TSK

TSK · ಆದಿಕಾಂಡ 27:28

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ಅವನ ತಂದೆಯಾದ ಇಸಾಕನು ಅವನಿಗೆ, “ಸಾರವುಳ್ಳ ಭೂಮಿಯೂ ಮೇಲಿನಿಂದ ಬೀಳುವ ಆಕಾಶದ ಮಂಜು ಇರುವ ಸ್ಥಳದಲ್ಲಿ ನಿನ್ನ ನಿವಾಸವಿರುವುದು.

ಆಶೇರನಿಗೆ ಧಾನ್ಯ ಸಮೃದ್ಧಿಯಾಗುವುದು. ಅವನಲ್ಲಿ ರಾಜಭೋಗ ಪದಾರ್ಥಗಳು ದೊರಕುವವು.

ಇಸ್ರಾಯೇಲರು ಯೆಹೋವನಿಗೆ ಸಮರ್ಪಿಸುವ ಪ್ರಥಮಫಲಗಳು ಯಾವುವೆಂದರೆ: ಎಣ್ಣೆ, ದ್ರಾಕ್ಷಾರಸ, ಧಾನ್ಯ ಇವುಗಳಲ್ಲಿ ಶ್ರೇಷ್ಠವಾದದ್ದು ನಿನಗೇ ಸೇರಬೇಕೆಂದು ವಿಧಿಸಿದ್ದೇನೆ.

ನಿಮ್ಮ ದೇವರಾದ ಯೆಹೋವನು ಉತ್ತಮವಾದ ದೇಶಕ್ಕೆ ನಿಮ್ಮನ್ನು ಸೇರಿಸುತ್ತಾನೆ. ಆ ದೇಶದ ಹಳ್ಳಗಳಲ್ಲಿ ನೀರು ಯಾವಾಗಲೂ ಹರಿಯುತ್ತದೆ; ಮತ್ತು ತಗ್ಗುಗಳಲ್ಲಾಗಲಿ, ಗುಡ್ಡಗಳಲ್ಲಾಗಲಿ ಎಲ್ಲಾ ಕಡೆಯೂ ಬುಗ್ಗೆಗಳಿಂದ ನೀರು ಉಕ್ಕುತ್ತದೆ.

ನನ್ನ ಉಪದೇಶವು ಹಸಿಹುಲ್ಲಿನ ಮೇಲೆ ಮೆಲ್ಲಗೆ ಸುರಿಯುವ ಮಳೆಯ ತುಂತುರುಗಳಂತೆ ತಣ್ಣಗಿರುವುದು; ನನ್ನ ಬೋಧನೆಯು ಮಂಜಿನಂತೆಯೂ ಮತ್ತು ಕಾಯಿಪಲ್ಯಗಳ ಮೇಲೆ ಬೀಳುವ ಹದಮಳೆಯಂತೆಯೂ ಹಿತವಾಗಿರುವುದು.

ಆದಕಾರಣ ಇಸ್ರಾಯೇಲರು ಆಕಾಶದಿಂದ ಮಂಜು ಸುರಿದು, ಧಾನ್ಯವೂ ಮತ್ತು ದ್ರಾಕ್ಷಾರಸವೂ ಸಮೃದ್ಧಿಯಾಗಿರುವ ದೇಶದಲ್ಲೇ ಸೇರಿ ನಿರ್ಭಯವಾಗಿ ವಾಸಿಸುವವರಾದರು, ಯಾಕೋಬನ ವಂಶದವರು ಸುರಕ್ಷಿತರಾದರು.

ಗಿಲ್ಬೋವ ಗುಡ್ಡಗಳೇ, ನಿಮ್ಮ ಮೇಲೆ ಮಂಜು, ಮಳೆಯು, ನೈವೇದ್ಯಕ್ಕಾಗಿ ಫಲಿಸುವ ಹೊಲಗಳೂ ಇಲ್ಲದೆ ಹೋಗಲಿ. ಅಲ್ಲಿ ಪರಾಕ್ರಮಶಾಲಿಗಳ ಗುರಾಣಿಗಳು ಬಿದ್ದಿರುತ್ತವೆ. ಸೌಲನ ಗುರಾಣಿಯೂ ಅಭಿಷಿಕ್ತನಲ್ಲದವನ ಗುರಾಣಿಯಂತೆ ಬಿದ್ದಿದೆ.

¶ ಗಿಲ್ಯಾದಿನ ತಿಷ್ಬೀಯ ಊರಿನವನಾದ ಎಲೀಯ ಎಂಬುವವನು ಅಹಾಬನಿಗೆ, “ನಾನು ಸನ್ನಿಧಿಸೇವೆ ಮಾಡುತ್ತಿರುವ ಇಸ್ರಾಯೇಲ್ ದೇವರಾದ ಯೆಹೋವನಾಣೆ,

ನಿನ್ನ ಮಂದಿರದ ಸಮೃದ್ಧಿಯಿಂದ ಅವರನ್ನು ಸಂತೃಪ್ತಿಪಡಿಸುತ್ತೀ; ನಿನ್ನ ಸಂಭ್ರಮಪ್ರವಾಹದಲ್ಲಿ ಅವರಿಗೆ ಪಾನಮಾಡಿಸುತ್ತೀ.

ಹೃದಯಾನಂದಕರವಾದ ದ್ರಾಕ್ಷಾರಸವನ್ನು, ಮುಖಕ್ಕೆ ಕಾಂತಿಯನ್ನು ಉಂಟುಮಾಡುವ ಎಣ್ಣೆಯನ್ನು, ಪ್ರಾಣಾಧಾರವಾದ ರೊಟ್ಟಿಯನ್ನು ಸಂಪಾದಿಸಿಕೊಳ್ಳುತ್ತಾರೆ.

ಆಕಾಶಮಂಡಲವೇ, ಮೇಲಿನಿಂದ ಧರ್ಮರಸವನ್ನು ಮಳೆಯಂತೆ ಸುರಿಸು. ಭೂಮಿಯು ಒಡೆದು ರಕ್ಷಣೆಯನ್ನು ಮೊಳೆಯಿಸಿ, ಅದರೊಡನೆ ನೀತಿಫಲವನ್ನು ಬೆಳೆಯಿಸಲಿ. ಯೆಹೋವನೆಂಬ ನಾನೇ ಇದಕ್ಕೆಲ್ಲಾ ಕರ್ತನು.

ನಾನು ಇಸ್ರಾಯೇಲಿಗೆ ಇಬ್ಬನಿಯಂತಾಗುವೆನು; ಅದು ತಾವರೆಯಂತೆ ಅರಳುವುದು; ಲೆಬನೋನಿನ ದೇವದಾರು ಮರಗಳ ಹಾಗೆ ಬೇರು ಬಿಟ್ಟುಕೊಳ್ಳುವುದು.

ಯೆಹೋವನ ವರವಾದ ಇಬ್ಬನಿಯೂ ಮತ್ತು ಹುಲ್ಲನ್ನು ಬೆಳೆಯಿಸುವ ಹದಮಳೆಗಳೂ ಮಾನವರ ಪ್ರಯತ್ನವಿಲ್ಲದೆ ಹೇಗೆ ಸಮೃದ್ಧಿಯಾಗಿ ಬೆಳೆಯುವವು, ಮಾನವರ ನೆರವನ್ನು ನಿರೀಕ್ಷಿಸದೆ ಹೇಗೆ ಹಿತಕರವಾಗಿರುವವೋ, ಹಾಗೆಯೇ ಯಾಕೋಬಿನ ಜನಶೇಷವು ಬಹು ಜನಾಂಗಗಳ ಮಧ್ಯದಲ್ಲಿ ಹಿತಕರವಾಗಿರುವುದು.

ಆಹಾ, ಅವರ ಸೌಖ್ಯವೆಷ್ಟು, ಅವರ ಸೌಂದರ್ಯವೆಷ್ಟು! ಧಾನ್ಯವು ಯುವಕರನ್ನು, ದ್ರಾಕ್ಷಾರಸವು ಯುವತಿಯರನ್ನು ಪುಷ್ಟಿಗೊಳಿಸುವುದು.

¶ ನಂಬಿಕೆಯಿಂದಲೇ ಇಸಾಕನು ಯಾಕೋಬನನ್ನು ಮತ್ತು ಏಸಾವನನ್ನು ಆಶೀರ್ವದಿಸಿದಾಗ ಮುಂದೆ ಸಂಭವಿಸಬಹುದಾದ ವಿಷಯಗಳನ್ನು ಸೂಚಿಸಿದನು.