¶ ಆ ಹುಡುಗರಿಬ್ಬರೂ ಬೆಳೆದಾಗ ಅವರಲ್ಲಿ ಏಸಾವನು ಬೇಟೆಯಾಡುವುದರಲ್ಲಿ ನಿಪುಣನಾಗಿದ್ದನು; ಅವನು ಅರಣ್ಯವಾಸಿ. ಯಾಕೋಬನು ಸಾಧು ಮನುಷ್ಯನಾಗಿ ಗುಡಾರಗಳಲ್ಲೇ ವಾಸಿಸುತ್ತಿದ್ದನು.
TSK
TSK · ಆದಿಕಾಂಡ 34:13
Treasury of Scripture Knowledge references in ಕನ್ನಡ IRV.
¶ ಎರಡು ವರ್ಷಗಳಾದ ನಂತರ ಅಬ್ಷಾಲೋಮನು ಒಂದು ದಿನ ಎಫ್ರಾಯೀಮಿನ ಬಳಿಯಲ್ಲಿರುವ ಬಾಳ್ ಹಾಚೋರಿನಲ್ಲಿ ಕುರಿಗಳ ಉಣ್ಣೆಯನ್ನು ಕತ್ತರಿಸುವಾಗ ಎಲ್ಲಾ ರಾಜಪುತ್ರರನ್ನು ಔತಣಕ್ಕೆ ಕರೆದನು.
ದೇವರ ಪಕ್ಷವಾಗಿ ಅನ್ಯಾಯವನ್ನು ನುಡಿಯುವಿರೋ? ಆತನಿಗೋಸ್ಕರ ಮೋಸದ ಮಾತುಗಳನ್ನಾಡುವಿರೋ?
ದುಷ್ಟನು ತನ್ನ ತುಟಿಗಳ ದೋಷದಿಂದ ಬೋನಿಗೆ ಬೀಳುವನು, ಶಿಷ್ಟನು ಇಕ್ಕಟ್ಟಿನಿಂದ ಪಾರಾಗುವನು.
ಕಾರಣವಿಲ್ಲದೆ ನೆರೆಯವನಿಗೆ ವಿರುದ್ಧವಾಗಿ ಸಾಕ್ಷಿ ಹೇಳಬೇಡ, ಮಾತಿನಿಂದ ಮೋಸಮಾಡಬೇಡ.
ಹೌದು, ಯೆಹೋವನಿಗೆ ತಪ್ಪಿ ನಡೆದು ಆತನನ್ನು ಅಲ್ಲಗಳೆದಿದ್ದೇವೆ, ನಮ್ಮ ದೇವರನ್ನು ಹಿಂಬಾಲಿಸುವುದನ್ನು ಬಿಟ್ಟು ಅವನಿಂದ ದೂರವಾಗಿದ್ದೇವೆ. ಅನ್ಯಾಯವನ್ನೂ ದ್ರೋಹವನ್ನೂ ನುಡಿದಿದ್ದೇವೆ, ಹೃದಯಪೂರ್ವಕವಾಗಿ ಸುಳ್ಳುಮಾತುಗಳನ್ನು ಕಲ್ಪಿಸಿ ಆಡಿದ್ದೇವೆ.
“‘ಯೇಸುವಿನ ಶಿಷ್ಯರು ರಾತ್ರಿಯಲ್ಲಿ ಬಂದು ನಾವು ನಿದ್ದೆಮಾಡುತ್ತಿದ್ದಾಗ ಅವನ ಮೃತದೇಹವನ್ನು ಕದ್ದುಕೊಂಡು ಹೋದರು’ ಎಂದು ಹೇಳಿರಿ;
ಯಾರೂ ಅಪಕಾರಕ್ಕೆ ಅಪಕಾರಮಾಡದಂತೆ ನೋಡಿಕೊಳ್ಳಿರಿ, ಯಾವಾಗಲೂ ನೀವು ಒಬ್ಬರಿಗೊಬ್ಬರು ಹಿತವನ್ನು ಮಾಡಿಕೊಂಡಿರುವುದಲ್ಲದೆ ಎಲ್ಲರಿಗೂ ಒಳ್ಳೆಯದನ್ನು ಮಾಡುವವರಾಗಿರಿ.