TSK

TSK · ಆದಿಕಾಂಡ 25:21

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಸಾರಯಳು ಬಂಜೆಯಾಗಿದುದರಿಂದ ಆಕೆಗೆ ಮಕ್ಕಳಿರಲಿಲ್ಲ.

ಹೀಗಿರಲಾಗಿ ಸಾರಯಳು ಅಬ್ರಾಮನಿಗೆ, “ಯೆಹೋವನು ನನಗೆ ಮಕ್ಕಳನ್ನು ಕೊಡಲಿಲ್ಲವಲ್ಲಾ; ನೀನು ನನ್ನ ದಾಸಿಯಾದ ಹಾಗರಳ ಬಳಿಗೆ ಹೋಗಬೇಕು; ಒಂದು ವೇಳೆ ಅವಳ ಮೂಲಕ ನನಗೆ ಸಂತಾನವಾದೀತು” ಎಂದು ಹೇಳಲು ಅಬ್ರಾಮನು ಆಕೆಯ ಮಾತಿಗೆ ಸಮ್ಮತಿಸಿದನು.

¶ ಆಮೇಲೆ ದೇವರು ರಾಹೇಲಳನ್ನು ನೆನಪಿಸಿಕೊಂಡು ಆಕೆಯ ಮೊರೆಯನ್ನು ಕೇಳಿ ಆಕೆಗೆ ಮಕ್ಕಳಾಗುವಂತೆ ಮಾಡಿದನು.

“ಸೇನಾಧೀಶ್ವರನಾದ ಯೆಹೋವನೇ, ನಿನ್ನ ದಾಸಿಯ ದುಃಖವನ್ನು ಪರಾಂಬರಿಸು; ನಿನ್ನ ದಾಸಿಯನ್ನು ಮರೆಯದೆ ನನ್ನನ್ನು ನೆನಪಿಸಿಕೊಂಡು ನನಗೊಬ್ಬ ಮಗನನ್ನು ಕೊಡಬೇಕು; ಅವನು ಜೀವದಿಂದಿರುವ ತನಕ ನಿನ್ನವನಾಗಿಯೇ ಇರುವ ಹಾಗೆ ಅವನನ್ನು ನಿನಗೆ ಪ್ರತಿಷ್ಠಿಸುವೆನು; ಅವನ ತಲೆಯ ಮೇಲೆ ಕ್ಷೌರ ಕತ್ತಿಯನ್ನು ಮುಟ್ಟಗೊಡುವುದಿಲ್ಲ” ಎಂದು ಪ್ರಾರ್ಥಿಸಿ ಹರಕೆಮಾಡಿದಳು.

ಅವರು ದೇವರ ಮೇಲೆ ಭರವಸೆ ಇಟ್ಟಿದ್ದರಿಂದ ಮೊರೆಯಿಟ್ಟ ಅವರ ಪ್ರಾರ್ಥನೆಗೆ ಕಿವಿಗೊಟ್ಟು ಯುದ್ಧದಲ್ಲಿ ಜಯವನ್ನು ಅನುಗ್ರಹಿಸಿದನು. ಹಗ್ರೀಯರೂ ಇವರ ಜೊತೆಯಲ್ಲಿದ್ದವರೂ ಅವರ ಕೈಯಲ್ಲಿ ಕೊಡಲ್ಪಟ್ಟರು.

ಆದುದರಿಂದ ನಾವು ಉಪವಾಸಮಾಡಿ ದೇವರನ್ನು ಪ್ರಾರ್ಥಿಸಲು ಆತನು ನಮಗೆ ಪ್ರಸನ್ನನಾದನು.

ಪ್ರಾರ್ಥನೆಯನ್ನು ಕೇಳುವವನೇ, ನರರೆಲ್ಲರೂ ನಿನ್ನ ಬಳಿಗೆ ಬರುವರು.

ಪುತ್ರಸಂತಾನವು ಯೆಹೋವನಿಂದ ಬಂದ ಸ್ವತ್ತು; ಗರ್ಭಫಲವು ಆತನ ಬಹುಮಾನವೇ.

ಆಗ ನೀವು ಕೂಗಿದರೆ ಯೆಹೋವನು ಉತ್ತರಕೊಡುವನು, ಮೊರೆಯಿಟ್ಟು ಕರೆದರೆ, “ಇಗೋ, ಇದ್ದೇನೆ” ಅನ್ನುವನು. ನೀವು ನಿಮ್ಮ ಮಧ್ಯದೊಳಗಿಂದ ನೊಗವನ್ನು, ಇನ್ನೊಬ್ಬರನ್ನು ದೂಷಣೆಗೆ ಗುರಿಮಾಡಿ ತೋರುವ ಬೆರಳನ್ನು, ಕೆಡುಕಿನ ನುಡಿಯನ್ನು ಬಿಟ್ಟು,

ಆದರೆ ಎಲಿಸಬೇತಳು ಬಂಜೆಯಾದುದರಿಂದ ಅವರಿಗೆ ಮಕ್ಕಳಿರಲಿಲ್ಲ; ಇದಲ್ಲದೆ ಅವರಿಬ್ಬರೂ ವಯೋವೃದ್ಧರಾಗಿದ್ದರು.

ಇದು ಮಾತ್ರವಲ್ಲದೆ ರೆಬೆಕ್ಕಳು ಸಹ ನಮ್ಮ ಮೂಲಪಿತೃವಾದ ಇಸಾಕನಿಂದ ಅವಳಿ ಜವಳಿ ಮಕ್ಕಳಿಗೆ ಬಸುರಾದಾಗ ಅದರಂತೆಯೇ ಆಯಿತು.