ಅಲ್ಲಿ ಯೆಹೋವನು ಅಬ್ರಾಮನಿಗೆ ದರ್ಶನದಲ್ಲಿ, “ನಾನು ಈ ದೇಶವನ್ನು ನಿನ್ನ ಸಂತಾನಕ್ಕೆ ಕೊಡುವೆನು” ಅಂದನು. ತನಗೆ ದರ್ಶನಕೊಟ್ಟ ಯೆಹೋವನಿಗೆ ಅಬ್ರಾಮನು ಯಜ್ಞವೇದಿಯನ್ನು ಕಟ್ಟಿಸಿದನು.
TSK
TSK · ಆದಿಕಾಂಡ 26:3
Treasury of Scripture Knowledge references in ಕನ್ನಡ IRV.
ನೀನೆದ್ದು, ಈ ದೇಶದ ಎಲ್ಲಾ ಕಡೆಯಲ್ಲಿಯೂ ತಿರುಗಾಡು; ಇದನ್ನು ನಿನಗೆ ಕೊಡುವೆನು” ಎಂದು ಹೇಳಿದನು.
ನೀನು ಪ್ರವಾಸಿಯಾಗಿರುವ ಕಾನಾನ್ ದೇಶವನ್ನೆಲ್ಲಾ ನಿನಗೂ ನಿನ್ನ ಸಂತತಿಗೂ ಶಾಶ್ವತ ಸ್ವತ್ತಾಗಿ ಕೊಟ್ಟು ಎಂದೆಂದಿಗೂ ಅವರಿಗೆ ದೇವರಾಗಿರುವೆನು” ಎಂದನು.
¶ ಅಬ್ರಹಾಮನು ಅಲ್ಲಿಂದ ಕಾನಾನ್ ದೇಶದ ದಕ್ಷಿಣ ಸೀಮೆಗೆ ಪ್ರಯಾಣ ಮಾಡುತ್ತಾ ಕಾದೇಶಿಗೂ ಶೂರಿಗೂ ನಡುವೆ ವಾಸ ಮಾಡಿ ಕೆಲವು ಕಾಲ ಗೆರಾರಿನಲ್ಲೂ ವಾಸಮಾಡಿದನು.
¶ ಇಸಾಕನು ಆ ದೇಶದಲ್ಲಿ ಬೀಜವನ್ನು ಬಿತ್ತಿ ಅದೇ ವರ್ಷದಲ್ಲಿ ನೂರರಷ್ಟು ಬೆಳೆಯನ್ನು ಕೊಯ್ದನು; ಯೆಹೋವನು ಅವನನ್ನು ಅಭಿವೃದ್ಧಿಪಡಿಸಿದನು;
ಆ ರಾತ್ರಿ ಯೆಹೋವನು ಅವನಿಗೆ ಕಾಣಿಸಿಕೊಂಡು, “ನಾನು ನಿನ್ನ ತಂದೆಯಾದ ಅಬ್ರಹಾಮನ ದೇವರು; ನೀನು ಭಯಪಡಬೇಡ; ನಾನು ನಿನ್ನ ಸಂಗಡ ಇದ್ದೇನೆ; ನನ್ನ ಸೇವಕನಾದ ಅಬ್ರಹಾಮನ ನಿಮಿತ್ತ ನಿನ್ನನ್ನು ಆಶೀರ್ವದಿಸಿ ನಿನ್ನ ಸಂತತಿಯನ್ನು ಹೆಚ್ಚಿಸುವೆನು” ಎಂದು ಹೇಳಿದನು.
ಯೆಹೋವನು ಯೋಸೇಫನ ಸಂಗಡ ಇದ್ದುದರಿಂದ ಅವನು ಕೃತಾರ್ಥನಾದನು. ಐಗುಪ್ತನಾದ ತನ್ನ ದಣಿಯ ಮನೆಯೊಳಗೆ ಯೋಸೇಫನು ಸೇವಕನಾದನು.
ದೇವರು ಅವರ ನರಳಾಟವನ್ನು ಕೇಳಿ, ತಾನು ಅಬ್ರಹಾಮ, ಇಸಾಕ, ಯಾಕೋಬನ ಸಂಗಡ ಮಾಡಿದ ಒಡಂಬಡಿಕೆಯನ್ನು ನೆನಪಿಗೆ ತಂದುಕೊಂಡನು.
ನಾನು ನಿಮ್ಮನ್ನು ನನ್ನ ಪ್ರಜೆಗಳನ್ನಾಗಿ ಆರಿಸಿಕೊಂಡು ನಿಮಗೆ ದೇವರಾಗಿರುವೆನು. ಐಗುಪ್ತ್ಯರು ಮಾಡಿಸುವ ಬಿಟ್ಟೀ ಸೇವೆಯನ್ನು ನಾನು ನಿಮಗೆ ತಪ್ಪಿಸಿದಾಗ ಯೆಹೋವನೆಂಬ ನಾನೇ ನಿಮ್ಮ ದೇವರಾಗಿದ್ದೇನೆ ಎಂಬುದು ನಿಮಗೆ ತಿಳಿಯುವುದು.
ಆತನು ಆ ಒಡಂಬಡಿಕೆಯನ್ನು ಅಬ್ರಹಾಮನ ಸಂಗಡ ಮಾಡಿಕೊಂಡನು ಮತ್ತು ಇಸಾಕನಿಗಾಗಿ ವಾಗ್ದಾನ ಮಾಡಿ ಭರವಸೆ ನೀಡಿದನು.
ಕೆಟ್ಟ ನಡತೆಯುಳ್ಳವರನ್ನು ನೋಡಿ ತಳಮಳಗೊಳ್ಳಬೇಡ; ದುರಾಚಾರಿಗಳನ್ನು ನೋಡಿ ಅಸೂಯೆಪಡಬೇಡ.
ಯೆಹೋವನೇ, ನನ್ನ ಪ್ರಾರ್ಥನೆಯನ್ನು ಲಾಲಿಸು; ನನ್ನ ಮೊರೆಗೆ ಕಿವಿಗೊಡು. ನನ್ನ ಕಣ್ಣೀರನ್ನು ನೋಡು, ಸುಮ್ಮನಿರಬೇಡ. ನನ್ನ ಪೂರ್ವಿಕರಂತೆಯೇ ನಾನು ನಿನ್ನ ಮರೆಹೊಕ್ಕಿರುವ ಪ್ರವಾಸಿಯೂ, ಪರದೇಶದವನೂ ಆಗಿದ್ದೇನಲ್ಲಾ.
ಆತನು ಆ ಒಡಂಬಡಿಕೆಯನ್ನು ಅಬ್ರಹಾಮನ ಸಂಗಡ ಮಾಡಿಕೊಂಡನು; ಇಸಾಕನಿಗೆ ತನ್ನ ವಾಗ್ದಾನಗಳನ್ನು ಕೊಟ್ಟನು.
ಭಯಪಡಬೇಡ, ನಾನು ನಿನ್ನ ಸಂಗಡ ಇದ್ದೇನೆ; ನಿನ್ನ ಸಂತತಿಯವರನ್ನು ಪೂರ್ವದಿಂದ ತರುವೆನು, ನಿನ್ನವರನ್ನು ಪಶ್ಚಿಮದಿಂದ ಕೂಡಿಸುವೆನು.
ನೀವು ಯಾವುದನ್ನು ನನ್ನಿಂದ ಕಲಿತು ಹೊಂದಿದ್ದೀರೋ, ಮತ್ತು ಯಾವುದನ್ನು ನನ್ನಲ್ಲಿ ಕೇಳಿ ಕಂಡಿರುವಿರೋ ಅದನ್ನೇ ಮಾಡುತ್ತಾ ಬನ್ನಿರಿ. ಹೀಗೆ ಮಾಡಿದರೆ ಶಾಂತಿದಾಯಕನಾದ ದೇವರು ನಿಮ್ಮೊಂದಿಗಿರುವನು.
ನಂಬಿಕೆಯಿಂದಲೇ ಅವನು ವಾಗ್ದಾನದ ದೇಶಕ್ಕೆ ಬಂದಾಗ, ಅಲ್ಲಿ ಅನ್ಯ ದೇಶದವನಂತೆ ಗುಡಾರಗಳಲ್ಲಿ ಇದ್ದುಕೊಂಡು ಪ್ರವಾಸಿಯಾಗಿ ಬದುಕಿದನು. ಅದೇ ವಾಗ್ದಾನಕ್ಕೆ ಸಹಭಾಧ್ಯರಾಗಿದ್ದ ಇಸಾಕನೂ, ಯಾಕೋಬನೂ ಅವನಂತೆಯೇ ಗುಡಾರಗಳಲ್ಲಿ ವಾಸಿಸಿದರು.