¶ ದೇವರು ಯಾಕೋಬನಿಗೆ, “ನೀನು ಈ ಸ್ಥಳವನ್ನು ಬಿಟ್ಟು ಗಟ್ಟಾ ಹತ್ತಿ ಬೇತೇಲಿಗೆ ಹೋಗಿ ಅಲ್ಲಿ ವಾಸಮಾಡು. ನೀನು ನಿನ್ನ ಅಣ್ಣನಾದ ಏಸಾವನ ಬಳಿಯಿಂದ ಓಡಿ ಹೋದ ಕಾಲದಲ್ಲಿ ದೇವರು ಅಲ್ಲಿ ನಿನಗೆ ದರ್ಶನಕೊಟ್ಟನಲ್ಲಾ, ಆತನಿಗಾಗಿ ಯಜ್ಞವೇದಿಯನ್ನು ಕಟ್ಟಿಸು” ಎಂದು ಹೇಳಿದನು.
TSK
TSK · ಆದಿಕಾಂಡ 28:19
Treasury of Scripture Knowledge references in ಕನ್ನಡ IRV.
¶ ಯಾಕೋಬನು, ಯೋಸೇಫನಿಗೆ, “ಸರ್ವಶಕ್ತನಾದ ದೇವರು ಕಾನಾನ್ ದೇಶದ ಲೂಜ್ ಎಂಬಲ್ಲಿ ನನಗೆ ದರ್ಶನ ಕೊಟ್ಟು ಆಶೀರ್ವದಿಸಿದನು.
ಅಲ್ಲಿಂದ ದಕ್ಷಿಣಕ್ಕೆ ತಿರುಗಿಕೊಂಡು ಈಗ ಬೇತೇಲ್ ಎನ್ನಿಸಿಕೊಳ್ಳುವ ಲೂಜ್ ಊರಿರುವ ಬೆಟ್ಟಕ್ಕೆ ಹೋಗುತ್ತದೆ.
¶ ಆಗ ಇಸ್ರಾಯೇಲ್ಯರೆಲ್ಲರೂ, ಎಲ್ಲಾ ಜನರೂ ಬೇತೇಲಿಗೆ ಹೋಗಿ ಅಲ್ಲಿ ಯೆಹೋವನ ಮುಂದೆ ಅಳುತ್ತಾ ಬಿದ್ದು ಸಾಯಂಕಾಲದ ವರೆಗೆ ಉಪವಾಸಮಾಡಿದರು. ಅಲ್ಲಿ ಅವರು ಆತನಿಗೆ ಸರ್ವಾಂಗಹೋಮಗಳನ್ನೂ, ಸಮಾಧಾನ ಯಜ್ಞಗಳನ್ನೂ ಸಮರ್ಪಿಸಿದರು.
ನಂತರ ಅವನು ಅವುಗಳಲ್ಲಿ ಒಂದನ್ನು ಬೇತೇಲಿನಲ್ಲಿರಿಸಿ, ಇನ್ನೊಂದನ್ನು ದಾನಿಗೆ ಕಳುಹಿಸಿದನು.
ಅಬೀಯನು, ಯಾರೊಬ್ಬಾಮನನ್ನು ಹಿಂದಟ್ಟಿ, ಅವನಿಂದ ಬೇತೇಲ್, ಯೆಷಾನಾ, ಎಪ್ರೋನ್ ಎಂಬ ಪಟ್ಟಣಗಳನ್ನೂ ಅವುಗಳಿಗೆ ಸೇರಿದ ಗ್ರಾಮಗಳನ್ನೂ ಕಿತ್ತುಕೊಂಡನು.
ಹೌದು, ದೇವದೂತನ ಸಂಗಡ ಹೋರಾಡಿ ಗೆದ್ದನು; ಅಳುತ್ತಾ ಆತನ ಕೃಪೆಯನ್ನು ಬೇಡಿಕೊಂಡನು. ಯೆಹೋವನೆಂಬ ಸೇನಾಧೀಶ್ವರನಾದ ದೇವರು ಅವನನ್ನು ಬೇತೇಲಿನಲ್ಲಿಯು ಕಂಡು ಅಲ್ಲಿ ಅವನೊಡನೆ ಮಾತನಾಡಿದನು.