¶ ಅದಕ್ಕೆ ಅವರ ತಂದೆಯಾದ ಇಸ್ರಾಯೇಲನು ಅವರಿಗೆ, “ಹಾಗಿದ್ದರೆ, ನೀವು ಹೀಗೆ ಮಾಡಿರಿ. ಈ ದೇಶದಲ್ಲಿ ದೊರಕುವ ಶ್ರೇಷ್ಠವಾದ ವಸ್ತುಗಳಲ್ಲಿ ಕೆಲವನ್ನು ನಿಮ್ಮ ಚೀಲದಲ್ಲಿ ಇಟ್ಟುಕೊಂಡು ಆ ಮನುಷ್ಯನಿಗೆ ಕಾಣಿಕೆಯಾಗಿ ತೆಗೆದುಕೊಂಡು ಹೋಗಿರಿ. ಸ್ವಲ್ಪ ತೈಲ, ಜೇನು, ಸುಗಂಧದ್ರವ್ಯ, ಕಾಕಂಬಿ, ಹಾಲುಮಡ್ಡಿ, ರಕ್ತಬೋಳ, ಗೋಡಂಬಿ, ಬಾದಾಮಿ ಇವುಗಳನ್ನು ತೆಗೆದುಕೊಂಡು ಹೋಗಿರಿ.
TSK
TSK · ಆದಿಕಾಂಡ 32:20
Treasury of Scripture Knowledge references in ಕನ್ನಡ IRV.
ಈಗ ಮಾಡಬೇಕಾದದ್ದನ್ನು ನೀನೇ ಆಲೋಚಿಸಿ ಗೊತ್ತುಮಾಡು. ನಮ್ಮ ಯಜಮಾನನಿಗೂ, ಅವನ ಕುಟುಂಬದವರೆಲ್ಲರಿಗೂ ಕೇಡು ಹತ್ತಿರವಾಗಿದೆ. ಮೂರ್ಖನಾದ ಅವನೊಡನೆ ಮಾತನಾಡುವುದು ಅಸಾಧ್ಯ” ಎಂದು ಹೇಳಿದನು.
ಈಗ ಏಳು ಹೋರಿಗಳನ್ನೂ, ಏಳು ಟಗರುಗಳನ್ನೂ ತೆಗೆದುಕೊಂಡು ನನ್ನ ದಾಸನಾದ ಯೋಬನ ಬಳಿಗೆ ಹೋಗಿ ನಿಮ್ಮ ದೋಷಪರಿಹಾರಕ್ಕಾಗಿ ಹೋಮಮಾಡಿರಿ. ನನ್ನ ದಾಸನಾದ ಯೋಬನು ನಿಮ್ಮ ಪರವಾಗಿ ಪ್ರಾರ್ಥನೆ ಮಾಡುವನು. ನಾನು ಅವನ ವಿಜ್ಞಾಪನೆಯನ್ನು ಲಾಲಿಸಿ ನಿಮ್ಮ ಮೂರ್ಖತನಕ್ಕೆ ತಕ್ಕ ದಂಡನೆಯನ್ನು ನಿಮಗೆ ವಿಧಿಸುವುದಿಲ್ಲ. ನನ್ನ ದಾಸನಾದ ಯೋಬನು ನನ್ನ ವಿಷಯವಾಗಿ ಸತ್ಯವನ್ನು ನುಡಿದಂತೆ ನೀವು ನುಡಿಯಲಿಲ್ಲ” ಎಂದು ಹೇಳಿದನು.
ಕೋಪಿಷ್ಠನು ವ್ಯಾಜ್ಯವನ್ನೆಬ್ಬಿಸುವನು, ದೀರ್ಘಶಾಂತನು ಜಗಳವನ್ನು ಶಮನಪಡಿಸುವನು.
ಗುಪ್ತ ಬಹುಮಾನವು ಕೋಪವನ್ನಾರಿಸುವುದು, ಮಡಲಲ್ಲಿಟ್ಟ ಲಂಚವು ಕ್ರೋಧವನ್ನು ಅಣಗಿಸುವುದು.
ಎದುರಿಸುವವರನ್ನು ಸೌಮ್ಯತೆಯಿಂದ ತಿದ್ದುವವನೂ ಆಗಿರಬೇಕು. ಬಹುಶಃ ದೇವರು ಆ ಎದುರಿಸುವವರ ಮನಸ್ಸನ್ನು ತನ್ನ ಕಡೆಗೆ ತಿರುಗಿಸಿ ಸತ್ಯದ ಜ್ಞಾನವನ್ನು ಅವರಿಗೆ ಕೊಟ್ಟಾನು.