¶ ಯೆಹೋವನು ಅಬ್ರಾಮನಿಗೆ, “ನೀನು, ನಿನ್ನ ಸ್ವದೇಶವನ್ನೂ, ಬಂಧುಬಳಗವನ್ನೂ, ತಂದೆಯ ಮನೆಯನ್ನೂ ಬಿಟ್ಟು ನಾನು ತೋರಿಸುವ ದೇಶಕ್ಕೆ ಹೊರಟು ಹೋಗು.
TSK
TSK · ಆದಿಕಾಂಡ 24:7
Treasury of Scripture Knowledge references in ಕನ್ನಡ IRV.
ನೀನು ನೋಡುವ ಈ ದೇಶವನ್ನೆಲ್ಲಾ ನಿನಗೂ ನಿನ್ನ ಸಂತತಿಗೂ ಶಾಶ್ವತವಾಗಿ ಕೊಡುವೆನು.
ನೀನು ಪ್ರವಾಸಿಯಾಗಿರುವ ಕಾನಾನ್ ದೇಶವನ್ನೆಲ್ಲಾ ನಿನಗೂ ನಿನ್ನ ಸಂತತಿಗೂ ಶಾಶ್ವತ ಸ್ವತ್ತಾಗಿ ಕೊಟ್ಟು ಎಂದೆಂದಿಗೂ ಅವರಿಗೆ ದೇವರಾಗಿರುವೆನು” ಎಂದನು.
¶ ಅವನು ನನಗೆ, “ನಾನು ಆರಾಧನೆ ಮಾಡುತ್ತಾ ಬಂದಿರುವ ನನ್ನ ದೇವರಾದ ಆ ಯೆಹೋವನು ತನ್ನ ದೂತನನ್ನು ನಿನ್ನೊಂದಿಗೆ ಕಳುಹಿಸಿ ನೀನು ನನ್ನ ತಂದೆಯ ಮನೆತನಕ್ಕೆ ಸೇರಿರುವ ಬಂಧುಗಳಲ್ಲಿ ನನ್ನ ಮಗನಿಗೆ ಹೆಣ್ಣು ತೆಗೆದುಕೊಳ್ಳುವಂತೆ ಅನುಕೂಲ ಮಾಡುವನು.
ಆ ರಾತ್ರಿ ಯೆಹೋವನು ಅವನಿಗೆ ಕಾಣಿಸಿಕೊಂಡು, “ನಾನು ನಿನ್ನ ತಂದೆಯಾದ ಅಬ್ರಹಾಮನ ದೇವರು; ನೀನು ಭಯಪಡಬೇಡ; ನಾನು ನಿನ್ನ ಸಂಗಡ ಇದ್ದೇನೆ; ನನ್ನ ಸೇವಕನಾದ ಅಬ್ರಹಾಮನ ನಿಮಿತ್ತ ನಿನ್ನನ್ನು ಆಶೀರ್ವದಿಸಿ ನಿನ್ನ ಸಂತತಿಯನ್ನು ಹೆಚ್ಚಿಸುವೆನು” ಎಂದು ಹೇಳಿದನು.
¶ ಇಗೋ ದಾರಿಯಲ್ಲಿ ನಿಮ್ಮನ್ನು ಕಾಪಾಡುವುದಕ್ಕೂ, ನಾನು ಗೊತ್ತುಮಾಡಿರುವ ಸ್ಥಳಕ್ಕೆ ನಿಮ್ಮನ್ನು ಕರೆತರುವುದಕ್ಕೂ ದೂತನನ್ನು ನಿಮ್ಮ ಮುಂದಾಗಿ ಕಳುಹಿಸಿದ್ದೇನೆ.
ನಿನ್ನ ಸೇವಕರಾದ ಅಬ್ರಹಾಮ್, ಇಸಾಕ್ ಹಾಗು ಯಾಕೋಬರನ್ನು ನೆನಪಿಗೆ ತಂದುಕೋ. ನೀನು ನಿನ್ನ ಜೀವದಾಣೆ ಪ್ರಮಾಣ ಮಾಡಿ ಅವರಿಗೆ, ‘ನಾನು ನಿಮ್ಮ ಸಂತತಿಯನ್ನು ಹೆಚ್ಚಿಸಿ ಆಕಾಶದ ನಕ್ಷತ್ರಗಳಷ್ಟು ಅಸಂಖ್ಯವಾಗಿ ಈ ಪ್ರದೇಶವನ್ನೆಲ್ಲಾ ನಿಮ್ಮ ಸಂತತಿಯವರಿಗೆ ಕೊಡುವೆನೆಂದೂ ಇಸ್ರಾಯೇಲರು ಈ ದೇಶವನ್ನು ಶಾಶ್ವತವಾಗಿ ಸ್ವಾಧೀನ ಮಾಡಿಕೊಳ್ಳುವರೆಂದೂ ಮಾತುಕೊಡಲಿಲ್ಲವೇ’” ಅಂದನು.
¶ “‘ಯೆಹೋವನು ಪ್ರಮಾಣಪೂರ್ವಕವಾಗಿ ವಾಗ್ದಾನಮಾಡಿದ ದೇಶದಲ್ಲಿ ಆ ಜನರನ್ನು ಸೇರಿಸುವುದಕ್ಕೆ ಶಕ್ತಿಸಾಲದೆ, ಅವರನ್ನು ಅರಣ್ಯದಲ್ಲಿ ಕೊಂದುಹಾಕಿಬಿಟ್ಟನು’ ಎಂದು ಮಾತನಾಡಿಕೊಳ್ಳುವರು.
‘ಐಗುಪ್ತ ದೇಶದೊಳಗಿಂದ ಬಂದ ಈ ಜನರೊಳಗೆ ಯಾರೂ ನನ್ನನ್ನು ಪೂರ್ಣಮನಸ್ಸಿನಿಂದ ಅನುಸರಿಸದೆ ಹೋದುದರಿಂದ ನಾನು ಅಬ್ರಹಾಮ್, ಇಸಾಕ್, ಯಾಕೋಬರಿಗೆ ಪ್ರಮಾಣ ಪೂರ್ವಕವಾಗಿ ಕೊಟ್ಟ ದೇಶವನ್ನು, ಅವರೊಳಗೆ ಇಪ್ಪತ್ತು ವರ್ಷ ಮೊದಲುಗೊಂಡು ಹೆಚ್ಚಿನ ವಯಸ್ಸಿನವರಲ್ಲಿ
“ನಾನು ಅಬ್ರಹಾಮ್, ಇಸಾಕ್ ಮತ್ತು ಯಾಕೋಬರಿಗೆ ಪ್ರಮಾಣಮಾಡಿ ಅವರ ಸಂತತಿಯವರಿಗೆ ಕೊಡುವೆನೆಂದು ವಾಗ್ದಾನಮಾಡಿದ ದೇಶವು ಇದೇ; ನಿನಗೆ ಪ್ರತ್ಯಕ್ಷವಾಗಿ ತೋರಿಸಿದ್ದೇನೆ. ಆದರೆ ನೀನು ನದಿ ದಾಟಿ ಅಲ್ಲಿಗೆ ಹೋಗಕೂಡದು” ಎಂದು ಹೇಳಿದನು.
¶ ಯೆಹೋವನ ದೂತನು ಗಿಲ್ಗಾಲಿನಿಂದ ಬೋಕೀಮಿಗೆ ಬಂದು ಇಸ್ರಾಯೇಲ್ಯರಿಗೆ, “ನಾನು ನಿಮ್ಮನ್ನು ಐಗುಪ್ತದಿಂದ ಬರಮಾಡಿ, ನಿಮ್ಮ ಪೂರ್ವಿಕರಿಗೆ ಪ್ರಮಾಣ ಮಾಡಿದ ದೇಶಕ್ಕೆ ಕರೆತಂದೆನು. ‘ನಿಮ್ಮೊಡನೆ ಮಾಡಿಕೊಂಡ ಒಡಂಬಡಿಕೆಯನ್ನು ಎಂದೂ ಭಂಗಪಡಿಸುವುದಿಲ್ಲವೆಂದು ನಾನು ಮಾತು ಕೊಟ್ಟಾಗ,
ಯೆಹೋವನು, “ನಿನ್ನನ್ನು ಉಪದೇಶಿಸಿ ನಡೆಯಬೇಕಾದ ಮಾರ್ಗವನ್ನು ತಿಳಿಸುವೆನು; ನಿನ್ನನ್ನು ಕಟಾಕ್ಷಿಸಿ ಆಲೋಚನೆ ಹೇಳುವೆನು” ಎಂದು ಅನ್ನುತ್ತಾನಲ್ಲಾ.
ನಿನ್ನ ಚಿತ್ತವನ್ನು ತಿಳಿಯಪಡಿಸಿ, ನನ್ನನ್ನು ನಡೆಸಿ ತರುವಾಯ ಮಹಿಮೆಗೆ ಸೇರಿಸಿಕೊಳ್ಳುವಿ.
ಸ್ವಬುದ್ಧಿಯನ್ನೇ ಆಧಾರಮಾಡಿಕೊಳ್ಳದೆ ಪೂರ್ಣಮನಸ್ಸಿನಿಂದ ಯೆಹೋವನಲ್ಲಿ ಭರವಸವಿಡು.
¶ “ಆ ರಾಜರ ಕಾಲದಲ್ಲಿ ಪರಲೋಕದೇವರು ಒಂದು ರಾಜ್ಯವನ್ನು ಸ್ಥಾಪಿಸುವನು; ಅದು ಎಂದಿಗೂ ಅಳಿಯದು, ಅದರ ಪ್ರಾಬಲ್ಯವು ಬೇರೆ ಜನಾಂಗಕ್ಕೆ ಕದಲಿಹೋಗದು. ಆ ರಾಜ್ಯಗಳನ್ನೆಲ್ಲಾ ಭಂಗಪಡಿಸಿ ನಿರ್ನಾಮಮಾಡಿ ಶಾಶ್ವತವಾಗಿ ನಿಲ್ಲುವುದು.
ಈ ದೇಶದಲ್ಲಿ ಅವನಿಗೆ ಕಾಲಿಡುವಷ್ಷ್ಟು ಭೂಮಿಯನ್ನು ಸ್ವತ್ತಾಗಿ ಕೊಡದೆ ಅವನಿಗೆ ಮಕ್ಕಳೇ ಇಲ್ಲದಿರುವಾಗ ನೀನಿರುವ ದೇಶವನ್ನು ನಿನಗೂ, ನಿನ್ನ ನಂತರ ಬರುವ ನಿನ್ನ ಸಂತತಿಗೂ ಸ್ವತ್ತಾಗಿ ಕೊಡುವೆನೆಂದು ಅವನಿಗೆ ವಾಗ್ದಾನಮಾಡಿದನು.
ನಂಬಿಕೆಯಿಂದಲೇ ಅವನು ವಾಗ್ದಾನದ ದೇಶಕ್ಕೆ ಬಂದಾಗ, ಅಲ್ಲಿ ಅನ್ಯ ದೇಶದವನಂತೆ ಗುಡಾರಗಳಲ್ಲಿ ಇದ್ದುಕೊಂಡು ಪ್ರವಾಸಿಯಾಗಿ ಬದುಕಿದನು. ಅದೇ ವಾಗ್ದಾನಕ್ಕೆ ಸಹಭಾಧ್ಯರಾಗಿದ್ದ ಇಸಾಕನೂ, ಯಾಕೋಬನೂ ಅವನಂತೆಯೇ ಗುಡಾರಗಳಲ್ಲಿ ವಾಸಿಸಿದರು.