TSK

TSK · ಆದಿಕಾಂಡ 28:15

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಆ ರಾತ್ರಿ ಯೆಹೋವನು ಅವನಿಗೆ ಕಾಣಿಸಿಕೊಂಡು, “ನಾನು ನಿನ್ನ ತಂದೆಯಾದ ಅಬ್ರಹಾಮನ ದೇವರು; ನೀನು ಭಯಪಡಬೇಡ; ನಾನು ನಿನ್ನ ಸಂಗಡ ಇದ್ದೇನೆ; ನನ್ನ ಸೇವಕನಾದ ಅಬ್ರಹಾಮನ ನಿಮಿತ್ತ ನಿನ್ನನ್ನು ಆಶೀರ್ವದಿಸಿ ನಿನ್ನ ಸಂತತಿಯನ್ನು ಹೆಚ್ಚಿಸುವೆನು” ಎಂದು ಹೇಳಿದನು.

¶ ರಾಹೇಲಳು ಯೋಸೇಫನನ್ನು ಹೆತ್ತ ನಂತರ ಯಾಕೋಬನು ಲಾಬಾನನಿಗೆ, “ನಾನು ನನ್ನ ದೇಶದಲ್ಲಿರುವ ಸ್ವಂತ ಊರಿಗೆ ಹೋಗಲು ನನಗೆ ಅಪ್ಪಣೆಯಾಗಬೇಕು.

¶ ಇದಲ್ಲದೆ ಯಾಕೋಬನು ದೇವರನ್ನು ಪ್ರಾರ್ಥಿಸಿ, “ಯೆಹೋವನೇ, ನನ್ನ ತಂದೆಯಾದ ಅಬ್ರಹಾಮನ ದೇವರೇ, ನನ್ನ ತಂದೆಯಾದ ಇಸಾಕನ ದೇವರೇ, ‘ನಿನ್ನ ಸ್ವದೇಶಕ್ಕೂ, ಬಂಧುಗಳ ಬಳಿಗೂ ತಿರುಗಿ ಹೋಗಬೇಕೆಂದು ನನಗೆ ಆಜ್ಞಾಪಿಸಿ ನಿನಗೆ ಒಳ್ಳೆಯದನ್ನು ಮಾಡುವೆನೆಂದು’ ನನಗೆ ವಾಗ್ದಾನ ಮಾಡಿದ ಯೆಹೋವನೇ,

¶ ಹೀಗೆ ಯಾಕೋಬನೂ ಅವನ ಸಂಗಡ ಇದ್ದ ಜನರೆಲ್ಲರೂ ಕಾನಾನ್ ದೇಶದಲ್ಲಿರುವ ಬೇತೇಲ್ ಎಂಬ ಲೂಜಿಗೆ ಬಂದರು.

¶ ಆದರೆ ಯೆಹೋವನು ಯೋಸೇಫನ ಸಂಗಡ ಇದ್ದು ಅವನ ಮೇಲೆ ಕರುಣೆಯನ್ನಿಟ್ಟು ಸೆರೆಮನೆಯ ಯಜಮಾನನಿಂದ ದಯೆ ದೊರಕುವಂತೆ ಮಾಡಿದನು.

ನನ್ನನ್ನು ಎಲ್ಲಾ ಕೇಡುಗಳಿಂದ ತಪ್ಪಿಸಿ ಕಾಪಾಡುತ್ತಾ ಬಂದ ದೂತನಾಗಿಯೂ ಇರುವಾತನು ಈ ಹುಡುಗರನ್ನು ಆಶೀರ್ವದಿಸಲಿ. ಇವರು ನನ್ನ ಹೆಸರನ್ನು, ನನ್ನ ಪೂರ್ವಿಕರಾದ ಅಬ್ರಹಾಮ ಇಸಾಕರ ಹೆಸರಿನಿಂದ ಇವರ ಹೆಸರುಗಳು ನೆಲೆಗೊಳ್ಳಲಿ, ಇವರು ಭೂಮಿಯ ಮೇಲೆ ಹೆಚ್ಚಿ ಬಹು ಸಂತಾನವನ್ನು ಪಡೆಯಲಿ” ಎಂದನು.

ಅದಕ್ಕೆ ದೇವರು, “ನಿಶ್ಚಯವಾಗಿ ನಾನು ನಿನ್ನ ಸಂಗಡ ಇರುವೆನು. ನೀನು ನನ್ನ ಜನರನ್ನು ಐಗುಪ್ತದೇಶದಿಂದ ಹೊರಗೆ ತಂದಾಗ ನೀವು ಈ ಬೆಟ್ಟದಲ್ಲೇ ನನ್ನನ್ನು ಆರಾಧಿಸುವಿರಿ. ನಿನ್ನನ್ನು ಕಳುಹಿಸಿದವನು ನಾನೇ ಎಂಬುವುದಕ್ಕೆ ಇದು ನಿನಗೆ ಗುರುತಾಗಿರುವುದು” ಅಂದನು.

ಅವರ ಪೂರ್ವಿಕರ ಸಂಗಡ ಮಾಡಿಕೊಂಡ ಒಡಂಬಡಿಕೆಯನ್ನು ನೆನಪಿಗೆ ತಂದುಕೊಂಡು ಅವರಿಗೆ ಹಿತವನ್ನು ಮಾಡುವೆನು. ನಾನು ಅವರಿಗೆ ದೇವರಾಗಿರಬೇಕೆಂದು ಅವರ ಪೂರ್ವಿಕರನ್ನು ಎಲ್ಲಾ ಜನಾಂಗಗಳ ಎದುರಿನಲ್ಲಿಯೇ ಐಗುಪ್ತದೇಶದೊಳಗಿಂದ ಬರಮಾಡಿದೆನಲ್ಲವೇ. ನಾನು ಯೆಹೋವನು” ಎಂಬುದೇ.

ನೀವು ಶೂರರಾಗಿ ಧೈರ್ಯದಿಂದ ಇರಿ; ಅವರಿಗೆ ಅಂಜಬೇಡಿರಿ, ಕಳವಳಪಡಬೇಡಿರಿ. ನಿಮ್ಮ ದೇವರಾದ ಯೆಹೋವನೇ ನಿಮ್ಮ ಸಂಗಡ ಇರುತ್ತಾನಲ್ಲಾ; ಆತನು ನಿಮ್ಮನ್ನು ಕೈಬಿಡುವುದಿಲ್ಲ, ಅಪಜಯಕ್ಕೆ ಗುರಿಪಡಿಸುವುದೇ ಇಲ್ಲ” ಎಂದು ಹೇಳಿದನು.

ನಿನ್ನ ಜೀವಮಾನದಲ್ಲೆಲ್ಲಾ ಒಬ್ಬನೂ ನಿನ್ನ ಮುಂದೆ ನಿಲ್ಲನು; ನಾನು ಮೋಶೆಯ ಸಂಗಡ ಇದ್ದ ಹಾಗೆ ನಿನ್ನ ಸಂಗಡವೂ ಇರುವೆನು.

ಯೆಹೋವನು ಅವನಿಗೆ, “ನಾನು ನಿನ್ನ ಸಂಗಡ ಇರುವುದರಿಂದ ನೀನು ಮಿದ್ಯಾನ್ಯರನ್ನೂ ಒಬ್ಬ ಮನುಷ್ಯನನ್ನೋ ಎಂಬಂತೆ ಸಂಹರಿಸಿಬಿಡುವಿ” ಅಂದನು.

ಸೇನಾಧೀಶ್ವರನಾದ ಯೆಹೋವನು ನಮ್ಮ ಸಂಗಡ ಇದ್ದಾನೆ; ಯಾಕೋಬ ವಂಶದವರ ದೇವರು ನಮಗೆ ಆಶ್ರಯ ದುರ್ಗವಾಗಿದ್ದಾನೆ. ಸೆಲಾ

ನೀನು ಹೋಗುವಲ್ಲೆಲ್ಲಾ ನಿನ್ನನ್ನು ಕಾಯುವುದಕ್ಕೆ ಆತನು ನಿನ್ನ ವಿಷಯವಾಗಿ ತನ್ನ ದೂತರಿಗೆ ಅಪ್ಪಣೆಕೊಡುವನು.

ಯೆಹೋವನು ನಿನ್ನನ್ನು ಎಲ್ಲಾ ಕೇಡಿನಿಂದ ತಪ್ಪಿಸುವನು; ನಿನ್ನ ಪ್ರಾಣವನ್ನು ಕಾಯುವನು.

ಆಲೋಚನೆ ಮಾಡಿಕೊಳ್ಳಿರಿ, ಅದು ಮುರಿದುಹೋಗುವುದು. ಅಪ್ಪಣೆ ಮಾಡಿರಿ, ಅದು ನಿಲ್ಲುವುದಿಲ್ಲ. ಏಕೆಂದರೆ ದೇವರು ನಮ್ಮ ಕೂಡ ಇದ್ದಾನಷ್ಟೆ.

ನೀನು ಜಲರಾಶಿಯನ್ನು ಹಾದು ಹೋಗುವಾಗ ನಾನು ನಿನ್ನ ಸಂಗಡ ಇರುವೆನು, ನದಿಗಳನ್ನು ದಾಟುವಾಗ ಅವು ನಿನ್ನನ್ನು ಮುಳುಗಿಸುವುದಿಲ್ಲ, ಬೆಂಕಿಯಲ್ಲಿ ನಡೆಯುವಾಗ ನೀನು ಸುಟ್ಟುಹೋಗುವುದಿಲ್ಲ, ಜ್ವಾಲೆಯು ನಿನ್ನನ್ನು ದಹಿಸದು.

‘ಇಸ್ರಾಯೇಲರನ್ನು ಬಡಗಣ ದೇಶದಿಂದಲೂ, ತಾನು ಅವರನ್ನು ತಳ್ಳಿಬಿಟ್ಟಿದ್ದ ಸಕಲ ಸೀಮೆಗಳಿಂದಲೂ ಉದ್ಧರಿಸಿದ ಯೆಹೋವನ ಜೀವದಾಣೆ’ ಎಂದು ಪ್ರಮಾಣಮಾಡುವರು; ನಾನು ಅವರ ಪೂರ್ವಿಕರಿಗೆ ದಯಪಾಲಿಸಿದ ದೇಶಕ್ಕೆ ಅವರನ್ನು ಹಿಂದಿರುಗಿಸುವೆನಷ್ಟೆ” ಎಂದು ಯೆಹೋವನು ಘೋಷಿಸುತ್ತಾನೆ.

‹ಭೂಮ್ಯಾಕಾಶಗಳು ಅಳಿದುಹೋಗುವವು, ಆದರೆ ನನ್ನ ವಾಕ್ಯಗಳೋ ಅಳಿದುಹೋಗುವುದೇ ಇಲ್ಲ.›

‹ನಾನು ಅವುಗಳಿಗೆ ನಿತ್ಯಜೀವವನ್ನು ಕೊಡುತ್ತೇನೆ. ಅವು ಎಂದೆಂದಿಗೂ ನಾಶವಾಗುವುದೇ ಇಲ್ಲ. ಅವುಗಳನ್ನು ಯಾರೂ ನನ್ನ ಕೈಯಿಂದ ಕಸಿದುಕೊಳ್ಳಲಾರರು.›

ದೇಹಸಾಧನೆಯು ಸ್ವಲ್ಪಮಟ್ಟಿಗೆ ಪ್ರಯೋಜನವಾಗಿದೆ, ಭಕ್ತಿಯಾದರೋ ಎಲ್ಲಾ ವಿಧದಲ್ಲಿ ಪ್ರಯೋಜನವಾದದ್ದು. ಅದಕ್ಕೆ ಇಹಪರಗಳಲ್ಲಿನ ಜೀವನಕ್ಕೆ ವಾಗ್ದಾನ ಉಂಟು.

¶ ಯೇಸು ಕ್ರಿಸ್ತನ ಸೇವಕನೂ, ಯಾಕೋಬನ ತಮ್ಮನೂ ಆಗಿರುವ ಯೂದನು ಕರೆಯಲ್ಪಟ್ಟವರಿಗೆ, ತಂದೆಯಾದ ದೇವರಲ್ಲಿ ಪ್ರಿಯರಾದವರಿಗೆ, ಯೇಸು ಕ್ರಿಸ್ತನಿಗಾಗಿ ಕಾಪಾಡಲ್ಪಟ್ಟವರಿಗೆ ಬರೆಯುವುದೇನೆಂದರೆ,