¶ ತಂದೆಯು ಯಾಕೋಬನಿಗೆ ಮಾಡಿದ ಆಶೀರ್ವಾದದ ನಿಮಿತ್ತ ಏಸಾವನು ಯಾಕೋಬನನ್ನು ಹಗೆಮಾಡಿ ತನ್ನ ಮನಸ್ಸಿನೊಳಗೆ, “ತಂದೆಗೋಸ್ಕರ ದುಃಖಿಸುವ ಕಾಲ ಸಮೀಪಿಸಿತು. ತರುವಾಯ ನನ್ನ ತಮ್ಮನಾದ ಯಾಕೋಬನನ್ನು ಕೊಲ್ಲುವೆನು” ಎಂದುಕೊಂಡನು.
TSK
TSK · ಆದಿಕಾಂಡ 37:4
Treasury of Scripture Knowledge references in ಕನ್ನಡ IRV.
ಹೀಗೆ ಯೋಸೇಫನ ಅಣ್ಣಂದಿರು ಅವನ ಮೇಲೆ ಹೊಟ್ಟೆಕಿಚ್ಚುಪಟ್ಟರು. ಆದರೆ ಅವನ ತಂದೆಯು ಅವನ ಮಾತುಗಳನ್ನು ಮನಸ್ಸಿನಲ್ಲಿ ಇಟ್ಟುಕೊಂಡನು.
ಬಿಲ್ಲುಗಾರರು ಅವನನ್ನು ಆಕ್ರಮಿಸುವರು, ಹಗೆತನದಿಂದ ಬಾಣವನ್ನು ಅವನ ಮೇಲೆ ಪ್ರಯೋಗಿಸುವರು.
ದಾವೀದನು ಜನರ ಸಂಗಡ ಹೀಗೆ ಮಾತನಾಡುತ್ತಿರುವುದನ್ನು ಅವನ ಹಿರಿಯ ಅಣ್ಣನಾದ ಎಲೀಯಾಬನು ಕೇಳಿ ಕೋಪಗೊಂಡು, “ನೀನು ಇಲ್ಲಿಗೆ ಬಂದದ್ದೇಕೆ? ಅಡವಿಯಲ್ಲಿರುವ ನಾಲ್ಕಾರು ಕುರಿಗಳನ್ನು ಯಾರಿಗೊಪ್ಪಿಸಿ ಬಂದಿರುವೆ. ನಿನ್ನ ಸೊಕ್ಕು, ತುಂಟತನವು ನನಗೆ ಗೊತ್ತಿದೆ. ನೀನು ಯುದ್ಧವನ್ನು ನೋಡುವುದಕ್ಕೆ ಬಂದಿದ್ದೀ” ಎಂದು ಅವನನ್ನು ಗದರಿಸಿದನು.
ನಿಷ್ಕಾರಣ ದ್ವೇಷಿಗಳು ನನ್ನ ತಲೆಗೂದಲುಗಳಿಗಿಂತ ಹೆಚ್ಚಾಗಿದ್ದಾರೆ; ನಿರಾಕಾರಣವಾಗಿ ನನ್ನನ್ನು ಮುಗಿಸಿಬಿಡಬೇಕೆಂದಿರುವ ವೈರಿಗಳು ಬಲಿಷ್ಠರಾಗಿದ್ದಾರೆ. ನಾನು ಅಪಹರಿಸದಿದ್ದರೂ ನನ್ನಿಂದ ದಂಡ ತೆಗೆದುಕೊಂಡರಲ್ಲಾ.
ಆದುದರಿಂದ ಆತನ ಸಹೋದರರು ಆತನಿಗೆ “ನೀನು ಮಾಡುವ ಕಾರ್ಯಗಳನ್ನು ನಿನ್ನ ಶಿಷ್ಯರೂ ಸಹ ನೋಡುವಂತೆ, ಇಲ್ಲಿಂದ ಹೊರಟು, ಯೂದಾಯಕ್ಕೆ ಹೋಗು.
ಏಕೆಂದರೆ ನಾವು ಸಹ, ಮೊದಲು ಅವಿವೇಕಿಗಳೂ, ಅವಿಧೇಯರೂ, ಮೋಸಹೋದವರೂ, ನಾನಾ ವಿಧವಾದ ದುರಾಶೆಗಳಿಗೆ ಮತ್ತು ಭೋಗಗಳಿಗೆ ಅಧೀನರೂ, ಕೆಟ್ಟತನ, ಹೊಟ್ಟೆಕಿಚ್ಚುಗಳಲ್ಲಿ ಕಾಲಕಳೆಯುವವರೂ, ಅಸಹ್ಯರೂ, ಒಬ್ಬರನ್ನೊಬ್ಬರು ಹಗೆಮಾಡುವವರೂ ಆಗಿದ್ದೆವು.
ಆದ್ದರಿಂದ ದೇವರ ಮಕ್ಕಳು ಯಾರೆಂಬುದು ಹಾಗೂ ಸೈತಾನನ ಮಕ್ಕಳು ಯಾರೆಂಬುದು ಇದರಿಂದ ತಿಳಿದುಬರುತ್ತದೆ. ನೀತಿಯನ್ನು ಅನುಸರಿಸದವರೂ ತನ್ನ ಸಹೋದರನನ್ನು ಪ್ರೀತಿಸದವರೂ ದೇವರಿಗೆ ಸಂಬಂಧಪಟ್ಟವರಲ್ಲ.
ಒಬ್ಬನು, “ತಾನು ದೇವರನ್ನು ಪ್ರೀತಿಸುತ್ತೇನೆ” ಎಂದು ಹೇಳಿ ತನ್ನ ಸಹೋದರನನ್ನು ದ್ವೇಷಿಸಿದರೆ ಅವನು ಸುಳ್ಳುಗಾರನಾಗಿದ್ದಾನೆ. ಏಕೆಂದರೆ ತನ್ನೊಂದಿಗೆ ಇರುವ ಸಹೋದರನನ್ನು ಪ್ರೀತಿಸದವನು, ತಾನು ಕಾಣದಿರುವ ದೇವರನ್ನು ಹೇಗೆ ಪ್ರೀತಿಸಬಲ್ಲನು?