TSK

TSK · ಆದಿಕಾಂಡ 24:49

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ನೀನು ನಿನ್ನ ದಾಸನಾದ ನನ್ನ ಮೇಲೆ ಎಷ್ಟೋ ನಂಬಿಕೆಯನ್ನಿಟ್ಟು ನಿನ್ನ ವಾಗ್ದಾನವನ್ನು ನೆರವೇರಿಸಿದ್ದೀಯಲ್ಲಾ. ನಾನು ಅದಕ್ಕೆ ಕೇವಲ ಅಯೋಗ್ಯನು. ನಾನು ಮೊದಲು ಈ ಯೊರ್ದನ್ ನದಿಯನ್ನು ದಾಟಿದಾಗ ನನ್ನ ಬಳಿಯಲ್ಲಿ ಒಂದು ಕೋಲು ಮಾತ್ರವೇ ಇತ್ತು. ಈಗ ಎರಡು ಗುಂಪುಗಳಿಗೆ ಒಡೆಯನಾಗಿದ್ದೇನೆ.

ತಮ್ಮ ದೇಶವನ್ನು ದಾಟಿಹೋಗುವುದಕ್ಕೆ ನಮಗೆ ಅಪ್ಪಣೆಯಾಗಬೇಕೆಂದು ಬೇಡಿಕೊಳ್ಳುತ್ತೇವೆ. ನಾವು ಹೊಲವನ್ನಾದರೂ, ದ್ರಾಕ್ಷಿತೋಟವನ್ನಾದರೂ ದಾಟಿ ಹೋಗುವುದಿಲ್ಲ. ಬಾವಿಗಳ ನೀರನ್ನು ಕುಡಿಯುವುದಿಲ್ಲ. ರಾಜಮಾರ್ಗದಲ್ಲಿಯೇ ನಡೆದು ನಮ್ಮ ದೇಶದ ಗಡಿಯನ್ನು ದಾಟುವ ತನಕ ಬಲಕ್ಕಾಗಲಿ, ಎಡಕ್ಕಾಗಲಿ ತಿರುಗುವುದಿಲ್ಲ” ಎಂದು ಹೇಳಿಸಿದನು.

ಆಗ ಆ ಗೂಢಚಾರರು “ನೀವು ನಮ್ಮ ವಿಷಯವನ್ನು ಬಹಿರಂಗ ಮಾಡದಿದ್ದರೆ ನಾವು ನಿಮ್ಮ ಪ್ರಾಣಕ್ಕೆ ಹೊಣೆಯಾಗಿರುತ್ತೇವೆ; ಯೆಹೋವನು ಈ ದೇಶವನ್ನು ನಮಗೆ ಅನುಗ್ರಹಿಸಿದ ಮೇಲೆ ನಾವು ಕೊಟ್ಟ ಮಾತಿನಂತೆ ನಿನ್ನಲ್ಲಿ ದಯೆಯಿಂದಲೂ ನಂಬಿಗಸ್ತಿಕೆಯಿಂದಲೂ ನಡೆದುಕೊಳ್ಳುವೆವು” ಅಂದರು.