¶ ಆಗ ಸ್ತ್ರೀಯು ಆ ಮರದ ಹಣ್ಣು ತಿನ್ನುವುದಕ್ಕೆ ಉತ್ತಮವಾಗಿಯೂ, ನೋಡುವುದಕ್ಕೆ ರಮ್ಯವಾಗಿಯೂ, ಜ್ಞಾನೋದಯಕ್ಕೆ ಅಪೇಕ್ಷಿಸತಕ್ಕದ್ದಾಗಿಯೂ ಇದೆ ಎಂದು ತಿಳಿದು ಅದನ್ನು ತೆಗೆದುಕೊಂಡು ತಿಂದಳು ಮತ್ತು ಸಂಗಡ ಇದ್ದ ಗಂಡನಿಗೂ ಕೊಡಲೂ, ಅವನೂ ತಿಂದನು.
TSK
TSK · ಆದಿಕಾಂಡ 3:17
Treasury of Scripture Knowledge references in ಕನ್ನಡ IRV.
ಅವನಿಗೆ “ನೋಹ” ಎಂದು ಹೆಸರಿಟ್ಟು, “ಯೆಹೋವನು ಶಾಪಕೊಟ್ಟ ಭೂಮಿಯಲ್ಲಿ ನಾವು ಕೈಕೆಸರಾಗಿಸಿಕೊಂಡು ಅನುಭವಿಸುತ್ತಿರುವ ಶ್ರಮೆಗೆ ಈ ಮಗನಿಂದ ಆದರಣೆ ಸಿಕ್ಕುವುದು” ಎಂದು ಹೇಳಿದನು.
ಕೇಡು ಉದ್ಭವಿಸುವುದು ಮಣ್ಣಿನಿಂದಲ್ಲ; ದುಃಖವು ಭೂಮಿಯಿಂದ ಮೊಳೆಯುವುದಿಲ್ಲ.
“ಮಾನವ ಜನ್ಮ ಪಡೆದವನು, ಅಲ್ಪಾಯುಷ್ಯನಾಗಿಯೂ, ಕಳವಳದಿಂದ ತುಂಬಿದವನಾಗಿಯೂ ಇರುವನು.
ನಿನ್ನ ಕೋಪದಿಂದ ನಾವು ಇಲ್ಲವಾದೆವು; ನಿನ್ನ ರೌದ್ರದಿಂದ ತಲ್ಲಣಗೊಂಡೆವು.
ಪ್ರಸಂಗಿಯು ಹೀಗೆ ಹೇಳುತ್ತಾನೆ. “ವ್ಯರ್ಥವೇ ವ್ಯರ್ಥ, ವ್ಯರ್ಥವೇ ವ್ಯರ್ಥ, ಸಮಸ್ತವೂ ವ್ಯರ್ಥ.
ಆಗ ನನ್ನ ಕೈಯಿಂದ ನಡೆಸಿದ ಎಲ್ಲಾ ಕೆಲಸಗಳನ್ನೂ, ನಾನು ಪಟ್ಟ ಪ್ರಯಾಸಗಳನ್ನೂ ಗಮನವಿಟ್ಟು ಪರಿಶೀಲಿಸಿದೆ, ಆಹಾ ಗಾಳಿಯನ್ನು ಹಿಂದಟ್ಟಿದ ಹಾಗೆ ಸಮಸ್ತವೂ ವ್ಯರ್ಥವಾಯಿತು. ಸೂರ್ಯನ ಕೆಳಗೆ ಯಾವ ಲಾಭವೂ ಕಾಣಲಿಲ್ಲ.
¶ ಲೋಕದಲ್ಲಿ ಮನುಷ್ಯನು ಹೃದಯಪೂರ್ವಕವಾಗಿ ಪಡುವ ಪ್ರಯಾಸದಿಂದ ಅವನಿಗೆ ಸಿಗುವ ಲಾಭವಾದರೂ ಏನು?
ಭೂನಿವಾಸಿಗಳು ದೈವಾಜ್ಞೆಗಳನ್ನು ಮೀರಿ, ನಿಯಮಗಳನ್ನು ಬದಲಾಯಿಸಿ, ಶಾಶ್ವತವಾದ ಒಡಂಬಡಿಕೆಯನ್ನು ಭಂಗಪಡಿಸಿದ್ದರಿಂದ ಭೂಮಿಯು ಅವರ ಹೆಜ್ಜೆಯಿಂದ ಅಪವಿತ್ರವಾಯಿತು.
‹ಅವನಿಗೆ ‘ಸ್ನೇಹಿತನೇ, ಮದುವೆಯ ಬಟ್ಟೆ ಇಲ್ಲದೆ ನೀನಿಲ್ಲಿ ಹೇಗೆ ಒಳಕ್ಕೆ ಬಂದೆ?’ ಎಂದು ಕೇಳಲು ಅವನು ಮೌನವಾಗಿದ್ದನು.›
‹ಆಗ ಆತನು ಉತ್ತರವಾಗಿ ಅವರಿಗೆ, ‘ನೀವು ಈ ಕೇವಲ ಅಲ್ಪರಾದವರಲ್ಲಿ ಒಬ್ಬನಿಗೆ ಏನನ್ನು ಮಾಡದೆ ಹೋದಿರೋ ಅದನ್ನು ನನಗೂ ಮಾಡದೆ ಹೋದ ಹಾಗಾಯಿತು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ’ ಅನ್ನುವನು.›
‹ನೀವು ನನ್ನಲ್ಲಿದ್ದು ಸಮಾಧಾನವನ್ನು ಹೊಂದಿದವರಾಗಿರಬೇಕೆಂದು ಇದನ್ನೆಲ್ಲಾ ನಿಮ್ಮೊಂದಿಗೆ ಹೇಳಿದ್ದೇನೆ.›‹ಲೋಕದಲ್ಲಿ ನಿಮಗೆ ಸಂಕಟಗಳುಂಟು. ಆದರೆ ಧೈರ್ಯವಾಗಿರಿ, ನಾನು ಲೋಕವನ್ನು ಜಯಿಸಿದ್ದೇನೆ”› ಎಂದು ಹೇಳಿದನು.
ಸೃಷ್ಟಿ ನಿರರ್ಥಕತೆಗೆ ಒಳಗಾಯಿತು; ಹೀಗೆ ಒಳಗಾದದ್ದು ಸ್ವೇಚ್ಛೆಯಿಂದಲ್ಲ, ಅದನ್ನು ಒಳಪಡಿಸಿದವನ ಸಂಕಲ್ಪದಿಂದಲೇ,