¶ “ನನ್ನ ದಣಿಯಾದ ಅಬ್ರಹಾಮನ ದೇವರಾಗಿರುವ ಯೆಹೋವನೇ, ಈ ಹೊತ್ತು ನಾನು ಬಂದ ಕಾರ್ಯವನ್ನು ನೀನು ಸಫಲಪಡಿಸಿ ನನ್ನ ದಣಿಯಾದ ಅಬ್ರಹಾಮನಿಗೆ ದಯೆಯನ್ನು ತೋರಿಸಬೇಕೆಂದು ಬೇಡಿಕೊಳ್ಳುತ್ತೇನೆ.
TSK
TSK · ಆದಿಕಾಂಡ 32:10
Treasury of Scripture Knowledge references in ಕನ್ನಡ IRV.
¶ ಆಗ ಯಾಕೋಬನು ಹಾರಾನಿಗೆ ಹೋಗಬೇಕೆಂದು ಬೇರ್ಷೆಬದಿಂದ ಹೊರಟನು.
ಇಗೋ, ನಾನು ನಿನ್ನ ಸಂಗಡ ಇದ್ದು ನೀನು ಹೋಗುವಲ್ಲೆಲ್ಲಾ ನಿನ್ನನ್ನು ಕಾಪಾಡಿ, ಪುನಃ ಈ ದೇಶಕ್ಕೆ ಬರಮಾಡುವೆನು. ಏಕೆಂದರೆ ನಾನು ನಿನಗೆ ಹೇಳಿದ್ದನ್ನೆಲ್ಲಾ ನೆರವೇರಿಸದ ಹೊರತು ಬಿಡುವುದಿಲ್ಲ” ಎಂದನು.
¶ ಮತ್ತು ಯೆಹೋವನು ಯಾಕೋಬನಿಗೆ, “ನೀನು ನಿನ್ನ ತಂದೆಯ ದೇಶಕ್ಕೂ ನಿನ್ನ ಬಂಧುಗಳ ಬಳಿಗೂ ಹಿಂತಿರುಗಿ ಹೋಗು, ನಾನು ನಿನ್ನೊಂದಿಗೆ ಇರುವೆನು” ಎಂದು ಹೇಳಿದನು.
¶ ಯಾಕೋಬನಿಗೆ ಬಹು ಭಯವೂ ಕಳವಳವೂ ಉಂಟಾದವು. ಅವನು ತನ್ನೊಂದಿಗಿದ್ದ ಜನರನ್ನು, ಕುರಿದನಗಳನ್ನು ಹಾಗೂ ಒಂಟೆಗಳನ್ನು ಎರಡು ಗುಂಪುಗಳಾಗಿ ವಿಭಾಗಿಸಿದನು.
¶ ಅನಂತರ ದಾವೀದನು ಹೋಗಿ ಯೆಹೋವನ ಸನ್ನಿಧಿಯಲ್ಲಿ ಕುಳಿತುಕೊಂಡು, “ಕರ್ತನಾದ, ಯೆಹೋವನೇ, ನಾನೆಷ್ಟರವನು? ನನ್ನ ಮನೆ ಎಷ್ಟರದು? ನೀನು ನನ್ನನ್ನು ಇಲ್ಲಿಯವರೆಗೂ ತಂದಿದ್ದಿಯಲ್ಲಾ.
ಹೀಗಾದರೂ ಶಿಷ್ಟನು ತನ್ನ ಮಾರ್ಗವನ್ನೇ ಹಿಡಿದು ನಡೆಯುವನು, ಶುದ್ಧಹಸ್ತನು ಬಲಗೊಳ್ಳುತ್ತಲೇ ಇರುವನು.
ಅವನನ್ನು ದೇವರಿಗಿಂತ ಸ್ವಲ್ಪವೇ ಕಡಿಮೆಯಾಗಿ ಸೃಷ್ಟಿ ಮಾಡಿದಿಯಲ್ಲಾ; ಪ್ರಭಾವವನ್ನೂ ಮತ್ತು ಮಾನವನ್ನೂ ಅವನಿಗೆ ಕಿರೀಟವಾಗಿ ಇಟ್ಟಿದ್ದಿ.
ನೀನೇ ನನಗೋಸ್ಕರ ಗುರಾಣಿಯನ್ನು ಹಿಡಿದು ರಕ್ಷಿಸಿದ್ದೀ. ನಿನ್ನ ಬಲಗೈ ನನಗೆ ಆಧಾರ; ನಿನ್ನ ಕೃಪಾಕಟಾಕ್ಷವು ನನಗೆ ದೊಡ್ಡಸ್ತಿಕೆಯನ್ನು ಉಂಟುಮಾಡಿದೆ.
ಅವರು ಹೆಚ್ಚು ಹೆಚ್ಚಾಗಿ ಬಲಹೊಂದಿ, ಚೀಯೋನ್ ಗಿರಿಯಲ್ಲಿ ದೇವರ ಸನ್ನಿಧಿಯನ್ನು ಸೇರಿ,
ನೀತಿವಂತರ ಮಾರ್ಗವು ಮಧ್ಯಾಹ್ನದ ವರೆಗೂ ಹೆಚ್ಚುತ್ತಾ ಬರುವ ಬೆಳಗಿನ ಬೆಳಕಿನಂತಿದೆ.
ಯೆಹೋವನು ನಮಗೆ ಅನುಗ್ರಹಿಸಿದ್ದನ್ನೆಲ್ಲಾ ಸ್ಮರಿಸಿ ಆತನ ಕೃಪಾಕಾರ್ಯಗಳನ್ನು ಮತ್ತು ಸ್ತುತ್ಯಕೃತ್ಯಗಳನ್ನು, ಆತನು ಕನಿಕರದಿಂದಲೂ, ಕೃಪಾತಿಶಯದಿಂದಲೂ ಇಸ್ರಾಯೇಲ್ ವಂಶದವರಿಗೆ ದಯಪಾಲಿಸಿರುವ ಮಹೋಪಕಾರವನ್ನೂ ಪ್ರಸಿದ್ಧಿಪಡಿಸುವೆನು.
ನೀನು ಪುರಾತನ ಕಾಲದಿಂದಲೂ ನಮ್ಮ ಪೂರ್ವಿಕರಿಗೆ ಪ್ರಮಾಣಮಾಡಿರುವಂತೆ ಯಾಕೋಬನ ವಂಶದವರಿಗೆ ಸತ್ಯಪರನಾಗಿಯೂ, ಅಬ್ರಹಾಮನ ವಂಶದವರಿಗೆ ಪ್ರೀತಿಪರನಾಗಿಯೂ ನಡೆಯುವಿ.
‹ನೀವು ನಿಮಗೆ ಅಪ್ಪಣೆಯಾಗಿರುವುದನ್ನೆಲ್ಲಾ ಮಾಡಿದ ಮೇಲೆ ‘ನಾವು ಆಳುಗಳು, ಪ್ರಯೋಜನವಿಲ್ಲದವರು, ಮಾಡಬೇಕಾದದ್ದನ್ನೇ ಮಾಡಿದ್ದೇವೆ’ ಅನ್ನಿರಿ”› ಎಂದು ಹೇಳಿದನು.
¶ ನನಗೆ ಬಲವನ್ನು ದಯಪಾಲಿಸಿದವನು ನಮ್ಮ ಕರ್ತನಾದ ಯೇಸು ಕ್ರಿಸ್ತನೇ. ಅದಕ್ಕಾಗಿ ನಾನು ಕೃತಜ್ಞತೆಯುಳ್ಳವನಾಗಿದ್ದೇನೆ. ಮೊದಲು ದೂಷಕನೂ, ಹಿಂಸಕನೂ, ಕೇಡುಮಾಡುವವನೂ ಆಗಿದ್ದ ನನ್ನನ್ನು ಆತನು ನಂಬಿಗಸ್ತನೆಂದು ಎಣಿಸಿ, ತನ್ನ ಸೇವೆಗೆ ನೇಮಿಸಿಕೊಂಡದ್ದಕ್ಕಾಗಿ ನಾನು ಆತನಿಗೆ ಸ್ತೋತ್ರಮಾಡುತ್ತೇನೆ. ನಾನು ಅಜ್ಞಾನಿಯಾಗಿ ತಿಳಿಯದೆ ಅಪನಂಬಿಕೆಯಲ್ಲಿ ಆ ರೀತಿ ನಡೆದುಕೊಂಡದ್ದರಿಂದ ನನ್ನ ಮೇಲೆ ಆತನಿಗೆ ಕರುಣೆ ಉಂಟಾಯಿತು;
ನಮ್ಮಲ್ಲಿ ಪಾಪವಿಲ್ಲವೆಂದು ನಾವು ಹೇಳಿದರೆ ನಮ್ಮನ್ನು ನಾವೇ ಮೋಸಗೊಳಿಸಿಕೊಂಡ ಹಾಗಾಯಿತು ಮತ್ತು ಸತ್ಯವೆಂಬುದು ನಮ್ಮಲ್ಲಿಲ್ಲವೆಂದು ತಿಳಿಯುತ್ತದೆ.