TSK

TSK · ಆದಿಕಾಂಡ 31:19

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಆದರೆ ತಂದೆಯ ಮನೆಗೆ ಹೋಗುವುದಕ್ಕೆ ನಿನಗೆ ಬಹಳ ಆಶೆಯಿರುವುದರಿಂದ ಹೋಗಬೇಕಾಯಿತು. ಆದರೆ ನೀನು ನನ್ನ ದೇವರುಗಳನ್ನು ಕದ್ದದ್ದು ಯಾಕೆ?” ಎಂದು ಕೇಳಿದನು.

ರಾಹೇಲಳು ಆ ವಿಗ್ರಹಗಳನ್ನು ತೆಗೆದುಕೊಂಡು ಒಂಟೆಯ ಸಬರದೊಳಗಿಟ್ಟು (ತಡಿಯ ಚೀಲದಲ್ಲಿ) ಅವುಗಳ ಮೇಲೆ ಕುಳಿತ್ತಿದ್ದಳು. ಲಾಬಾನನು ಗುಡಾರದಲ್ಲಿದ್ದ ವಸ್ತುಗಳನ್ನೆಲ್ಲಾ ನೋಡಿದರೂ ಅವುಗಳನ್ನು ಕಾಣಲಿಲ್ಲ.

ಆಗ ತಾಮಾರಳಿಗೆ, “ಮಾವನು ತನ್ನ ಕುರಿಗಳ ಉಣ್ಣೇ ಕತ್ತರಿಸುವುದಕ್ಕೋಸ್ಕರ ತಿಮ್ನಾ ಊರಿಗೆ ಹೋಗುತ್ತಿದ್ದಾನೆ” ಎಂದು ತಿಳಿದು ಬಂದಿತು

ಮಗನು ಹಿಂದಕ್ಕೆ ಕೊಟ್ಟ ರೂಪಾಯಿಗಳಲ್ಲಿ ಇನ್ನೂರು ರೂಪಾಯಿಗಳನ್ನು ತೆಗೆದು ಅಕ್ಕಸಾಲಿಗನಿಗೆ ಕೊಟ್ಟಳು. ಅವನು ಅವುಗಳಿಂದ ಕೆತ್ತನೆಯ ಮತ್ತು ಎರಕದ ವಿಗ್ರಹಗಳನ್ನು ಮಾಡಿಕೊಟ್ಟನು. ಮೀಕನು ಅದನ್ನು ತನ್ನ ಮನೆಯಲ್ಲಿಟ್ಟುಕೊಂಡನು.

ಆಗ ಲಯಿಷ್ ದೇಶವನ್ನು ಸಂಚರಿಸಿ ನೋಡುವುದಕ್ಕೆ ಹೋಗಿದ್ದ ಐದು ಮಂದಿ ತಮ್ಮ ಬಂಧುಗಳಿಗೆ, “ಈ ಗ್ರಾಮದಲ್ಲಿ ಒಂದು ಏಫೋದೂ, ದೇವತಾಪ್ರತಿಮೆಗಳೂ, ಕೆತ್ತನೆಯ ಮತ್ತು ಎರಕದ ವಿಗ್ರಹಗಳೂ ಇರುತ್ತವೆಂಬುದು ನಿಮಗೆ ಗೊತ್ತುಂಟೋ?

ಅನಂತರ ಆಕೆಯು ಮನೆಯಲ್ಲಿದ್ದ ಒಂದು ವಿಗ್ರಹವನ್ನು ತಂದು, ಹಾಸಿಗೆಯ ಮೇಲೆ ಮಲಗಿಸಿ, ಅದರ ಮುಖದ ಮೇಲೆ ಮೇಕೆಕೂದಲಿನಿಂದ ಹೆಣೆದ ಜಾಲರಿಯನ್ನು ತಲೆದಿಂಬಿನ ಜಾಗದಲ್ಲಿ ಹಾಕಿ ಕಂಬಳಿಯನ್ನು ಹೊದಿಸಿದಳು.

¶ ಎರಡು ವರ್ಷಗಳಾದ ನಂತರ ಅಬ್ಷಾಲೋಮನು ಒಂದು ದಿನ ಎಫ್ರಾಯೀಮಿನ ಬಳಿಯಲ್ಲಿರುವ ಬಾಳ್ ಹಾಚೋರಿನಲ್ಲಿ ಕುರಿಗಳ ಉಣ್ಣೆಯನ್ನು ಕತ್ತರಿಸುವಾಗ ಎಲ್ಲಾ ರಾಜಪುತ್ರರನ್ನು ಔತಣಕ್ಕೆ ಕರೆದನು.

¶ “ಮಾರ್ಗವು ಕವಲೊಡೆಯುವ ಸ್ಥಳದಲ್ಲಿ, ಎರಡು ದಾರಿಗಳ ಮೊದಲಲ್ಲಿ ಬಾಬೆಲಿನ ಅರಸನು ಶಕುನ ನೋಡುವುದಕ್ಕೆ ನಿಂತಿದ್ದಾನೆ; ಬಾಣಗಳನ್ನು ಕಲಕಿ, ವಿಗ್ರಹಗಳನ್ನು ಪ್ರಶ್ನೆಕೇಳಿ, ಕಾಳಿಜವನ್ನು ಪರೀಕ್ಷಿಸಿದ್ದಾನೆ.