ಸಾರಯಳು ಬಂಜೆಯಾಗಿದುದರಿಂದ ಆಕೆಗೆ ಮಕ್ಕಳಿರಲಿಲ್ಲ.
TSK
TSK · ಆದಿಕಾಂಡ 29:31
Treasury of Scripture Knowledge references in ಕನ್ನಡ IRV.
ಅಬ್ರಹಾಮನ ಹೆಂಡತಿಯಾದ ಸಾರಳ ನಿಮಿತ್ತ ಮೊದಲು ಯೆಹೋವನು ಅಬೀಮೆಲೆಕನ ಮನೆಯಲ್ಲಿದ್ದ ಸ್ತ್ರೀಯರೆಲ್ಲರನ್ನು ಬಂಜೆಯರನ್ನಾಗಿ ಮಾಡಿದ್ದನು.
¶ ತಂದೆಯು ಯಾಕೋಬನಿಗೆ ಮಾಡಿದ ಆಶೀರ್ವಾದದ ನಿಮಿತ್ತ ಏಸಾವನು ಯಾಕೋಬನನ್ನು ಹಗೆಮಾಡಿ ತನ್ನ ಮನಸ್ಸಿನೊಳಗೆ, “ತಂದೆಗೋಸ್ಕರ ದುಃಖಿಸುವ ಕಾಲ ಸಮೀಪಿಸಿತು. ತರುವಾಯ ನನ್ನ ತಮ್ಮನಾದ ಯಾಕೋಬನನ್ನು ಕೊಲ್ಲುವೆನು” ಎಂದುಕೊಂಡನು.
¶ ರಾಹೇಲಳು ತಾನು ಯಾಕೋಬನಿಗೆ ಮಕ್ಕಳನ್ನು ಹೆರದೆ ಇರುವುದನ್ನು ನೋಡಿ ತನ್ನ ಅಕ್ಕನ ಮೇಲೆ ಹೊಟ್ಟೆಕಿಚ್ಚುಪಟ್ಟು, ಯಾಕೋಬನಿಗೆ, “ಮಕ್ಕಳನ್ನು ನನಗೆ ಕೊಡು, ಇಲ್ಲದಿದ್ದರೆ ಸಾಯುವೆನು” ಎಂದು ಹೇಳಿದಳು.
¶ ಆಗ ಯೆಹೋವನು, “ಐಗುಪ್ತ ದೇಶದಲ್ಲಿರುವ ನನ್ನ ಜನರ ದುರವಸ್ಥೆಯನ್ನು ನಿಶ್ಚಯವಾಗಿ ನೋಡಿದ್ದೇನೆ. ಬಿಟ್ಟೀ ಕೆಲಸ ಮಾಡುವ ವಿಷಯದಲ್ಲಿ, ಅವರು ಇಟ್ಟ ಮೊರೆಯು ನನಗೆ ಕೇಳಿಸಿತು. ಅವರ ದುಃಖವನ್ನೆಲ್ಲಾ ನಾನು ಬಲ್ಲೆನು.
¶ ಚೊರ್ಗಾ ಎಂಬ ಊರಲ್ಲಿ ದಾನ್ ಕುಲದವನಾದ ಮಾನೋಹ ಎಂಬ ಒಬ್ಬ ಮನುಷ್ಯನಿದ್ದನು. ಅವನ ಹೆಂಡತಿಯು ಬಂಜೆಯಾಗಿದ್ದರಿಂದ ಅವನಿಗೆ ಮಕ್ಕಳಿರಲಿಲ್ಲ.
ಹನ್ನಳು ದಿನತುಂಬಿದ ಮೇಲೆ ಒಬ್ಬ ಮಗನನ್ನು ಹೆತ್ತಳು. ಯೆಹೋವನನ್ನು ಬೇಡಿ ಪಡೆದುಕೊಂಡೆನೆಂದು ಹೇಳಿ ಆ ಮಗನಿಗೆ ಸಮುವೇಲನೆಂದು ಹೆಸರಿಟ್ಟಳು.
ಯೆಹೋವನು ಕಟಾಕ್ಷಿಸಿದ್ದರಿಂದ ಹನ್ನಳಿಗೆ ಮೂರು ಮಂದಿ ಗಂಡುಮಕ್ಕಳೂ, ಇಬ್ಬರು ಹೆಣ್ಣುಮಕ್ಕಳಾದರು. ಬಾಲಕನಾಗಿದ್ದ ಸಮುವೇಲನು ಯೆಹೋವನ ಸನ್ನಿಧಿಯಲ್ಲೇ ಬೆಳೆದು ದೊಡ್ಡವನಾದನು.
“ಆದರೆ ನಾನು ಯಾಕೋಬನನ್ನು ಪ್ರೀತಿಸಿ, ಏಸಾವನನ್ನು ದ್ವೇಷಿಸಿ, ಅವನ ಬೆಟ್ಟಗಳನ್ನು ಹಾಳುಮಾಡಿ ಅವನ ಪಿತ್ರಾರ್ಜಿತ ಆಸ್ತಿಯನ್ನು ಕಾಡುನರಿಗಳ ಪಾಲುಮಾಡಿದ್ದೇನಷ್ಟೆ” ಇದು ಯೆಹೋವನ ನುಡಿ.
‹ತಂದೆಯ ಮೇಲಾಗಲಿ ತಾಯಿಯ ಮೇಲಾಗಲಿ ನನ್ನ ಮೇಲೆ ಇಡುವುದಕ್ಕಿಂತ ಹೆಚ್ಚಾದ ಮಮತೆಯನ್ನಿಡುವವನು ನನಗೆ ಯೋಗ್ಯನಲ್ಲ; ಮಗನ ಮೇಲಾಗಲಿ ಮಗಳ ಮೇಲಾಗಲಿ ನನ್ನ ಮೇಲೆ ಇಡುವುದಕ್ಕಿಂತ ಹೆಚ್ಚಾದ ಮಮತೆಯನ್ನಿಡುವವನು ನನಗೆ ಯೋಗ್ಯನಲ್ಲ.›
‹“ಯಾವನಾದರೂ ನನ್ನ ಬಳಿಗೆ ಬಂದು ತನ್ನ ತಂದೆತಾಯಿ, ಹೆಂಡತಿ, ಮಕ್ಕಳು, ಅಣ್ಣತಮ್ಮಂದಿರು, ಅಕ್ಕತಂಗಿಯರು ಇವರನ್ನೂ ತನ್ನ ಪ್ರಾಣವನ್ನು ಸಹ ಹಗೆಮಾಡದಿದ್ದರೆ ಅವನು ನನ್ನ ಶಿಷ್ಯನಾಗಿರಲಾರನು.›