TSK

TSK · ಆದಿಕಾಂಡ 31:24

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ಆದರೆ ಆ ರಾತ್ರಿ ದೇವರು ಅಬೀಮೆಲೆಕನ ಕನಸಿನಲ್ಲಿ ಬಂದು, “ನೀನು ಆ ಸ್ತ್ರೀಯನ್ನು ಸೇರಿಸಿಕೊಂಡಿರುವುದರಿಂದ ಮರಣಕ್ಕೆ ಯೋಗ್ಯನಾಗಿದ್ದಿ; ಆಕೆ ಮತ್ತೊಬ್ಬ ಪುರುಷನ ಹೆಂಡತಿ” ಎಂದನು.

ಇಸಾಕನು ಯಾಕೋಬನನ್ನು ಕಳುಹಿಸಿದಾಗ ಅವನು ಪದ್ದನ್ ಅರಾಮನಲ್ಲಿದ್ದ ಯಾಕೋಬನ ಮತ್ತು ಏಸಾವನ ತಾಯಿಯಾದ ರೆಬೆಕ್ಕಳ ಅಣ್ಣನಾದ ಅರಾಮಿನವನಾದ ಬೆತೂವೇಲನ ಮಗನಾಗಿದ್ದ ಲಾಬಾನನ ಬಳಿಗೆ ಹೋದನು.

ನಿಮಗೆ ಕೇಡುಮಾಡುವುದಕ್ಕೆ ನನ್ನಲ್ಲಿ ಸಾಮರ್ಥ್ಯ ಇದೆ. ಆದರೆ ಕಳೆದ ರಾತ್ರಿಯಲ್ಲಿ ನಿಮ್ಮ ತಂದೆಯ ದೇವರು, ‘ಯಾಕೋಬನಿಗೆ ಒಳ್ಳೆಯದನ್ನಾಗಲೀ, ಕೆಟ್ಟದನ್ನಾಗಲಿ ಹೇಳದ ಹಾಗೆ ಎಚ್ಚರವಾಗಿರು’ ಎಂದು ಹೇಳಿದನು.

¶ ಐಗುಪ್ತ ಅರಸನು ಸೆರೆಯಲ್ಲಿ ಹಾಕಿಸಿದ್ದ ಪಾನದಾಯಕನಿಗೂ, ಅಡಿಗೆ ಭಟ್ಟನಿಗೂ, ಒಂದೇ ರಾತ್ರಿ ಕನಸುಬಿತ್ತು. ಅವರವರ ಕನಸಿಗೆ ಬೇರೆ ಬೇರೆ ಅರ್ಥವಿತ್ತು.

¶ ಯೆಹೋವನು ಅವರಿಗೆ, “ನನ್ನ ಮಾತನ್ನು ಕೇಳಿರಿ. ನಿಮ್ಮಲ್ಲಿ ಪ್ರವಾದಿಯಿದ್ದರೆ ನಾನು ಅವನಿಗೆ ಜ್ಞಾನದೃಷ್ಟಿಯಲ್ಲಿ ಪ್ರಕಟಿಸುವೆನು, ಮತ್ತು ಕನಸಿನಲ್ಲಿ ಅವನ ಸಂಗಡ ಮಾತನಾಡುವೆನು.

¶ ಆಗ ಯೆಹೋವನ ದೂತನು ಮುಂದೆ ಹೋಗಿ ಎಡಬಲಕ್ಕೆ ತಿರುಗಲಿಕ್ಕೆ ದಾರಿಯಿಲ್ಲದ ಇಕ್ಕಟ್ಟಾದ ಸ್ಥಳದಲ್ಲಿ ನಿಂತುಕೊಂಡನು.

ಆಗ ನೀವು ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ, “ಅರಾಮ್ಯನಾದ ನಮ್ಮ ಮೂಲಪಿತೃವು ಗತಿಯಿಲ್ಲದವನಾಗಿ ಅಲೆದಾಡುತ್ತಾ ಸ್ವಲ್ಪ ಜನರೊಡನೆ ಐಗುಪ್ತದೇಶಕ್ಕೆ ಹೋಗಿ ಅಲ್ಲಿ ಇಳಿದುಕೊಂಡನು. ಅಲ್ಲಿ ಅವನ ಸಂತಾನದವರು ಹೆಚ್ಚಿ ಅವರು ಮಹಾಬಲಿಷ್ಠ ಜನಾಂಗವಾದರು.

ದೇವರಾದ ಯೆಹೋವನು ಆ ರಾತ್ರಿ ಕನಸ್ಸಿನಲ್ಲಿ ಅವನಿಗೆ ಗಿಬ್ಯೋನಿನಲ್ಲಿ ಕಾಣಿಸಿಕೊಂಡು, “ನಿನಗೆ ಯಾವ ವರ ಬೇಕು ಕೇಳಿಕೋ” ಎಂದು ಹೇಳಲು ಸೊಲೊಮೋನನು,

ಅವನ ದೇಹವು ಬಾಲ್ಯಕ್ಕಿಂತಲೂ ಕೋಮಲವಾಗುವುದು. ಅವನು ಪುನಃ ಎಳೆತನದ ಚೈತನ್ಯವನ್ನು ಅನುಭವಿಸುವನು.

ಏಕೆಂದರೆ ನೀನು ನನ್ನ ವಿರುದ್ಧ ಕೋಪಗೊಂಡಿರುವುದೂ, ಅಸಮಾಧಾನವಾಗಿರುವುದೂ ನನಗೆ ತಿಳಿದುಬಂತು. ಆದುದರಿಂದ ನಿನಗೆ ಮೂಗುದಾರವನ್ನೂ, ಕಡಿವಾಣವನ್ನೂ ಹಾಕಿ ಬಂದ ದಾರಿಯಿಂದಲೇ ನಿನ್ನನ್ನು ಹಿಂದಕ್ಕೆ ಎಳೆದುಕೊಂಡು ಹೋಗುವೆನು” ಎಂಬುದಾಗಿ ಹೇಳಿದ್ದಾನೆ.

ಅವನು ಇದನ್ನು ಕುರಿತು ಆಲೋಚಿಸುತ್ತಿರುವಾಗ, ದೇವದೂತನು ಅವನಿಗೆ ಕನಸಿನಲ್ಲಿ ಕಾಣಿಸಿಕೊಂಡು, “ದಾವೀದನ ಮಗನಾದ ಯೋಸೇಫನೇ, ನೀನು ಮರಿಯಳನ್ನು ಹೆಂಡತಿಯಾಗಿ ಸೇರಿಸಿಕೊಳ್ಳುವುದಕ್ಕೆ ಅಂಜಬೇಡ. ಆಕೆ ಗರ್ಭವತಿಯಾದದ್ದು ಪವಿತ್ರಾತ್ಮನಿಂದಲೇ.

ಇದಲ್ಲದೆ ಅವನು ನ್ಯಾಯಾಸನದಲ್ಲಿ ಕುಳಿತಿರುವಾಗ ಅವನ ಹೆಂಡತಿಯು, “ನೀನು ಆ ನೀತಿವಂತನ ಗೊಡವೆಗೆ ಹೋಗಬೇಡ; ಅವನ ದೆಸೆಯಿಂದ ಈ ಹೊತ್ತು ಕನಸಿನಲ್ಲಿ ಬಹಳ ತೊಂದರೆ ಪಟ್ಟೆನು” ಎಂದು ಅವನ ಬಳಿಗೆ ಸಂದೇಶ ಹೇಳಿಕಳುಹಿಸಿದಳು.