¶ ಆಗ ಲಾಬಾನನು ತನ್ನ ಕುರಿಗಳ ಉಣ್ಣೆಯನ್ನು ಕತ್ತರಿಸುವುದಕ್ಕೋಸ್ಕರ ಹೋಗಿದ್ದನು. ಹೀಗಿರುವಲ್ಲಿ ರಾಹೇಲಳು ತನ್ನ ತಂದೆಯ ಮನೆಯಲ್ಲಿದ್ದ ವಿಗ್ರಹಗಳನ್ನು ಕದ್ದುಕೊಂಡಳು.
TSK
TSK · ಆದಿಕಾಂಡ 35:2
Treasury of Scripture Knowledge references in ಕನ್ನಡ IRV.
ದೇಶಾಧಿಪತಿಯಾಗಿರುವ ಹಿವ್ವಿಯನಾದ ಹಮೋರನ ಮಗ ಶೆಕೆಮನು ಆಕೆಯನ್ನು ನೋಡಿ ತೆಗೆದುಕೊಂಡು ಹೋಗಿ ಮಾನಭಂಗಪಡಿಸಿದನು.
¶ ಇಸ್ರಾಯೇಲನು ಆ ದೇಶದಲ್ಲಿ ವಾಸವಾಗಿದ್ದಾಗ ರೂಬೇನನು ತನ್ನ ತಂದೆಯ ಉಪಪತ್ನಿಯಾದ ಬಿಲ್ಹಳನ್ನು ಸಂಗಮಿಸಿದನು. ಈ ಸಂಗತಿಯು ಇಸ್ರಾಯೇಲನಿಗೆ ತಿಳಿಯಿತು. ಯಾಕೋಬನಿಗೆ ಹನ್ನೆರಡು ಮಂದಿ ಗಂಡು ಮಕ್ಕಳಿದ್ದರು.
ಮೋಶೆ ಬೆಟ್ಟದಿಂದಿಳಿದು ಜನರ ಬಳಿಗೆ ಬಂದು, ಅವರನ್ನು ಶುದ್ಧಗೊಳಿಸಿದನು. ಅವರು ತಮ್ಮ ಬಟ್ಟೆಗಳನ್ನು ತೊಳೆದುಕೊಂಡು ಶುದ್ಧರಾದರು.
¶ ನಾನು ನಿಮಗೆ ಹೇಳಿದ್ದನ್ನೆಲ್ಲಾ ಜಾಗರೂಕತೆಯಿಂದ ಕೈಕೊಳ್ಳಬೇಕು. ಅನ್ಯ ದೇವರುಗಳ ಹೆಸರುಗಳನ್ನು ಸ್ಮರಿಸಬಾರದು, ಅವುಗಳನ್ನು ಉಚ್ಚರಿಸಬಾರದು.
ಅವನು ತನ್ನ ಬಟ್ಟೆಗಳನ್ನು ಒಗೆದುಕೊಳ್ಳದೆ ಅಥವಾ ಸ್ನಾನ ಮಾಡದೆ ಹೋದರೆ ತನ್ನ ಪಾಪದ ಫಲವನ್ನು ಅನುಭವಿಸಬೇಕು’” ಎಂದು ಹೇಳಿದನು.
ನಾನಲ್ಲದೆ ನಿನಗೆ ಬೇರೆ ದೇವರುಗಳು ಇರಬಾರದು.
¶ ಅವರು ದೇವರೆಂದು ಮಾಡಿಕೊಂಡ ಮರದ ವಿಗ್ರಹಗಳನ್ನು ನೀವು ಬೆಂಕಿಯಿಂದ ಸುಟ್ಟುಬಿಡಬೇಕು. ಆ ವಿಗ್ರಹಗಳ ಮೇಲಿರುವ ಬೆಳ್ಳಿಬಂಗಾರವನ್ನು ನೀವು ಆಶಿಸಬಾರದು; ಅದನ್ನು ತೆಗೆದುಕೊಂಡರೆ ಅದು ನಿಮಗೆ ಉರುಲಾಗುವುದು. ಅದು ನಿಮ್ಮ ದೇವರಾದ ಯೆಹೋವನಿಗೆ ಅಸಹ್ಯವಾದುದು.
ಅವರು ಅನ್ಯದೇವರುಗಳನ್ನು ಪೂಜಿಸಿ ಆತನನ್ನು ರೇಗಿಸಿದರು; ನಿಷಿದ್ಧಾಚಾರಗಳನ್ನು ನಡಿಸಿ ಆತನಿಗೆ ಸಿಟ್ಟೇರಿಸಿದರು.
ಯೆಹೋಶುವನು ಅವರಿಗೆ, “ನಿಮ್ಮ ದೇವರಾದ ಯೆಹೋವನು ಹೇಳುವುದೇನೆಂದರೆ, ಅಬ್ರಹಾಮ, ನಾಹೋರ ಎಂಬುವವರ ತಂದೆಯಾದ ತೆರಹ, ಮೊದಲಾದ ನಿಮ್ಮ ಮೂಲ ಪುರುಷರು ಪೂರ್ವದಲ್ಲಿ ಯೂಫ್ರೆಟಿಸ್ ನದಿಯ ಆಚೆಯಲ್ಲಿದ್ದ ಅನ್ಯದೇವತೆಗಳನ್ನು ಪೂಜಿಸುತ್ತಿದ್ದರು.
ಯೆಹೋವನನ್ನು ಆರಾಧಿಸುವುದು ನಿಮಗೆ ಸರಿಕಾಣದಿದ್ದರೆ ಯಾರನ್ನು ಸೇವಿಸಬೇಕೆಂದಿದ್ದೀರೆಂಬುದನ್ನು? ಈ ಹೊತ್ತೇ ಆರಿಸಿಕೊಳ್ಳಿರಿ: ನಿಮ್ಮ ಪೂರ್ವಿಕರು ಯೂಫ್ರೆಟಿಸ್ ನದಿಯ ಆಚೆಯಲ್ಲಿ ಸೇವಿಸುತ್ತಿದ್ದ ದೇವತೆಗಳೋ ಈ ದೇಶದ ಮೂಲ ನಿವಾಸಿಗಳಾದ ಅಮೋರಿಯರ ದೇವತೆಗಳೋ ಹೇಳಿರಿ. ನಾನೂ, ನನ್ನ ಮನೆಯವರೂ ಯೆಹೋವನನ್ನೇ ಸೇವಿಸುವೆವು” ಎಂದನು.
ಆಗ ಯೆಹೋಶುವನು ಅವರಿಗೆ, “ಹಾಗಾದರೆ ನಿಮ್ಮಲ್ಲಿರುವ ಅನ್ಯದೇವತೆಗಳನ್ನು ತೆಗೆದುಹಾಕಿ ಇಸ್ರಾಯೇಲಿನ ದೇವರಾದ ಯೆಹೋವನ ಕಡೆಗೆ ಮನಸ್ಸನ್ನು ತಿರುಗಿಸಿಕೊಳ್ಳಿರಿ” ಎಂದನು.
ನವೊಮಿಯು ರೂತಳಿಗೆ, ಇಗೋ, ನಿನ್ನ ಓರಗಿತ್ತಿಯು ತಿರುಗಿ ತನ್ನ ಜನರ ಬಳಿಗೂ, ತನ್ನ ಕುಲ ದೇವರುಗಳ ಬಳಿಗೂ ಹೋಗಿದ್ದಾಳೆ. ನೀನೂ ಆಕೆಯಂತೆ ನಿನ್ನ ಜನರ ಬಳಿಗೆ ಹೋಗು ಅಂದಾಗ,
ನಿನ್ನ ಇಸ್ರಾಯೇಲಿನ ಪ್ರಜೆಗೆ ಸಮಾನವಾದ ಜನಾಂಗವು ಲೋಕದಲ್ಲಿ ಯಾವುದಿದೆ? ನೀನೇ ಹೋಗಿ ಅದನ್ನು ವಿಮೋಚಿಸಿ, ಸ್ವಪ್ರಜೆಯನ್ನಾಗಿ ಮಾಡಿಕೊಂಡು, ನಿನ್ನ ಹೆಸರನ್ನು ಪ್ರಸಿದ್ಧಪಡಿಸಿಕೊಂಡಿದ್ದಿ, ಐಗುಪ್ತರು ಮೊದಲಾದ ಅನ್ಯಜನರ ಕೈಗೂ ಅವರ ದೇವತೆಗಳ ಕೈಗೂ ಸಿಕ್ಕದಂತೆ ತಪ್ಪಿಸಿ, ರಕ್ಷಿಸಿ, ಅವರ ಎದುರಿನಲ್ಲೇ ನಿನ್ನ ದೇಶಕ್ಕೋಸ್ಕರ ಭಯಂಕರವಾದ ಮಹತ್ಕಾರ್ಯಗಳನ್ನು ನಡಿಸಿದಿ.
ದಮಸ್ಕದ ಅಬಾನಾ ಮತ್ತು ಪರ್ಪರ್ ಎಂಬ ನದಿಗಳು ಇಸ್ರಾಯೇಲರ ಎಲ್ಲಾ ನದಿ ಹೊಳೆಹಳ್ಳಗಳಿಗಿಂತ ಉತ್ತಮವಾಗಿವೆಯಲ್ಲವೋ? ಸ್ನಾನದಿಂದ ಶುದ್ಧನಾಗುವ ಹಾಗಿದ್ದರೆ ನಾನು ಅವುಗಳಲ್ಲಿಯೇ ಸ್ನಾನಮಾಡಬಹುದಲ್ಲವೇ?” ಎಂದು ಹೇಳಿ, ಬಲು ಸಿಟ್ಟಿನಿಂದ ಹೊರಟುಹೋದನು.
ಜನಾಂಗಗಳ ದೇವತೆಗಳೆಲ್ಲಾ ಬರೀ ಬೊಂಬೆಗಳೇ. ಯೆಹೋವನಾದರೋ ಗಗನಮಂಡಲವನ್ನು ನಿರ್ಮಿಸಿದವನು.
ನನ್ನ ಪಾಪವನ್ನು ಸಂಪೂರ್ಣವಾಗಿ ತೊಳೆದುಬಿಡು; ನನ್ನ ದೋಷವನ್ನು ಪರಿಹರಿಸಿ, ನನ್ನನ್ನು ಶುದ್ಧಿಗೊಳಿಸು.
ಸನ್ಮಾರ್ಗವನ್ನು ಲಕ್ಷಿಸಿ ನಡೆಯುವೆನು; ನನಗೆ ಯಾವಾಗ ದರ್ಶನಕೊಡುವಿ? ಮನೆಯೊಳಗೂ ಯಥಾರ್ಥ ಹೃದಯದಿಂದಲೇ ನಡೆದುಕೊಳ್ಳುವೆನು.
ನಿಮ್ಮನ್ನು ತೊಳೆದು ಶುದ್ಧರಾಗಿ, ನನ್ನ ಕಣ್ಣೆದುರಿನಿಂದ ನಿಮ್ಮ ದುಷ್ಕೃತ್ಯಗಳನ್ನು ತೊಲಗಿಸಿರಿ, ದುರಾಚಾರವನ್ನು ಬಿಡಿ,
ಯೆಹೋವನು, “ನಾನು ನಿನ್ನನ್ನು ಹೇಗೆ ಕ್ಷಮಿಸಲಿ? ನಿನ್ನ ಜನರು ನನ್ನನ್ನು ಬಿಟ್ಟು ದೇವರಲ್ಲದವುಗಳ ಮೇಲೆ ಆಣೆಯಿಟ್ಟಿದ್ದಾರೆ. ನಾನು ಅವರಿಗೆ ಹೊಟ್ಟೆ ತುಂಬಾ ಆಹಾರಕೊಟ್ಟ ಮೇಲೂ ಅವರು ವ್ಯಭಿಚಾರ ಮಾಡಿದರು, ವ್ಯಭಿಚಾರಿಣಿಯರ ಮನೆಗಳಲ್ಲಿ ಗುಂಪುಕೂಡಿದರು.
ಮನುಷ್ಯ ಮಾತ್ರದವನು ದೇವರುಗಳನ್ನು ಕಲ್ಪಿಸಿಕೊಳ್ಳಬಲ್ಲನೇ? ಇವು ದೇವರುಗಳೇ ಅಲ್ಲ.
‘ನೀವೆಲ್ಲರೂ ನಿಮ್ಮ ಕಣ್ಣಿಗೆ ಕಾಣುವ ಇಷ್ಟವಾದ ಅಸಹ್ಯ ವಸ್ತುಗಳನ್ನು ಬಿಸಾಡಿಬಿಡಿರಿ, ಐಗುಪ್ತದ ವಿಗ್ರಹಗಳಿಂದ ನಿಮ್ಮನ್ನು ಹೊಲಸು ಮಾಡಿಕೊಳ್ಳಬೇಡಿರಿ; ನಾನು ನಿಮ್ಮ ದೇವರಾದ ಯೆಹೋವನು’” ಎಂಬುದಾಗಿ ಅವರನ್ನು ಎಚ್ಚರಿಸಿದೆನು.
ದ್ರಾಕ್ಷಾರಸವನ್ನು ಕುಡಿದು ಬಂಗಾರ, ಬೆಳ್ಳಿ, ತಾಮ್ರ, ಕಬ್ಬಿಣ, ಮರಕಲ್ಲುಗಳ ದೇವರುಗಳನ್ನು ಸ್ತುತಿಸಿದರು.
ಆದರೆ ಕೈಯಿಂದ ಮಾಡಿದ ಮೂರ್ತಿಗಳು ದೇವರುಗಳಲ್ಲವೆಂದು ಆ ಪೌಲನು ಹೇಳಿ ಎಫೆಸದಲ್ಲಿ ಮಾತ್ರವಲ್ಲದೆ ಹೆಚ್ಚುಕಡಿಮೆ ಆಸ್ಯಸೀಮೆಯಲ್ಲೆಲ್ಲಾ ಬಹಳ ಜನರನ್ನು ಒಡಂಬಡಿಸಿ ತಿರುಗಿಸಿಬಿಟ್ಟಿದ್ದಾನೆ ಎಂಬುದನ್ನು ನೀವು ನೋಡುತ್ತಿದ್ದೀರಿ, ಕೇಳುತ್ತಿದ್ದೀರಿ.
ಬೆಳಕಿಗೂ, ಕತ್ತಲೆಗೂ ಅನ್ಯೋನ್ಯತೆಯೇನು? ಕ್ರಿಸ್ತನಿಗೂ ಸೈತಾನನಿಗೂ ಒಪ್ಪಂದವೇನು? ವಿಶ್ವಾಸಿಗೂ ಅವಿಶ್ವಾಸಿಗೂ ಪಾಲುಗಾರಿಕೆಯೇನು?
¶ ಹಿಂದೆ ನೀವು ದೇವರನ್ನು ಅರಿಯದೆ, ಸ್ವಾಭಾವಿಕವಾಗಿ ದೇವರಲ್ಲದವರುಗಳಿಗೆ ದಾಸರಾಗಿದ್ದೀರಿ.
ದೇವರ ಸಮೀಪಕ್ಕೆ ಬನ್ನಿರಿ, ಆಗ ಆತನು ನಿಮ್ಮ ಸಮೀಪಕ್ಕೆ ಬರುವನು. ಪಾಪಿಗಳೇ, ನಿಮ್ಮ ಕೈಗಳನ್ನು ಶುಚಿಮಾಡಿಕೊಳ್ಳಿರಿ; ಎರಡು ಮನಸ್ಸುಳ್ಳವರೇ, ನಿಮ್ಮ ಹೃದಯಗಳನ್ನು ನಿರ್ಮಲಮಾಡಿಕೊಳ್ಳಿರಿ.
ಬೆಂಕಿಯ ಬಾಯಲ್ಲಿ ಇರುವವರನ್ನು ಎಳೆದು ಸಂರಕ್ಷಿಸಿರಿ, ಕೆಲವರನ್ನು ಭಯಪಡುತ್ತಾ ಕರುಣಿಸಿರಿ. ಶಾರೀರಿಕ ನಡತೆಯಿಂದ ಹೊಲಸಾದ ಅವರ ಉಡುಪನ್ನೂ ಸಹ ಹಗೆಮಾಡಿರಿ.