TSK

TSK · ಆದಿಕಾಂಡ 30:27

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ನಿನ್ನನ್ನು ಆಶೀರ್ವದಿಸುವವರನ್ನು ನಾನು ಆಶೀರ್ವದಿಸುವೆನು; ನಿನ್ನನ್ನು ಶಪಿಸುವವರನ್ನು ನಾನು ಶಪಿಸುವೆನು. ನಿನ್ನ ಮೂಲಕ ಭೂಲೋಕದ ಎಲ್ಲಾ ಜನಾಂಗಗಳಿಗೆ ಆಶೀರ್ವಾದವುಂಟಾಗುವುದು” ಎಂದು ಹೇಳಿದನು.

ಆ ರಾತ್ರಿ ಯೆಹೋವನು ಅವನಿಗೆ ಕಾಣಿಸಿಕೊಂಡು, “ನಾನು ನಿನ್ನ ತಂದೆಯಾದ ಅಬ್ರಹಾಮನ ದೇವರು; ನೀನು ಭಯಪಡಬೇಡ; ನಾನು ನಿನ್ನ ಸಂಗಡ ಇದ್ದೇನೆ; ನನ್ನ ಸೇವಕನಾದ ಅಬ್ರಹಾಮನ ನಿಮಿತ್ತ ನಿನ್ನನ್ನು ಆಶೀರ್ವದಿಸಿ ನಿನ್ನ ಸಂತತಿಯನ್ನು ಹೆಚ್ಚಿಸುವೆನು” ಎಂದು ಹೇಳಿದನು.

¶ ಏಸಾವನು, “ನನ್ನ ಆಳುಗಳಲ್ಲಿ ಕೆಲವರನ್ನು ನಿನ್ನ ಸಂಗಡ ಬಿಟ್ಟು ಹೋಗುತ್ತೇನೆ” ಎನ್ನಲು ಯಾಕೋಬನು, “ಅದರ ಅಗತ್ಯವೇನು? ಒಡೆಯನೇ, ತಮ್ಮ ದಯೆ ನನ್ನ ಮೇಲಿದ್ದರೆ ಸಾಕು” ಎಂದು ಹೇಳಿದನು.

ಯೆಹೋವನು ಯೋಸೇಫನ ಸಂಗಡ ಇದ್ದುದರಿಂದ ಅವನು ಕೃತಾರ್ಥನಾದನು. ಐಗುಪ್ತನಾದ ತನ್ನ ದಣಿಯ ಮನೆಯೊಳಗೆ ಯೋಸೇಫನು ಸೇವಕನಾದನು.

¶ ಆದರೆ ಯೆಹೋವನು ಯೋಸೇಫನ ಸಂಗಡ ಇದ್ದು ಅವನ ಮೇಲೆ ಕರುಣೆಯನ್ನಿಟ್ಟು ಸೆರೆಮನೆಯ ಯಜಮಾನನಿಂದ ದಯೆ ದೊರಕುವಂತೆ ಮಾಡಿದನು.

“ಇದಲ್ಲದೆ ಈ ನನ್ನ ಜನರ ಮೇಲೆ ಐಗುಪ್ತ್ಯರಿಗೆ ದಯೆಯುಂಟಾಗುವಂತೆ ಮಾಡುವೆನು. ಆದ್ದರಿಂದ ನೀವು ಹೊರಡುವಾಗ ಬರಿಗೈಯಲ್ಲಿ ಬರಬೇಕಾಗುವುದಿಲ್ಲ.

ನೀನು ಹೀಗೆ ಮಾಡುವುದಕ್ಕಿಂತ ನನ್ನನ್ನು ಈಗಲೇ ಕೊಂದುಹಾಕಿಬಿಟ್ಟರೆ ಉಪಕಾರವಾಗುತ್ತದೆ; ನನಗಾಗುತ್ತಿರುವ ದುರಾವಸ್ಥೆಯನ್ನು ನಾನು ಸಹಿಸಲಾರೆ” ಎಂದನು.

ತರುವಾಯ ಸೌಲನು ಇಷಯನ ಬಳಿಗೆ ದೂತರನ್ನು ಕಳುಹಿಸಿ ಅವನಿಗೆ, “ನಾನು ದಾವೀದನನ್ನು ಮೆಚ್ಚಿದ್ದೇನೆ; ಅವನು ನನ್ನ ಸನ್ನಿಧಿಯಲ್ಲಿ ಸೇವೆಮಾಡಲಿ” ಎಂದು ತಿಳಿಸಿದನು.

ಯೆಹೋವನೇ, ಕೃಪೆಮಾಡು; ನಿನ್ನ ಸೇವಕನಾದ ನನ್ನ ಪ್ರಾರ್ಥನೆಗೂ, ನಿನ್ನ ನಾಮ ಸ್ಮರಣೆಯಲ್ಲಿ ಆನಂದಿಸುವ ನಿನ್ನ ಭಕ್ತರ ಪ್ರಾರ್ಥನೆಗೂ ಕಿವಿಗೊಡು. ನಿನ್ನ ಸೇವಕನು ಈಹೊತ್ತು ಈ ಮನುಷ್ಯನ ದಯೆಗೆ ಪಾತ್ರನಾಗಿ ಸಫಲನಾಗುವಂತೆ ಅನುಗ್ರಹಿಸಬೇಕು” ಎಂದು ಪ್ರಾರ್ಥಿಸಿದೆನು.

ನೀರಿನ ಕಾಲುವೆಗಳ ಬಳಿಯಲ್ಲಿ ಬೆಳೆದಿರುವ ಮರದ ಹಾಗೆ ಅವನಿರುವನು. ಅಂಥ ಮರವು ಸೂಕ್ತಕಾಲದಲ್ಲಿ ಫಲಕೊಡುತ್ತದಲ್ಲಾ. ಅದರ ಎಲೆ ಬಾಡುವುದೇ ಇಲ್ಲ. ಅದರಂತೆ ಅವನ ಕಾರ್ಯವೆಲ್ಲವೂ ಸಫಲವಾಗುವುದು.

ಇವರ ಸಂತಾನವು ಜನಾಂಗಗಳಲ್ಲಿ ಪ್ರಖ್ಯಾತವಾಗುವುದು, ಇವರ ಸಂತತಿಯು ಅನ್ಯದೇಶೀಯರಲ್ಲಿ ಹೆಸರುಗೊಳ್ಳುವುದು. ಇವರನ್ನು ನೋಡುವವರೆಲ್ಲರು ಯೆಹೋವನು ಆಶೀರ್ವದಿಸಿದ ವಂಶವು ಇದೇ ಎಂದು ಒಪ್ಪಿಕೊಳ್ಳುವರು.

ದೇವರು ಕಂಚುಕಿಯರ ಅಧ್ಯಕ್ಷನ ಮನಸ್ಸಿನಲ್ಲಿ ದಾನಿಯೇಲನ ಮೇಲೆ ಕನಿಕರವನ್ನೂ, ದಯೆಯನ್ನೂ ಹುಟ್ಟಿಸಿದನು.