¶ ತರುವಾಯ ಯೆಹೋವನಾದ ದೇವರು ಸಂಜೆಯ ತಂಗಾಳಿಯಲ್ಲಿ ತೋಟದೊಳಗೆ ಸಂಚರಿಸುತ್ತಿರುವಾಗ ಆ ಮನುಷ್ಯನು ಮತ್ತು ಸ್ತ್ರೀಯು ಆತನ ಸಪ್ಪಳವನ್ನು ಕೇಳಿ ಆತನಿಗೆ ಕಾಣಿಸಬಾರದೆಂದು ತೋಟದ ಮರಗಳ ಹಿಂದೆ ಅಡಗಿಕೊಂಡರು.
TSK
TSK · ಆದಿಕಾಂಡ 4:16
Treasury of Scripture Knowledge references in ಕನ್ನಡ IRV.
¶ ಆ ಗುಡುಗು, ಮಿಂಚು, ತುತ್ತೂರಿಯ ಧ್ವನಿ, ಹಾಗೂ ಬೆಟ್ಟದಿಂದ ಹೊರಬರುತ್ತಿದ್ದ ಹೊಗೆಯನ್ನು ಜನರೆಲ್ಲರೂ ನೋಡಿ, ನಡುಗುತ್ತಾ ದೂರದಲ್ಲಿ ನಿಂತುಕೊಂಡರು.
ಯೆಹೋವನು ಯೆರೂಸಲೇಮಿನವರ ಮೇಲೆಯೂ ಬೇರೆ ಎಲ್ಲಾ ಯೆಹೂದ್ಯರ ಮೇಲೆಯೂ ಇದನ್ನೆಲ್ಲಾ ಬರಮಾಡಿ ಕೊನೆಯಲ್ಲಿ ಅವರನ್ನು ತನ್ನ ಸನ್ನಿಧಿಯಿಂದ ನಾಶಮಾಡುವಷ್ಟು ರೋಷವುಳ್ಳವನಾಗಿದ್ದನು. ಆದರೆ ಚಿದ್ಕೀಯನು ಬಾಬೆಲಿನ ಅರಸನಿಗೆ ವಿರುದ್ಧವಾಗಿ ತಿರುಗಿಬಿದ್ದನು.
ಆಗ ಸೈತಾನನು ಯೆಹೋವನ ಸನ್ನಿಧಾನದಿಂದ ಹೊರಟು ಯೋಬನ ಅಂಗಾಲು ಮೊದಲುಗೊಂಡು ನಡುನೆತ್ತಿಯವರೆಗೂ ಕೆಟ್ಟ ಹುಣ್ಣುಗಳನ್ನು ಹುಟ್ಟಿಸಿ ಅವನನ್ನು ಬಾಧಿಸಿದನು.
ನಿನ್ನನ್ನು ಮೊರೆಹೊಕ್ಕವರೆಲ್ಲರು ನಿನ್ನಲ್ಲಿ ಸಂತೋಷಪಡುವರು; ನೀನು ಕಾಪಾಡುವವನೆಂದು ಅವರು ಯಾವಾಗಲೂ ಆನಂದ ಧ್ವನಿಮಾಡುವರು. ನಿನ್ನ ನಾಮವನ್ನು ಪ್ರೀತಿಸುವವರು ನಿನ್ನಲ್ಲಿ ಉಲ್ಲಾಸಗೊಳ್ಳುವರು.
ಖಂಡಿತವಾಗಿ ನಿಮ್ಮನ್ನೂ ನಾನು ನಿಮಗೆ ಮತ್ತು ನಿಮ್ಮ ಪೂರ್ವಿಕರಿಗೆ ದಯಪಾಲಿಸಿದ ಪಟ್ಟಣವನ್ನೂ ಹೊರೆಯೆಂದು ಎತ್ತಿ ನನ್ನೆದುರಿನಿಂದ ಎಸೆದುಬಿಡುವೆನು.
‹ಏಕೆಂದರೆ ಇಬ್ಬರಾಗಲೀ ಮೂವರಾಗಲೀ ನನ್ನ ಹೆಸರಿನಲ್ಲಿ ಎಲ್ಲಿ ಕೂಡಿ ಬರುತ್ತಾರೋ ಅಲ್ಲಿ ಅವರ ಮಧ್ಯದಲ್ಲಿ ನಾನು ಇದ್ದೇನೆ”› ಅಂದನು.
ಸಮಸ್ತವೂ ಆತನ ಮೂಲಕವಾಗಿ ಸೃಷ್ಟಿಯಾಯಿತು. ಸೃಷ್ಟಿಯಾದ ಎಲ್ಲವುಗಳಲ್ಲಿ ಆತನಿಲ್ಲದೆ ಒಂದಾದರೂ ಸೃಷ್ಟಿಯಾಗಲಿಲ್ಲ.
ನಾವು ನಿಮ್ಮಲ್ಲಿಗೆ ಬಂದಾಗ ನೀವು ನಮ್ಮನ್ನು ಹೇಗೆ ಸ್ವಾಗತಿಸಿದಿರಿ; ನೀವು ವಿಗ್ರಹಗಳನ್ನು ತೊರೆದು ದೇವರ ಕಡೆಗೆ ತಿರುಗಿಕೊಂಡು ಜೀವಸ್ವರೂಪನಾದ ಸತ್ಯ ದೇವರನ್ನು ಸೇವಿಸುವವರಾಗಿದ್ದೀರಿ