¶ ದೇವರು ಆ ಹುಡುಗನ ಸಂಗಡ ಇದ್ದನು; ಅವನು ಬೆಳೆದು ಕಾಡಿನಲ್ಲಿ ವಾಸವಾಗಿದ್ದು ಬಿಲ್ಲುಗಾರನಾದನು.
TSK
TSK · ಆದಿಕಾಂಡ 39:3
Treasury of Scripture Knowledge references in ಕನ್ನಡ IRV.
ಆದುದರಿಂದ ನೀನು ನನಗೂ, ನನ್ನ ಮಕ್ಕಳಿಗೂ, ನನ್ನ ಸಂತತಿಗೂ ಅನ್ಯಾಯ ಮಾಡದೆ, ನಾನು ನಿನಗೆ ಹಿತವನ್ನು ಮಾಡಿದಂತೆಯೇ, ನನಗೂ, ನೀನು ವಾಸಿಸುವ ಈ ದೇಶಕ್ಕೂ ಹಿತವನ್ನು ಮಾಡುವುದಾಗಿ ದೇವರ ಮೇಲೆ ಪ್ರಮಾಣ ಮಾಡಬೇಕು” ಎಂದು ಹೇಳಿದನು.
“ಯೆಹೋವನು ನಿನ್ನ ಸಂಗಡ ಇದ್ದಾನೆ ಎಂದು ನಮಗೆ ಸ್ಪಷ್ಟವಾಗಿ ಕಂಡು ಬಂದುದರಿಂದ ನೀನೂ, ನಾವೂ ಒಬ್ಬರಿಗೊಬ್ಬರು ಪ್ರಮಾಣಪೂರ್ವಕವಾಗಿ ಒಡಂಬಡಿಕೆ ಮಾಡಿಕೊಳ್ಳೋಣವೆಂದು ಆಲೋಚಿಸಿದೆವು.
ನಾನು ಬರುವುದಕ್ಕೆ ಮೊದಲು ನಿನಗಿದ್ದದ್ದು ಸ್ವಲ್ಪವೇ. ಈಗ ಅದು ಬಹಳವಾಗಿ ಹೆಚ್ಚಿದೆ. ನಾನು ಕೈಹಾಕಿದ ಎಲ್ಲಾ ಕೆಲಸದಲ್ಲಿಯೂ ಯೆಹೋವನು ನಿನ್ನನ್ನು ಅಭಿವೃದ್ಧಿಪಡಿಸಿದ್ದಾನೆ. ಇನ್ನು ನಾನು ನನ್ನ ಸ್ವಂತ ಮನೆಗೋಸ್ಕರ ಯಾವಾಗ ಸಂಪಾದನೆ ಮಾಡಿಕೊಳ್ಳಲಿ” ಎಂದು ಹೇಳಿದನು.
ಯೆಹೋವನು ಅವನ ಸಂಗಡ ಇದ್ದು ಅವನು ನಡಿಸಿದ್ದೆಲ್ಲವನ್ನು ಸಫಲಗೊಳಿಸಿದ್ದರಿಂದ ಅವನ ವಶಕ್ಕೆ ಒಪ್ಪಿಸಿದ್ದ ಯಾವ ವಿಷಯದ ಕುರಿತಾಗಿಯೂ ಸೆರೆಮನೆಯ ಯಜಮಾನನು ಯೋಚಿಸದೆ ನಿಶ್ಚಿಂತನಾಗಿದ್ದನು.
ನನ್ನ ಸೇವಕನಾದ ಮೋಶೆಯು ನಿನಗೆ ಬೋಧಿಸಿ ಆಜ್ಞಾಪಿಸಿದ ಧರ್ಮೋಪದೇಶವನ್ನೆಲ್ಲಾ ಕೈಕೊಂಡು ನಡೆಯುವುದರಲ್ಲಿ ಸ್ಥಿರಚಿತ್ತನಾಗಿರು, ಪೂರ್ಣಧೈರ್ಯದಿಂದಿರು. ಅದನ್ನು ಬಿಟ್ಟು ಎಡಕ್ಕಾಗಲಿ ಬಲಕ್ಕಾಗಲಿ ತಿರುಗಬೇಡ, ಆಗ ನೀನು ಸಫಲನಾಗುವಿ.
¶ ಸಮುವೇಲನು ದೊಡ್ಡವನಾಗುತ್ತಾ ಬಂದನು. ಯೆಹೋವನು ಅವನೊಡನೆ ಇದ್ದುದ್ದರಿಂದ ಅವನ ಪ್ರವಾದನೆಗಳಲ್ಲಿ ಒಂದೂ ಬಿದ್ದುಹೋಗಲಿಲ್ಲ.
ಮೀಕಲಳು ಅವನನ್ನು ಬಹಳವಾಗಿ ಪ್ರೀತಿಸುವವಳಾದಳು. ಯೆಹೋವನು ದಾವೀದನ ಸಂಗಡ ಇದ್ದಾನೆಂದು,
ಆಗ ಎಲ್ಲಾಜಾರನ ಮಗನಾದ ಫೀನೆಹಾಸನು ಅವರ ನಾಯಕನಾಗಿದ್ದನು. ಯೆಹೋವನು ಇವನ ಸಂಗಡ ಇದ್ದನು.
¶ ದಾವೀದನ ಮಗನಾದ ಸೊಲೊಮೋನನು ತನ್ನ ರಾಜ್ಯದಲ್ಲಿ ಸಂಪೂರ್ಣ ಪ್ರಭುತ್ವ ಹೊಂದಿದನು. ಅವನ ದೇವರಾದ ಯೆಹೋವನು ಅವನ ಸಂಗಡ ಇದ್ದು ಅವನನ್ನು ಬಲಾಢ್ಯನಾಗುವಂತೆ ಆಶೀರ್ವದಿಸಿ ನಡೆಸಿದನು.
ನಾನು ಅವರಿಗೆ, “ಪರಲೋಕದ ದೇವರು ನಮಗೆ ಕಾರ್ಯವನ್ನು ಸಾಧಿಸಿಕೊಡುವನು. ಆದುದರಿಂದ ಆತನ ಸೇವಕರಾದ ನಾವು ಕಟ್ಟುವುದಕ್ಕೆ ಮನಸ್ಸುಮಾಡಿದ್ದೇವೆ. ನಿಮಗಾದರೋ ಯೆರೂಸಲೇಮಿನಲ್ಲಿ ಯಾವ ಪಾಲೂ, ಹಕ್ಕೂ, ಹೆಸರೂ, ಸ್ಮಾರಕವೂ ಇರುವುದಿಲ್ಲ” ಎಂದು ಉತ್ತರಕೊಟ್ಟೆನು.
¶ ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ಆ ಕಾಲದಲ್ಲಿ ಜನಾಂಗಗಳ ವಿವಿಧ ಭಾಷೆಗಳವರಾದ ಹತ್ತು ಜನರು ಯೆಹೂದ್ಯನೊಬ್ಬನ ಸೆರಗನ್ನು ಹಿಡಿದುಕೊಂಡು, ‘ನಾವು ನಿಮ್ಮೊಂದಿಗೆ ಬರುವೆವು, ಏಕೆಂದರೆ ದೇವರು ನಿಮ್ಮ ಸಂಗಡ ಇದ್ದಾನೆಂಬ ಸುದ್ದಿಯು ನಮ್ಮ ಕಿವಿಗೆ ಬಿದ್ದಿದೆ’” ಎಂದು ಹೇಳುವರು.
ನಿಮ್ಮಲ್ಲಿ ಪ್ರತಿಯೊಬ್ಬನು ತನಗೆ ಬಂದಂಥ ಸಂಪಾದನೆಯಲ್ಲಿ ಸಾಧ್ಯವಾದಷ್ಟನ್ನು ವಾರದ ಮೊದಲನೆಯ ದಿನದಲ್ಲಿ ಸಂಗ್ರಹಿಸಿ ತನ್ನ ಮನೆಯಲ್ಲಿಟ್ಟುಕೊಂಡಿರಬೇಕು. ಇದರಿಂದ ನಾನು ಬಂದಾಗ ಹಣ ಸಂಗ್ರಹಣೆ ಮಾಡುವ ಅಗತ್ಯವಿರುವುದಿಲ್ಲ.
‹ತಾವು ಯೆಹೂದ್ಯರೆಂದು ಸುಳ್ಳಾಗಿ ಕೊಚ್ಚಿಕೊಳ್ಳುವ ಕೆಲವರನ್ನು›‹ಸೈತಾನನ ಸಭಾಮಂದಿರದಿಂದ ಕರೆಯಿಸುವೆನು. ಅವರು›‹ನಿನ್ನ ಪಾದಕ್ಕೆ ಬಿದ್ದು ನಮಸ್ಕರಿಸುವಂತೆಯೂ, ನಿನ್ನ ಬಗ್ಗೆ ನನಗಿರುವ ಪ್ರೀತಿ ಅವರಿಗೆ ತಿಳಿಯುವಂತೆ ಮಾಡುವೆನು.›