TSK

TSK · ಆದಿಕಾಂಡ 26:24

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ಈ ಸಂಗತಿಗಳು ನಡೆದ ಮೇಲೆ ಅಬ್ರಾಮನಿಗೆ ದರ್ಶನದಲ್ಲಿ ಯೆಹೋವನ ವಾಕ್ಯವುಂಟಾಗಿ ಹೇಳಿದೇನೆಂದರೆ, “ಅಬ್ರಾಮನೇ, ಭಯಪಡಬೇಡ, ನಾನು ನಿನಗೆ ಗುರಾಣಿಯಾಗಿದ್ದೇನೆ ಮತ್ತು ನಿನಗೆ ಅತ್ಯಧಿಕ ಬಹುಮಾನವು ದೊರೆಯುವುದು.”

ತರುವಾಯ ಅಬ್ರಹಾಮನು ತನ್ನ ಸೇವಕರ ಬಳಿಗೆ ಹಿಂತಿರುಗಿ ಬಂದನು. ಅವರು ಹೊರಟು ಅವನ ಜೊತೆಯಲ್ಲಿ ಬೇರ್ಷೆಬಕ್ಕೆ ಹೋದರು. ಅಬ್ರಹಾಮನು ಬೇರ್ಷೆಬದಲ್ಲಿ ವಾಸವಾಗಿದ್ದನು.

ಅಲ್ಲಿ ಯೆಹೋವನು ಇಸಾಕನಿಗೆ ದರ್ಶನಕೊಟ್ಟು, “ನೀನು ಐಗುಪ್ತ ದೇಶಕ್ಕೆ ಇಳಿದು ಹೋಗಬೇಡ; ನಾನು ಹೇಳುವ ದೇಶದಲ್ಲಿ ನೀನು ವಾಸಮಾಡಬೇಕು.

ಇದಲ್ಲದೆ ಯೆಹೋವನು ಅದರ ಮೇಲೆ ನಿಂತುಕೊಂಡು, “ನಿನ್ನ ತಂದೆಯಾದ ಅಬ್ರಹಾಮನ ದೇವರೂ, ಇಸಾಕನ ದೇವರೂ ಆಗಿರುವ ಯೆಹೋವನು ನಾನೇ. ನೀನು ಮಲಗಿರುವ ಭೂಮಿಯನ್ನು ನಿನಗೂ, ನಿನ್ನ ಸಂತತಿಗೂ ಕೊಡುವೆನು.

ಯೆಹೋವನು ಯೋಸೇಫನ ಸಂಗಡ ಇದ್ದುದರಿಂದ ಅವನು ಕೃತಾರ್ಥನಾದನು. ಐಗುಪ್ತನಾದ ತನ್ನ ದಣಿಯ ಮನೆಯೊಳಗೆ ಯೋಸೇಫನು ಸೇವಕನಾದನು.

ಇದಲ್ಲದೆ ಆತನು ಅವನಿಗೆ, “ನಾನು ನಿನ್ನ ತಂದೆಯಾದ, ಅಬ್ರಹಾಮನ ದೇವರು, ಇಸಾಕನ ದೇವರು, ಯಾಕೋಬನ ದೇವರೂ ಆಗಿದ್ದೇನೆ” ಎಂದು ಹೇಳಿದನು. ಮೋಶೆಯು ದೇವರನ್ನು ನೋಡುವುದಕ್ಕೆ ಭಯಪಟ್ಟು ಮುಖವನ್ನು ಮುಚ್ಚಿಕೊಂಡನು.

ನಾನು ಯಾಕೋಬ್ ಇಸಾಕ್ ಅಬ್ರಹಾಮ್ ಇವರಿಗೆ ಮಾಡಿದ ಒಡಂಬಡಿಕೆಯನ್ನು ನೆನಪಿಗೆ ತಂದುಕೊಂಡು ನೆರವೇರಿಸುವೆನು; ಅವರ ಸ್ವದೇಶವನ್ನೂ ನಾನು ದಯೆಯಿಂದ ಜ್ಞಾಪಿಸಿಕೊಳ್ಳುವೆನು.

ನೀವು ಶೂರರಾಗಿ ಧೈರ್ಯದಿಂದ ಇರಿ; ಅವರಿಗೆ ಅಂಜಬೇಡಿರಿ, ಕಳವಳಪಡಬೇಡಿರಿ. ನಿಮ್ಮ ದೇವರಾದ ಯೆಹೋವನೇ ನಿಮ್ಮ ಸಂಗಡ ಇರುತ್ತಾನಲ್ಲಾ; ಆತನು ನಿಮ್ಮನ್ನು ಕೈಬಿಡುವುದಿಲ್ಲ, ಅಪಜಯಕ್ಕೆ ಗುರಿಪಡಿಸುವುದೇ ಇಲ್ಲ” ಎಂದು ಹೇಳಿದನು.

ಆಗ ಎಲೀಯನು ಆಕೆಗೆ, “ಹೆದರಬೇಡ, ನೀನು ಹೇಳಿದಂತೆಯೇ ಮಾಡು. ಆದರೆ ಮೊದಲು ಅದರಿಂದ ನನಗೋಸ್ಕರ ಒಂದು ಚಿಕ್ಕ ರೊಟ್ಟಿಯನ್ನು ಮಾಡಿಕೊಂಡು ಬಾ. ತರುವಾಯ ನಿನಗೂ ನಿನ್ನ ಮಗನಿಗೂ ಮಾಡಿಕೋ.

ದೇವರು ನಮಗೆ ಆಶ್ರಯದುರ್ಗವಾಗಿದ್ದಾನೆ; ಆತನು ಇಕ್ಕಟ್ಟಿನಲ್ಲಿ ನಮಗೆ ವಿಶೇಷ ಸಹಾಯಕನು.

ನೀನಂತು ಹೆದರಬೇಡ, ನಾನೇ ನಿನ್ನೊಂದಿಗಿದ್ದೇನೆ, ದಿಗ್ಭ್ರಮೆಗೊಳ್ಳದಿರು, ನಾನೇ ನಿನ್ನ ದೇವರು. ನಾನು ನಿನ್ನನ್ನು ಬಲಪಡಿಸುತ್ತೇನೆ. ಹೌದು, ನಿನಗೆ ಸಹಾಯಮಾಡುತ್ತೇನೆ. ನನ್ನ ಧರ್ಮದ ಬಲಗೈಯನ್ನು ನಿನಗೆ ಆಧಾರಮಾಡುತ್ತೇನೆ.

ಈಗಲಾದರೋ, ಯಾಕೋಬನ ವಂಶವೇ, ಇಸ್ರಾಯೇಲ್ ಸಂತಾನವೇ, ನಿನ್ನನ್ನು ಸೃಷ್ಟಿಸಿ ರೂಪಿಸಿದವನಾದ ಯೆಹೋವನು ಹೀಗೆನ್ನುತ್ತಾನೆ, “ಭಯಪಡಬೇಡ, ನಾನು ನಿನ್ನನ್ನು ವಿಮೋಚಿಸಿದೆನಲ್ಲಾ, ನಿನ್ನ ಹೆಸರು ಹಿಡಿದು ಕರೆದೆನಲ್ಲಾ, ನೀನು ನನ್ನವನೇ.

ಧರ್ಮವನ್ನರಿತು ನನ್ನ ಉಪದೇಶವನ್ನು ಹೃದಯದಲ್ಲಿಟ್ಟುಕೊಂಡಿರುವ ಜನರೇ ಕಿವಿಗೊಡಿರಿ, ಮನುಷ್ಯರ ದೂರಿಗೆ ಹೆದರಬೇಡಿರಿ, ಅವರ ದೂಷಣೆಗೆ ಅಂಜದಿರಿ.

ನಾನು ನಿನ್ನನ್ನು ಕೂಗಿಕೊಂಡಾಗ ನನ್ನ ಸಮೀಪಕ್ಕೆ ಬಂದು “ಭಯಪಡಬೇಡ” ಎಂದು ಅಭಯವಚನ ನೀಡಿದೆ.

‹ಚಿಕ್ಕ ಹಿಂಡೇ, ಹೆದರಬೇಡ; ಆ ರಾಜ್ಯವನ್ನು ನಿಮಗೆ ದಯಪಾಲಿಸುವುದಕ್ಕೆ ನಿಮ್ಮ ತಂದೆಯು ಸಂತೋಷವುಳ್ಳವನಾಗಿದ್ದಾನೆ.›

ಆದ್ದರಿಂದ, “ಕರ್ತನು ನನ್ನ ಸಹಾಯಕನು ನಾನು ಭಯಪಡುವುದಿಲ್ಲ, ಮನುಷ್ಯನು ನನಗೆ ಏನು ಮಾಡಿಯಾನು?” ಎಂದು ನಾವು ಧೈರ್ಯವಾಗಿ ಹೇಳಬಲ್ಲೆವು.