ನಿನ್ನ ಮುಖವು ಕಳೆಗುಂದಲು ಕಾರಣವೇನು? ನೀನು ತಲೆ ತಗ್ಗಿಸಲು ಕಾರಣವೇನು? ನೀನು ಒಳ್ಳೆಯ ಕೆಲಸ ಮಾಡಿದ್ದರೆ ನಿನ್ನ ತಲೆಯು ಎತ್ತಲ್ಪಡುವುದಲ್ಲವೇ? ಪಾಪವು ನಿನ್ನನ್ನು ಹಿಡಿಯಬೇಕೆಂದು ಬಾಗಿಲಲ್ಲಿ ಹೊಂಚಿಕೊಂಡಿರುವುದು, ಅದು ನಿನ್ನನ್ನು ತನ್ನ ಹಿಡಿತದಲ್ಲಿ ಇಟ್ಟುಕೊಳ್ಳುವುದು. ಆದರೆ ನೀನು ಅದನ್ನು ಹಿಡಿತದಲ್ಲಿ ಇರಿಸಿಕೊಳ್ಳಬೇಕು” ಎಂದು ಹೇಳಿದನು.
TSK
TSK · ಆದಿಕಾಂಡ 32:4
Treasury of Scripture Knowledge references in ಕನ್ನಡ IRV.
ಆ ಕೆಂಪಾದ ರುಚಿ ಪದಾರ್ಥವನ್ನು ಈಗಲೇ ತಿನ್ನುವುದಕ್ಕೆ ಕೊಡು” ಎಂದು ಕೇಳಿದನು. ಈ ಸಂಗತಿಯಿಂದ ಏಸಾವನಿಗೆ “ಎದೋಮ್” ಎಂದು ಹೆಸರಾಯಿತು.
¶ ಇಸಾಕನು ಏಸಾವನಿಗೆ, “ನನ್ನ ಮಗನೇ, ಅವನನ್ನು ನಿನ್ನ ದೊರೆಯನ್ನಾಗಿ ನೇಮಿಸಿದ್ದೇನೆ; ಅವನ ಅಣ್ಣತಮ್ಮಂದಿರನ್ನು ಅವನಿಗೆ ಸೇವಕನನ್ನಾಗಿ ಕೊಟ್ಟಿದ್ದೇನೆ; ದವಸಧಾನ್ಯಗಳನ್ನೂ ದ್ರಾಕ್ಷಾರಸವನ್ನೂ ಅವನ ಪೋಷಣೆಗಾಗಿ ಕೊಟ್ಟಿದ್ದೇನೆ ನೋಡು. ಹೀಗಿರುವಲ್ಲಿ ನಾನು ನಿನಗೋಸ್ಕರ ಏನು ಮಾಡಲಿ” ಎಂದನು.
ಆಗ ನೀನು, “ಇವು ನಿಮ್ಮ ಸೇವಕನಾದ ಯಾಕೋಬನದು. ತನ್ನ ಪ್ರಭುಗಳಾದ ನಿಮಗೆ ಇವುಗಳನ್ನು ಕಾಣಿಕೆಯಾಗಿ ಕಳುಹಿಸಿಕೊಟ್ಟಿದ್ದಾನೆ. ಅವನೂ ನಮ್ಮ ಹಿಂದೆ ಬರುತ್ತಿದ್ದಾನೆ” ಎಂದು ಉತ್ತರಕೊಡಬೇಕು ಎಂಬುದಾಗಿ ಅಪ್ಪಣೆಕೊಟ್ಟನು.
ತಾವು ದಯವಿಟ್ಟು ಸೇವಕನಿಗಿಂತಲೂ ಮುಂಚೆ ಹೋಗಬಹುದು ನಾನು ನನ್ನ ಮುಂದಿರುವ ಆಡುಕುರಿಗಳ ನಡಿಗೆಗೂ ಮಕ್ಕಳ ಶಕ್ತಿಗೂ ಸರಿಯಾಗಿ ಮೆಲ್ಲಮೆಲ್ಲನೆ ನಡೆದು ನನ್ನ ಪ್ರಭುವಿನ ಸೀಮೆಯಾಗಿರುವ ಸೇಯೀರಿಗೆ ಬರುತ್ತೇನೆ” ಎಂದನು.
¶ ಸೇಯೀರ್ ಬೆಟ್ಟದ ಸೀಮೆಯಲ್ಲಿದ್ದ ಎದೋಮ್ಯರ ಮೂಲಪುರುಷನಾದ ಏಸಾವನ ವಂಶದ ಚರಿತ್ರೆ:
“ಯೆಹೋವನೇ, ನೀನು ಹೊರಟು ಎದೋಮ್ಯರ ಪ್ರಾಂತ್ಯವಾದ ಸೇಯೀರಿನ ಮಾರ್ಗವಾಗಿ ಪಯಣಮಾಡುತ್ತಾ ಬರುವಾಗ ಭೂಲೋಕವು ಕಂಪಿಸಿತು, ಆಕಾಶವು ನಡುಗಿತು; ಮೇಘಮಂಡಲವು ಮಳೆಗರೆಯಿತು.
ಅವರು ಸೊಂಟಕ್ಕೆ ಗೋಣಿತಟ್ಟು ಕಟ್ಟಿಕೊಂಡು ತಲೆಯ ಮೇಲೆ ಹಗ್ಗವನ್ನಿಟ್ಟುಕೊಂಡು ಇಸ್ರಾಯೇಲರ ಅರಸನ ಬಳಿಗೆ ಬಂದು ಅವನಿಗೆ, “ನನಗೆ ಜೀವದಾನಮಾಡಬೇಕು ಎಂದು ನಿನ್ನ ಸೇವಕನಾದ ಬೆನ್ಹದದನು ವಿಜ್ಞಾಪಿಸುತ್ತಾನೆ” ಅಂದರು. ಆಗ ಅವನು, “ಬೆನ್ಹದದನು ಇನ್ನೂ ಜೀವದಿಂದಿರುತ್ತಾನೋ? ಅವನು ನನ್ನ ಸಹೋದರನು” ಎಂದು ಉತ್ತರಕೊಟ್ಟನು.
ಮೃದುವಾದ ಪ್ರತ್ಯುತ್ತರವು ಸಿಟ್ಟನ್ನಾರಿಸುವುದು, ಬಿರುನುಡಿಯು ಸಿಟ್ಟನ್ನೇರಿಸುವುದು.
¶ ದೂಮದ ಬಗ್ಗೆ ದೈವೋಕ್ತಿ. ಆತನು ಸೇಯೀರಿನಿಂದ ನನ್ನನ್ನು ಕರೆದು, “ಕಾವಲುಗಾರನೇ, ಈಗ ರಾತ್ರಿ ಎಷ್ಟು ಸಮಯವಾಯಿತು? ಕಾವಲುಗಾರನೇ, ರಾತ್ರಿ ಸಮಯ ಎಷ್ಟು ಕಳೆಯಿತು
ಸಾರಳು ಹಾಗೆಯೇ ಅಬ್ರಹಾಮನಿಗೆ ವಿಧೇಯಳಾಗಿದ್ದು ಅವನನ್ನು ಯಜಮಾನ ಎಂದು ಕರೆದಳು. ನೀವು ಒಳ್ಳೆಯದನ್ನು ಮಾಡುತ್ತಾ ಯಾವ ಭೀತಿಗೂ ಭಯಪಡುವುದಿಲ್ಲವಾದರೆ ನೀವು ಆಕೆಯ ಕುವರಿಯರೇ ಆಗುವಿರಿ.