TSK

TSK · ಆದಿಕಾಂಡ 3:18

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

“ಏನೂ ಇಲ್ಲದವನಾಗಿ ತಾಯಿಯ ಗರ್ಭದಿಂದ ಬಂದೆನು; ಏನೂ ಇಲ್ಲದವನಾಗಿಯೇ ಗತಿಸಿಹೋಗುವೆನು; ನನಗಿರುವುದನ್ನೆಲ್ಲ ಯೆಹೋವನೇ ಕೊಟ್ಟನು, ಅವುಗಳನ್ನು ಯೆಹೋವನೇ ತೆಗೆದುಕೊಂಡನು; ಯೆಹೋವನ ನಾಮಕ್ಕೆ ಸ್ತೋತ್ರವಾಗಲಿ” ಎಂದು ಹೇಳಿದನು.

ಗೋದಿಗೆ ಬದಲಾಗಿ ಮುಳ್ಳುಗಳೂ, ಜವೆಗೋದಿಗೆ ಪ್ರತಿಯಾಗಿ ಕೆಟ್ಟ ಕಳೆಗಳೂ ಬೆಳೆಯಲಿ.” ಎಂದನು. ಹೀಗೆ ಯೋಬನ ಮಾತುಗಳು ಮುಗಿದವು.

ಬೆಳಕನ್ನು ವಸ್ತ್ರದಂತೆ ಹೊದ್ದುಕೊಂಡಿರುವೆ; ಆಕಾಶವನ್ನು ಗುಡಾರದಂತೆ ಎತ್ತಿ ಹರಡಿರುವೆ.

ವಕ್ರಬುದ್ಧಿಯುಳ್ಳವನ ಮಾರ್ಗದಲ್ಲಿ ಮುಳ್ಳುಗಳೂ, ಉರುಲುಗಳೂ ತುಂಬಿವೆ, ತನ್ನನ್ನು ರಕ್ಷಿಸಿಕೊಳ್ಳುವವನು ಅವುಗಳಿಗೆ ದೂರವಾಗಿರುವನು.

ಅದನ್ನು ಹಾಳುಮಾಡುವೆನು. ದ್ರಾಕ್ಷಿಯ ತೋಟವನ್ನು ಯಾರೂ ಕುಡಿ ಕತ್ತರಿಸಿ ಅಗೆಯುವುದಿಲ್ಲ. ಅದರಲ್ಲಿ ಮುಳ್ಳುಕಳೆ ಬೆಳೆಯುವುದು. ಅದರ ಮೇಲೆ ಮಳೆ ಸುರಿಸಬಾರದೆಂದು ಮೋಡಗಳಿಗೆ ಅಪ್ಪಣೆ ಕೊಡುವೆನು.

ದೇಶವೆಲ್ಲಾ ಮುಳ್ಳು ಮತ್ತು ದತ್ತೂರಿಗಳ ಪೊದೆಯಾಗಿರುವುದಿಂದ ಜನರು ಬಿಲ್ಲುಬಾಣಗಳೊಡನೆ ಸಂಚರಿಸುವರು.

¶ ಯೆಹೋವನು ಯೆಹೂದದವರಿಗೂ ಮತ್ತು ಯೆರೂಸಲೇಮಿನವರಿಗೂ, “ಪಾಳು ಬಿದ್ದಿರುವ ನಿಮ್ಮ ಭೂಮಿಯನ್ನು ಉತ್ತು ಹದಮಾಡಿ, ಮುಳ್ಳುಗಳಲ್ಲಿ ಬಿತ್ತಬೇಡಿರಿ.

‹ಮತ್ತೆ ಕೆಲವು ಬೀಜಗಳು ಮುಳ್ಳುಗಿಡಗಳಲ್ಲಿ ಬಿದ್ದವು, ಮುಳ್ಳುಗಿಡಗಳು ಬೆಳೆದು ಅವುಗಳನ್ನು ಅಡಗಿಸಿಬಿಟ್ಟವು.›

ಆದರೆ ಅದು ಮುಳ್ಳುಗಿಡಗಳನ್ನೂ ಕಳೆಗಳನ್ನೂ ಬೆಳೆಸಿದರೆ, ಅಯೋಗ್ಯವಾದದ್ದಾಗಿ ಶಾಪಕ್ಕೆ ಗುರಿಯಾಗುತ್ತದೆ. ಕೊನೆಗದು ಸುಡಲ್ಪಡುತ್ತದೆ.