆ ಹಣಕೊಟ್ಟು, ಬಲಾತ್ಕಾರಿಯೂ ಮತ್ತು ರಕ್ತಸುರಿಸುವವನೂ ಆಗಿದ್ದರೆ ಜೀವಿಸುವನೇ? ಖಂಡಿತ ಜೀವಿಸುವುದಿಲ್ಲ; ಈ ದುರಾಚಾರಗಳನ್ನೆಲ್ಲಾ ನಡೆಸಿದನಲ್ಲವೇ? ಅವನು ಸಾಯುವುದು ಖಂಡಿತ; ತನ್ನ ಮರಣ ದಂಡನೆಗೆ ತಾನೇ ಕಾರಣ.
ನಾನು ದುಷ್ಟನಿಗೆ ದುಷ್ಟನೇ, ‘ನೀನು ಖಂಡಿತವಾಗಿ ಸಾಯುವೆ’ ಎಂದು ಹೇಳುವಾಗ, ನೀನು ಆ ದುಷ್ಟನನ್ನು ತನ್ನ ದುರ್ಮಾರ್ಗದಿಂದ ತಪ್ಪಿಸಿ, ಅವನನ್ನು ಎಚ್ಚರಗೊಳಿಸದೆ ಹೋದರೆ, ಅವನು ತನ್ನ ಅಪರಾಧದಿಂದಲೇ ಸಾಯಬೇಕಾಗುವುದು; ಅವನ ಮರಣಕ್ಕೆ ಹೊಣೆಯಾದ ನಿನಗೆ ನಾನು ಮುಯ್ಯಿತೀರಿಸುವೆನು.
ಇಂಥವುಗಳನ್ನು ನಡಿಸುವವರು ಮರಣಕ್ಕೆ ಪಾತ್ರರಾಗಿದ್ದಾರೆಂಬ ದೇವವಿಧಿಯು ಅವರಿಗೆ ತಿಳಿದಿದ್ದರೂ ಅವರು ತಾವೇ ಅವುಗಳನ್ನು ಮಾಡುವುದಲ್ಲದೆ ಮಾಡುವವರನ್ನೂ ಹೊಗಳುತ್ತಾ ಪ್ರೇರೇಪಿಸುತ್ತಾರೆ.
ನೀವು ಯಾವನಿಗೆ ದಾಸರಂತೆ ವಿಧೇಯರಾಗುತ್ತೇವೆಂದು ನಿಮ್ಮನ್ನು ನೀವು ಒಪ್ಪಿಸಿ ಕೊಡುತ್ತೀರೋ ಆ ಯಜಮಾನನಿಗೆ ದಾಸರಾಗಿಯೇ ಇರುವಿರೆಂಬುದು ನಿಮಗೆ ಗೊತ್ತಿಲ್ಲವೋ? ಪಾಪಕ್ಕೆ ದಾಸರಾದರೆ ಮರಣವೇ ಫಲ; ನಂಬಿಕೆಯೆಂಬ ವಿಧೇಯತ್ವಕ್ಕೆ ದಾಸರಾದರೆ ನೀತಿಯೇ ಫಲ
ಜೀವಿಸುವುದಕ್ಕಾಗಿ ಕೊಟ್ಟಿರುವ ಆಜ್ಞೆಯೇ ಮರಣಕ್ಕೆ ಕಾರಣವಾಯಿತೆಂದು ನನಗೆ ಕಂಡು ಬಂದಿತು.
ಆದಾಮನಿಂದ ಹೇಗೆ ಎಲ್ಲರೂ ಸಾಯುವವರಾದರೋ ಅದೇ ಪ್ರಕಾರ ಯೇಸು ಕ್ರಿಸ್ತನಿಂದ ಎಲ್ಲರೂ ಬದುಕುವವರಾದರು.
¶ ಮೋಶೆಯ ಧರ್ಮಶಾಸ್ತ್ರದ ನೇಮನಿಷ್ಠೆಗಳನ್ನು ಆಧಾರಮಾಡಿಕೊಂಡಿರುವವರೆಲ್ಲರೂ ಶಾಪಾಗ್ರಸ್ತರಾಗಿದಾರೆ. ಹೇಗೆಂದರೆ, “ಧರ್ಮಶಾಸ್ತ್ರದಲ್ಲಿ ಬರೆದಿರುವವುಗಳೆಲ್ಲವನ್ನೂ ಪ್ರತಿನಿತ್ಯವೂ ಪಾಲಿಸದಿರುವ ಪ್ರತಿಯೊಬ್ಬನು ಶಾಪಗ್ರಸ್ತನೇ” ಎಂದು ಧರ್ಮಶಾಸ್ತ್ರದಲ್ಲಿ ಬರೆದಿದೆ.
ಆದ್ದರಿಂದ, “ನಿದ್ರೆ ಮಾಡುವವನೇ, ಎಚ್ಚರವಾಗು! ಸತ್ತವರನ್ನು ಬಿಟ್ಟು ಏಳು! ಆಗ ಕ್ರಿಸ್ತನು ನಿನ್ನಲ್ಲಿ ಪ್ರಕಾಶಿಸುವನು” ಎಂದು ಹೇಳಿಯದೆಯಲ್ಲಾ.
ಆದರೆ ಸುಖಭೋಗದಲ್ಲಿರುವ ವಿಧವೆಯು ಬದುಕಿದ್ದರೂ ಸತ್ತಂತೆಯೇ.
ಯಾವನಾದರೂ ತನ್ನ ಸಹೋದರನು ಮರಣಕರವಲ್ಲದ ಪಾಪಮಾಡುವುದನ್ನು ಕಂಡರೆ ಅವನು ದೇವರನ್ನು ಬೇಡಿಕೊಳ್ಳಲಿ. ಆಗ ದೇವರು ಮರಣಕರವಲ್ಲದ ಪಾಪಮಾಡುವವರಿಗೆ ಜೀವವನ್ನು ದಯಪಾಲಿಸುವನು. ಮರಣಕರವಾದ ಪಾಪವುಂಟು ಈ ಪಾಪದ ವಿಷಯವಾಗಿ ಅವನು ಬೇಡಿಕೊಳ್ಳಬೇಕೆಂದು ನಾನು ಹೇಳುವುದಿಲ್ಲ.
ಮೊದಲನೇಯ ಪುನರುತ್ಥಾನದಲ್ಲಿ ಸೇರಿದವರು ಧನ್ಯರೂ ಮತ್ತು ಪರಿಶುದ್ಧರೂ ಆಗಿದ್ದಾರೆ. ಇಂಥವರ ಮೇಲೆ ಎರಡನೆಯ ಮರಣಕ್ಕೆ ಅಧಿಕಾರವಿಲ್ಲ. ಆದರೆ ಅವರು ದೇವರಿಗೂ ಕ್ರಿಸ್ತನಿಗೂ ಯಾಜಕರಾಗಿ ಕ್ರಿಸ್ತನೊಂದಿಗೆ ಆ ಸಾವಿರ ವರ್ಷ ಆಳುವರು.
ಆದರೆ ಹೇಡಿಗಳು, ನಂಬಿಕೆಯಿಲ್ಲದವರು, ಅಸಹ್ಯವಾದದ್ದರಲ್ಲಿ ಪಾಳುಗಾರರಾಗಿರುವವರು, ಕೊಲೆಗಾರರು, ಜಾರರು, ಮಾಟಗಾರರು, ವಿಗ್ರಹಾರಾಧಕರು, ಎಲ್ಲಾ ಸುಳ್ಳುಗಾರರು ಇವರಿಗೆ ಸಿಕ್ಕುವ ಪಾಲು ಬೆಂಕಿ ಗಂಧಕಗಳುರಿಯುವ ಕೆರೆಯೇ, ಅದು ಎರಡನೆಯ ಮರಣವು” ಎಂದು ನನಗೆ ಹೇಳಿದನು.