TSK

TSK · ಆದಿಕಾಂಡ 20:7

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಒಳ್ಳೇದರ ಕೆಟ್ಟದ್ದರ ಅರಿವನ್ನು ಹುಟ್ಟಿಸುವ ಈ ಮರದ ಹಣ್ಣನ್ನು ಮಾತ್ರ ತಿನ್ನಬಾರದು. ತಿಂದ ದಿನವೇ ಸತ್ತು ಹೋಗುವೆ” ಎಂದು ಆಜ್ಞಾಪಿಸಿದನು.

¶ ಆದರೆ ಯೆಹೋವನು ಫರೋಹನಿಗೂ ಅವನ ಮನೆಯವರಿಗೂ ಅಬ್ರಾಮನ ಹೆಂಡತಿಯಾದ ಸಾರಯಳ ನಿಮಿತ್ತ ಬಹಳ ಉಪದ್ರವಗಳಿಂದ ಬಾಧಿಸಿದನು.

ಅವನು ನಿನಗೆ ಬದಲಾಗಿ ಜನರ ಸಂಗಡ ಮಾತನಾಡುವನು. ಅವನು ನಿನಗೆ ಬಾಯಂತಿರುವನು. ನೀನು ಅವನಿಗೆ ದೇವರಂತಿರುವಿ.

¶ ಐಗುಪ್ತ ದೇಶದಲ್ಲಿ ಯೆಹೋವನು ಮೋಶೆ ಮತ್ತು ಆರೋನರ ಸಂಗಡ ಮಾತನಾಡಿ ಹೇಳಿದ್ದೇನೆಂದರೆ,

ಅವನು ಪಾಪಮಾಡಿ ಅಪರಾಧಿಯಾಗಿರುವುದರಿಂದ ಅವನು ತಾನು ಕದ್ದದ್ದನ್ನು, ಮೋಸದಿಂದ ಪಡೆದದ್ದನ್ನು ತನ್ನ ವಶಕ್ಕೆ ತೆಗೆದುಕೊಂಡದ್ದನ್ನು, ತಾನು ಕಂಡುಕೊಂಡದ್ದನ್ನು,

ಭೂಮಿಯು ಬಾಯ್ದೆರೆದು ಅವರನ್ನೂ ಮತ್ತು ಕೋರಹನಿಗೆ ಸೇರಿದ ಮನುಷ್ಯರೆಲ್ಲರನ್ನೂ, ಅವರ ಸರ್ವಸ್ವವನ್ನೂ ನುಂಗಿಬಿಟ್ಟಿತು.

“ನಮ್ಮ ದೇವರಾದ ಯೆಹೋವನು ನಮ್ಮನ್ನು ಫಿಲಿಷ್ಟಿಯರ ಕೈಯಿಂದ ತಪ್ಪಿಸಿ ರಕ್ಷಿಸುವ ಹಾಗೆ ನೀನು ನಮಗೋಸ್ಕರ ಆತನಿಗೆ ಮೊರೆಯಿಡು, ಸುಮ್ಮನಿರಬೇಡ” ಅಂದರು.

ನಾನಾದರೋ ನಿಮಗೋಸ್ಕರವಾಗಿ ಯೆಹೋವನನ್ನು ಪ್ರಾರ್ಥಿಸುತ್ತಾ, ಆತನ ಉತ್ತಮ ನೀತಿಮಾರ್ಗವನ್ನು ನಿಮಗೆ ತೋರಿಸಿಕೊಡುವುದನ್ನು ಬಿಡುವುದೇ ಇಲ್ಲ; ಬಿಟ್ಟರೆ ಆತನ ದೃಷ್ಟಿಯಲ್ಲಿ ಪಾಪಿಯಾಗಿರುವೆನು.

ಅರಸನು ಆ ಮನುಷ್ಯನಿಗೆ, “ನಿನ್ನ ದೇವರಾದ ಯೆಹೋವನು ಪ್ರಸನನ್ನಾಗುವಂತೆ ಬೇಡಿಕೊಂಡು ನಾನು ನನ್ನ ಕೈಯನ್ನು ಹಿಂತೆಗೆಯುವುದಕ್ಕಾಗುವ ಹಾಗೆ ಆತನನ್ನು ನನಗೋಸ್ಕರ ಪ್ರಾರ್ಥಿಸು” ಎಂದು ಕೇಳಿದನು. ದೇವರ ಮನುಷ್ಯನು ಯೆಹೋವನನ್ನು ಬೇಡಿಕೊಂಡಿದ್ದರಿಂದ ಅರಸನ ಕೈ ವಾಸಿಯಾಗಿ ಮುಂಚಿನಂತೆ ಆಯಿತು.

¶ ನಾಮಾನನು ಇದನ್ನು ಕೇಳಿ ಕೋಪಗೊಂಡು, “ಇದೇನು? ಅವನು ಹೊರಗೆ ಬಂದು ತನ್ನ ದೇವರಾದ ಯೆಹೋವನ ಹೆಸರನ್ನು ಹೇಳಿ ನನ್ನ ಕುಷ್ಠದ ಮೇಲೆ ಕೈಯಾಡಿಸಿ ವಾಸಿಮಾಡುವನೆಂದು ನೆನಸಿದೆನು.

‘ನಾನು ಅಭಿಷೇಕಿಸಿದವರನ್ನು ಮುಟ್ಟಬಾರದು. ನನ್ನ ಪ್ರವಾದಿಗಳಿಗೆ ಯಾವ ಕೇಡನ್ನು ಮಾಡಬಾರದು’ ಎಂದು ಹೇಳಿದನು.

ಅಧಿಪತಿಗಳಿಗೆ ಮುಖದಾಕ್ಷಿಣ್ಯವನ್ನು ತೋರಿಸದೆ, ಬಡವರು ಬಲ್ಲಿದರು ಎಂಬ ಭೇದವನ್ನು ಮಾಡದೆ ಇರುವನು; ಅವರೆಲ್ಲರೂ ಆತನ ಸೃಷ್ಟಿಯಾಗಿದ್ದಾರಷ್ಟೆ.

ಯೆಹೋವನು ತನ್ನ ಸದ್ಭಕ್ತರಿಗೆ ಆಪ್ತಮಿತ್ರನಂತಿರುವನು; ಅವರಿಗೆ ತನ್ನ ಒಡಂಬಡಿಕೆಯ ಅನುಭವವನ್ನು ದಯಪಾಲಿಸುವನು.

ಅವರಿಗೆ ಯಾರಿಂದಲೂ ಅನ್ಯಾಯವಾಗಗೊಡಿಸಲಿಲ್ಲ. ಆತನು ಅವರ ವಿಷಯದಲ್ಲಿ ಅರಸರನ್ನೂ ಗದರಿಸಿ,

¶ ಯೆಹೋವನು ನನಗೆ ಹೀಗೆ ಹೇಳಿದನು, “ಮೋಶೆಯು ಮತ್ತು ಸಮುವೇಲನು ನನಗೆ ವಿಜ್ಞಾಪಿಸಿದರೂ ನನ್ನ ಮನಸ್ಸು ಈ ಜನರ ಕಡೆಗೆ ತಿರುಗುವುದಿಲ್ಲ. ನನ್ನ ಕಣ್ಣೆದುರಿನಿಂದ ಇವರನ್ನು ನೂಕಿಬಿಡು, ತೊಲಗಿ ಹೋಗಲಿ!

ನಾನು ದುಷ್ಟನಿಗೆ, ‘ನೀನು ಖಂಡಿತವಾಗಿ ಸಾಯುವೆ’ ಎಂದು ನುಡಿಯುವಾಗ ನೀನು ಅವನನ್ನು ಎಚ್ಚರಿಸದೆಯೂ, ಅವನು ತನ್ನ ಕೆಟ್ಟಮಾರ್ಗವನ್ನು ಬಿಟ್ಟು ತನ್ನ ಪ್ರಾಣವನ್ನು ಉಳಿಸಿಕೊಳ್ಳುವಂತೆ ಅವನಿಗೆ ಬುದ್ಧಿಹೇಳದೆಯೂ ಇದ್ದರೆ ಆ ದುಷ್ಟನು ತನ್ನ ಅಪರಾಧದಿಂದ ಸಾಯಬೇಕಾಗುವುದು; ಅವನ ಮರಣಕ್ಕೆ ನೀನು ಹೊಣೆಯಾಗುವೆ.

ನಾನು ದುಷ್ಟನಿಗೆ, ‘ನೀನು ಖಂಡಿತವಾಗಿ ಸಾಯುವಿ’ ಎಂದು ಹೇಳಲು ಅವನು ತನ್ನ ಪಾಪವನ್ನು ಬಿಟ್ಟು ನೀತಿನ್ಯಾಯಗಳನ್ನು ನಡೆಸಿದರೆ,

¶ ದೇವರು ಪುರಾತನ ಕಾಲದಲ್ಲಿ ನಮ್ಮ ಪೂರ್ವಿಕರ ಸಂಗಡ ಪ್ರವಾದಿಗಳ ಮುಖಾಂತರ ಹಲವಾರು ವಿಧದಲ್ಲಿ, ಅನೇಕಸಾರಿ ಮಾತನಾಡಿದ್ದಾನೆ.

ನಿಮ್ಮಲ್ಲಿ ಯಾವನಾದರೂ ಅಸ್ವಸ್ಥನಾಗಿರುವವನು ಇದ್ದರೆ, ಅವನು ಸಭೆಯ ಹಿರಿಯರನ್ನು ಕರೆದು ಪ್ರಾರ್ಥಿಸುವಂತೆ ವಿನಂತಿಸಲಿ. ಅವರು ಕರ್ತನ ಹೆಸರಿನಲ್ಲಿ ಅವನಿಗೆ ಎಣ್ಣೆ ಹಚ್ಚಿ ಅವನಿಗೋಸ್ಕರ ದೇವರನ್ನು ಪ್ರಾರ್ಥಿಸಲಿ.

ಇವರಿಗೆ ಯಾವನಾದರೂ ಕೇಡನ್ನುಂಟುಮಾಡಬೇಕೆಂದಿದ್ದರೆ ಇವರ ಬಾಯೊಳಗಿಂದ ಬೆಂಕಿಯು ಹೊರಟು ಇವರ ಶತ್ರುಗಳನ್ನು ದಹಿಸಿಬಿಡುವುದು. ಇವರಿಗೆ ಕೇಡನ್ನು ಉಂಟುಮಾಡಬಯಸುವವರಿಗೆ ಆ ರೀತಿಯಾಗಿ ಹತರಾಗಬೇಕು.