¶ ಅವರು ಬೇತೇಲಿನಿಂದ ಪ್ರಯಾಣಮಾಡುತ್ತಿರಲು ಎಫ್ರಾತಿಗೆ ಸೇರುವುದಕ್ಕೆ ಇನ್ನೂ ಸ್ವಲ್ಪ ದೂರವಿದ್ದಾಗ ರಾಹೇಲಳು ಪ್ರಸವ ವೇದನೆಯಿಂದ ನರಳಿದಳು.
TSK
TSK · ಆದಿಕಾಂಡ 30:1
Treasury of Scripture Knowledge references in ಕನ್ನಡ IRV.
ನೀನು ಹೀಗೆ ಮಾಡುವುದಕ್ಕಿಂತ ನನ್ನನ್ನು ಈಗಲೇ ಕೊಂದುಹಾಕಿಬಿಟ್ಟರೆ ಉಪಕಾರವಾಗುತ್ತದೆ; ನನಗಾಗುತ್ತಿರುವ ದುರಾವಸ್ಥೆಯನ್ನು ನಾನು ಸಹಿಸಲಾರೆ” ಎಂದನು.
ಎಲ್ಕಾನನು ಯಜ್ಞವನ್ನರ್ಪಿಸಿದಾಗೆಲ್ಲಾ ತನ್ನ ಹೆಂಡತಿಯಾದ ಪೆನಿನ್ನಳಿಗೂ ಆಕೆಯ ಎಲ್ಲಾ ಗಂಡು ಹೆಣ್ಣುಮಕ್ಕಳಿಗೂ ಭಾಗಗಳನ್ನು ಕೊಡುತ್ತಿದ್ದನು.
ತರುವಾಯ ತಾನೊಬ್ಬನೇ ಅರಣ್ಯದೊಳಗೆ ಒಂದು ದಿನದ ಪ್ರಯಾಣದಷ್ಟು ದೂರ ಹೋಗಿ ಒಂದು ಜಾಲೀ ಗಿಡದ ಕೆಳಗೆ ಕುಳಿತುಕೊಂಡು ಮರಣವನ್ನು ಅಪೇಕ್ಷಿಸಿದನು. ಅವನು, “ಯೆಹೋವನೇ ನನಗೆ ಸಾಕಾಯಿತು, ನನ್ನ ಪ್ರಾಣವನ್ನು ತೆಗೆದುಬಿಡು. ನಾನು ನನ್ನ ಪೂರ್ವಿಕರಿಗಿಂತ ಉತ್ತಮನಲ್ಲ” ಎಂದು ದೇವರನ್ನು ಪ್ರಾರ್ಥಿಸಿ ಅದೇ ಗಿಡದ ಕೆಳಗೆ ಮಲಗಿಕೊಂಡು ನಿದ್ರೆ ಮಾಡಿದನು.
ನಾನು ಹುಟ್ಟುವಾಗಲೇ ಏಕೆ ಸಾಯಲಿಲ್ಲ. ಗರ್ಭದಿಂದ ಬಂದಾಗಲೇ ಏಕೆ ಪ್ರಾಣಬಿಡಲಿಲ್ಲ?
ಕೋಪದಿಂದ ಮೂರ್ಖನಿಗೆ ನಾಶವು, ರೋಷದಿಂದ ಮೂಢನಿಗೆ ಮರಣವು ಸಂಭವಿಸುವುದಲ್ಲವೇ.
ಅವರು ಪಾಳೆಯದಲ್ಲಿ ಮೋಶೆಯ ಮೇಲೆಯೂ, ಯೆಹೋವನು ಪ್ರತಿಷ್ಠಿಸಿದ ಆರೋನನ ಮೇಲೆಯೂ ಹೊಟ್ಟೆಕಿಚ್ಚುಪಡಲು,
ಯಾವುವೆಂದರೆ, ಪಾತಾಳ, ಹೆರದ ಗರ್ಭ, ನೀರಿನಿಂದ ತೃಪ್ತಿಪಡದ ಭೂಮಿ, ಸಾಕಾಯಿತೆಂದು ಹೇಳದ ಬೆಂಕಿ, ಇವೇ.
ನಾನು ಹುಟ್ಟಿದ ದಿನ ಶಾಪಗ್ರಸ್ತವಾಗಲಿ, ತಾಯಿಯು ನನ್ನನ್ನು ಹೆತ್ತ ದಿನವು ಅಶುಭವೆನ್ನಿಸಿಕೊಳ್ಳಲಿ!
ಅಷ್ಟರಲ್ಲಿ ಆತನ ಶಿಷ್ಯರು ಊಟಕ್ಕೆ ಬೇಕಾದದ್ದನ್ನು ಕೊಂಡುಕೊಳ್ಳುವುದಕ್ಕಾಗಿ ಪಟ್ಟಣದೊಳಕ್ಕೆ ಹೋಗಿದ್ದರು.
ದೇವರ ಚಿತ್ತಾನುಸಾರವಾಗಿರುವ ದುಃಖವು ರಕ್ಷಣೆಗೆ ಕಾರಣವಾಗುವ ಮಾನಸಾಂತರವನ್ನುಂಟು ಮಾಡುತ್ತದೆ, ಆ ಮಾನಸಾಂತರದಲ್ಲಿ ಪಶ್ಚಾತ್ತಾಪಕ್ಕೆ ಆಸ್ಪದವಿಲ್ಲ; ಆದರೆ ಲೋಕದವರಿಗಿರುವಂಥ ದುಃಖವು ಮರಣವನ್ನುಂಟುಮಾಡುತ್ತದೆ.
ಏಕೆಂದರೆ ನಾವು ಸಹ, ಮೊದಲು ಅವಿವೇಕಿಗಳೂ, ಅವಿಧೇಯರೂ, ಮೋಸಹೋದವರೂ, ನಾನಾ ವಿಧವಾದ ದುರಾಶೆಗಳಿಗೆ ಮತ್ತು ಭೋಗಗಳಿಗೆ ಅಧೀನರೂ, ಕೆಟ್ಟತನ, ಹೊಟ್ಟೆಕಿಚ್ಚುಗಳಲ್ಲಿ ಕಾಲಕಳೆಯುವವರೂ, ಅಸಹ್ಯರೂ, ಒಬ್ಬರನ್ನೊಬ್ಬರು ಹಗೆಮಾಡುವವರೂ ಆಗಿದ್ದೆವು.
ದೇವರು ನಮ್ಮಲ್ಲಿ ಇರಿಸಿರುವ ಪವಿತ್ರಾತ್ಮನು ಅಭಿಮಾನತಾಪದಿಂದ ನಮಗೋಸ್ಕರ ಹಂಬಲಿಸುತ್ತಾನೆಂಬ ವೇದೋಕ್ತಿ ಬರಿ ಮಾತೆಂದು ನೀವು ಭಾವಿಸುತ್ತೀರೋ?