TSK

TSK · ಆದಿಕಾಂಡ 25:23

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

“ನಾನು ನಿನ್ನೊಂದಿಗೆ ಒಂದು ಒಡಂಬಡಿಕೆ ಮಾಡಿಕೊಳ್ಳುತ್ತೇನೆ; ಅದೇನೆಂದರೆ ನೀನು ಅನೇಕ ಜನಾಂಗಗಳಿಗೆ ಮೂಲಪುರುಷನಾಗುವಿ,

ಮತ್ತು ರೆಬೆಕ್ಕಳಿಗೆ, “ತಂಗಿ, ನಿನ್ನಿಂದ ಸಾವಿರ, ಹತ್ತು ಸಾವಿರ ಸಂತಾನವಾಗಲಿ; ನಿನ್ನ ಸಂತಾನದವರು ತಮ್ಮ ವೈರಿಗಳ ಸ್ವತ್ತನ್ನು ಸ್ವಾಧೀನಮಾಡಿಕೊಳ್ಳಲಿ” ಎಂದು ಹೇಳಿ ಹರಸಿದರು.

ಜನಗಳು ನಿನ್ನನ್ನು ಆರಾಧಿಸಲಿ, ಜನಾಂಗಗಳು ನಿನಗೆ ಅಧೀನವಾಗಲಿ. ನಿನ್ನ ಅಣ್ಣತಮ್ಮಂದಿರಿಗೆ ನೀನು ದೊರೆಯಾಗಿರು, ನಿನ್ನ ತಾಯಿಯ ಮಕ್ಕಳು ನಿನಗೆ ಅಡ್ಡಬೀಳಲಿ. ನಿನ್ನನ್ನು ಶಪಿಸುವವರಿಗೆ ಶಾಪವೂ, ನಿನ್ನನ್ನು ಆಶೀರ್ವದಿಸುವವರಿಗೆ ಆಶೀರ್ವಾದವೂ ಉಂಟಾಗಲಿ” ಎಂದನು.

ನೀನು ಕತ್ತಿಯಿಂದಲೇ ಜೀವನ ಮಾಡುವಿ. ನಿನ್ನ ತಮ್ಮನಿಗೆ ಸೇವಕನಾಗಿರುವಿ. ಆದರೂ ನೀನು ತಾಳ್ಮೆ ಮೀರುವಾಗ, ಅವನು ನಿನ್ನ ಹೆಗಲಿನ ಮೇಲೆ ಹೊರಿಸಿರುವ ನೊಗವನ್ನು ಮುರಿದು ಹಾಕುವಿ” ಎಂದು ಹೇಳಿದನು.

ತಾನೇ ಅವರ ಮುಂದಾಗಿ ಹೋಗಿ ತನ್ನ ಅಣ್ಣನು ಹತ್ತಿರ ಸಮೀಪಿಸುತ್ತಿರುವಾಗ ಏಳು ಸಾರಿ ನೆಲದವರೆಗೆ ತಲೆಬಾಗಿ ನಮಸ್ಕರಿಸಿದನು.

¶ ಆದರೆ ಅವನ ತಂದೆ ಒಪ್ಪದೆ, “ಮಗನೇ ನಾನು ಬಲ್ಲೆ. ನನಗೆ ಗೊತ್ತು. ಇವನಿಂದಲೂ ಜನಾಂಗವುಂಟಾಗುವುದು. ಇವನು ಬಲಿಷ್ಠನಾಗುವನು. ಆದರೂ ಇವನಿಗಿಂತಲೂ ಇವನ ತಮ್ಮನು ಬಲಿಷ್ಠನಾಗುವನು. ತಮ್ಮನ ಸಂತತಿಯಲ್ಲಿಯೇ ಜನರು ಹೇರಳವಾಗಿ ಹುಟ್ಟುವರು” ಎಂದು ಹೇಳಿದನು.

ದಾವೀದನೇ ಎಲ್ಲರಿಗಿಂತಲೂ ಕಿರಿಯನು. ಮೂರು ಮಂದಿ ಹಿರಿ ಮಕ್ಕಳು ಸೌಲನ ಜೊತೆಯಲ್ಲಿ ಯುದ್ಧಕ್ಕೆ ಹೋದ್ದರಿಂದ

ಆ ಕಾಲದಲ್ಲಿ ಎದೋಮ್ ದೇಶದಲ್ಲಿ ಅರಸನಿರಲಿಲ್ಲ. ಅವನ ಪ್ರತಿನಿಧಿಯೇ ಅದನ್ನು ಆಳುತ್ತಿದ್ದನು.

ಅಮಚ್ಯನಾದರೋ ಧೈರ್ಯದಿಂದ ತನ್ನ ಸೈನ್ಯವನ್ನು ಕರೆದುಕೊಂಡು, ಉಪ್ಪಿನ ತಗ್ಗಿಗೆ ಹೋಗಿ ಸೇಯೀರ್ಯರಲ್ಲಿ ಹತ್ತು ಸಾವಿರ ಮಂದಿಯನ್ನು ಕೊಂದುಹಾಕಿದನು.

ಎದೋಮ್ಯರ ಮತ್ತು ಇಷ್ಮಾಯೇಲರ ಪಾಳೆಯಗಳವರು, ಮೋವಾಬ್ಯರು, ಹಗ್ರೀಯರು,

ಆಹಾ, ರಕ್ತವರ್ಣದ ಉಡುಪನ್ನಿಟ್ಟು, ಘನವಸ್ತ್ರಗಳನ್ನು ಧರಿಸಿಕೊಂಡು, ಮಹಾಶೌರ್ಯಯುಕ್ತನಾಗಿ ಮೆರೆಯುತ್ತಾ, ಎದೋಮಿನ ಬೊಚ್ರದಿಂದ ಬರುವ ಇವನು ಯಾರು? ಸತ್ಯಾನುಸಾರವಾಗಿ ಮಾತನಾಡುವವನು, ರಕ್ಷಿಸಲು ಸಮರ್ಥನು ಆದ ನಾನೇ.

¶ ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಎದೋಮು ಯೆಹೂದ ವಂಶಕ್ಕೆ ಪ್ರತಿಕಾರಮಾಡಿದೆ; ಮುಯ್ಯಿಗೆ ಮುಯ್ಯಿ ತೀರಿಸಿ ಮಹಾಪರಾಧವನ್ನು ನಡೆಸಿದೆ.”

ಯೆಹೋವನು ಇಂತೆನ್ನುತ್ತಾನೆ: “ಎದೋಮ್ ಬಹಳ ದ್ರೋಹಗಳನ್ನು ಮಾಡಿದ್ದರಿಂದ, ಅದಕ್ಕಾಗುವ ದಂಡನೆಯನ್ನು ನಾನು ತಪ್ಪಿಸುವುದೇ ಇಲ್ಲ. ಏಕೆಂದರೆ ಅವನು ಕತ್ತಿ ಹಿಡಿದು ತನ್ನ ಸಹೋದರರನ್ನು ಹಿಂದಟ್ಟಿದನು, ಕರುಣೆಯನ್ನು ತೋರಿಸಲಿಲ್ಲ. ರೋಷವನ್ನು ಸಾಧಿಸಿದ್ದಾರೆ. ಇದರಿಂದ ಅವನ ಕೋಪವು ಸದಾ ಹರಿಯುತ್ತಿತ್ತು, ಆತನು ರೌದ್ರವನ್ನು ನಿರಂತರವಾಗಿ ಇಟ್ಟುಕೊಂಡನು.

ರಕ್ಷಕರು ಚೀಯೋನ್ ಪರ್ವತದಲ್ಲಿ ಎದ್ದು ಏಸಾವನ ಪರ್ವತವನ್ನು ಆಳುವರು. ಆಗ ಆ ರಾಜ್ಯವು ಯೆಹೋವನದಾಗಿರುವುದು.

ಇದು ಮಾತ್ರವಲ್ಲದೆ ರೆಬೆಕ್ಕಳು ಸಹ ನಮ್ಮ ಮೂಲಪಿತೃವಾದ ಇಸಾಕನಿಂದ ಅವಳಿ ಜವಳಿ ಮಕ್ಕಳಿಗೆ ಬಸುರಾದಾಗ ಅದರಂತೆಯೇ ಆಯಿತು.