TSK

TSK · ಆದಿಕಾಂಡ 3:14

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ಯೆಹೋವನಾದ ದೇವರು ಉಂಟುಮಾಡಿದ ಎಲ್ಲಾ ಕಾಡುಮೃಗಗಳಲ್ಲಿ ಸರ್ಪವು ಅತಿ ಯುಕ್ತಿಯುಳ್ಳದ್ದಾಗಿತ್ತು. ಸರ್ಪವು ಸ್ತ್ರೀಯ ಬಳಿಗೆ ಬಂದು, “ಏನಮ್ಮಾ, ತೋಟದಲ್ಲಿರುವ ಯಾವ ಮರದ ಹಣ್ಣನ್ನು ನೀವು ತಿನ್ನಬಾರದೆಂದು ದೇವರು ಅಪ್ಪಣೆ ಕೊಟ್ಟಿರುವುದು ನಿಜವೋ?” ಎಂದು ಕೇಳಲು.

¶ ಯಾವುದಾದರೂ ಒಂದು ಎತ್ತು ಪುರುಷನನ್ನಾಗಲಿ, ಸ್ತ್ರೀಯನ್ನಾಗಲಿ, ತಿವಿದು ಕೊಂದರೆ ಆ ಎತ್ತನ್ನು ಖಂಡಿತವಾಗಿ ಕಲ್ಲೆಸೆದು ಕೊಲ್ಲಬೇಕು. ಅದರ ಮಾಂಸವನ್ನು ತಿನ್ನಬಾರದು. ಆದರೆ ಆ ಎತ್ತಿನ ಯಜಮಾನನು ನಿರಪರಾಧಿಯಾಗಿರಬೇಕು.

¶ ಆದರೆ ನೀವು ನಿಮ್ಮ ದೇವರಾದ ಯೆಹೋವನ ಮಾತಿಗೆ ಕಿವಿಗೊಡದೆ, ನಾನು ಈಗ ನಿಮಗೆ ಬೋಧಿಸುವ ಆತನ ಆಜ್ಞಾವಿಧಿಗಳನ್ನು ಅನುಸರಿಸದೆ ಹೋದರೆ ಈ ಶಾಪಗಳು ನಿಮಗೆ ಪ್ರಾಪ್ತವಾಗುವವು:

ನೀನು ಕುಗ್ಗಿ ಭೂಮಿಯೊಳಗಿಂದ ಮಾತನಾಡುವಿ, ನಿನ್ನ ನುಡಿಯು ಮಣ್ಣಿನೊಳಗಿಂದ ಸಣ್ಣ ಸ್ವರವಾಗಿ ಹೊರಡುವುದು, ನಿನ್ನ ಧ್ವನಿಯು ಪ್ರೇತದ ಧ್ವನಿಯಂತೆ ನೆಲದೊಳಗಿಂದ ಬರುವುದು, ನಿನ್ನ ನುಡಿಯು ಧೂಳಿನೊಳಗಿಂದ ಪಿಸುಗುಟ್ಟುವುದು.

ಹಾವಿನಂತೆ ಧೂಳನ್ನು ನೆಕ್ಕುವರು. ನೆಲದಲ್ಲಿ ಹರಿದಾಡುವ ಕ್ರಿಮಿಕೀಟಗಳ ಹಾಗೆ ತಮ್ಮ ಗುಪ್ತಸ್ಥಳಗಳಿಂದ ನಡುಗುತ್ತಾ ಈಚೆಗೆ ಹೊರಡುವರು. ಯೆಹೋವನೆಂಬ ನಮ್ಮ ದೇವರಾದ ನಿನ್ನನ್ನು ಅಂಜುತ್ತಾ, ಸೇವಿಸಿ ನಿನಗೆ ಭಯಪಡುವರು.