ಆಗ ಯೆಹೋವನು ಆ ಕತ್ತೆಗೆ ಮಾತನಾಡುವ ಶಕ್ತಿಯನ್ನು ಕೊಡಲಾಗಿ ಅದು ಬಿಳಾಮನನ್ನು, “ನೀನು ಮೂರು ಸಾರಿ ನನ್ನನ್ನು ಹೊಡೆದದ್ದೇಕೆ? ನಾನು ನಿನಗೇನು ಮಾಡಿದ್ದೇನೆ” ಎಂದು ಕೇಳಿತು.
TSK
TSK · ಆದಿಕಾಂಡ 3:1
Treasury of Scripture Knowledge references in ಕನ್ನಡ IRV.
ಆ ದಿನದಲ್ಲಿ ಯೆಹೋವನು ಕಠಿಣವೂ, ಮಹತ್ವವೂ, ಬಲವೂ ಆಗಿರುವ ತನ್ನ ಖಡ್ಗದಿಂದ ವೇಗವಾಗಿ ಓಡುವ ಸರ್ಪವಾದ ಲೆವಿಯಾತಾನವನ್ನೂ, ಡೊಂಕಾಗಿ ಹರಿಯುವ ಸರ್ಪವಾದ ಲೆವಿಯಾತಾನವನ್ನೂ, ಮತ್ತು ಮಹಾನದಿಯಲ್ಲಿ ಘಟಸರ್ಪವನ್ನೂ ಕೊಂದುಹಾಕುವನು.
ಯೇಸುವಿಗೆ, “ನೀನು ದೇವರ ಮಗನೇ ಆಗಿದ್ದರೆ ಇಲ್ಲಿಂದ ಕೆಳಕ್ಕೆ ದುಮುಕು; ‘ದೇವರು ನಿನ್ನ ವಿಷಯವಾಗಿ ತನ್ನ ದೂತರಿಗೆ ಅಪ್ಪಣೆಕೊಡುವನು; ನಿನ್ನ ಕಾಲು ಕಲ್ಲಿಗೆ ತಗಲದಂತೆ ಅವರು ನಿನ್ನನ್ನು ಕೈಗಳಲ್ಲಿ ಎತ್ತಿಕೊಳ್ಳುವರು’ ಎಂಬುದಾಗಿ ಬರೆದಿದೆಯಲ್ಲಾ” ಎಂದು ಹೇಳಿದನು.
¶ ‹“ನೋಡಿರಿ, ತೋಳಗಳ ನಡುವೆ ಕುರಿಗಳನ್ನು ಕಳುಹಿಸುವಂತೆ ನಾನು ನಿಮ್ಮನ್ನು ಕಳುಹಿಸಿಕೊಡುತ್ತಿದ್ದೇನೆ. ಆದುದರಿಂದ ಸರ್ಪಗಳಂತೆ ಜಾಣರೂ ಪಾರಿವಾಳಗಳಂತೆ ನಿಷ್ಕಪಟಿಗಳೂ ಆಗಿರಿ.›
ಇದೇನೂ ಆಶ್ಚರ್ಯವಲ್ಲ. ಸೈತಾನನು ತಾನೇ ಪ್ರಕಾಶ ರೂಪವುಳ್ಳ ದೇವದೂತನ ವೇಷವನ್ನು ಹಾಕಿಕೊಳ್ಳುವಾಗ,
ಭೂಲೋಕದವರನ್ನೆಲ್ಲಾ ಮರುಳುಗೊಳಿಸಿ ಪಾಪ ಮಾಡಿಸುತ್ತಿದ್ದ ಆ ಮಹಾ ಘಟಸರ್ಪವು ಅಂದರೆ ಪಿಶಾಚನೆಂತಲೂ ಸೈತಾನನೆಂತಲೂ ಹೆಸರುಳ್ಳ ಆ ಪುರಾತನ ಸರ್ಪವನ್ನು ಭೂಮಿಗೆ ತಳ್ಳಲಾಯಿತು. ಅವನ ದೂತರು ಅವನೊಂದಿಗೆ ದೊಬ್ಬಲ್ಪಟ್ಟರು.