ಈ ಹೊತ್ತಿಗೆ ಇನ್ನು ಮೂರು ದಿನಗಳಾದ ಮೇಲೆ ಫರೋಹನು ನಿನ್ನನ್ನು ಮೇಲಕ್ಕೆ ಎತ್ತಿ, ನಿನ್ನ ಉದ್ಯೋಗಕ್ಕೆ ಪುನಃ ನಿನ್ನನ್ನು ನೇಮಿಸುವನು. ನೀನು ಮೊದಲು ಫರೋಹನ ಪಾನದಾಯಕನಾಗಿದ್ದು ಅವನ ಕೈಗೆ ಪಾನಪಾತ್ರೆಯನ್ನು ಒಪ್ಪಿಸುತ್ತಿದ್ದಂತೆಯೇ ಮುಂದೆಯೂ ಒಪ್ಪಿಸುವಿ.
TSK
TSK · ಆದಿಕಾಂಡ 40:19
Treasury of Scripture Knowledge references in ಕನ್ನಡ IRV.
ಆದರೆ ಮುಖ್ಯ ಅಡಿಗೆಭಟ್ಟನನ್ನು ಫರೋಹನು ಗಲ್ಲಿಗೆ ಹಾಕಿಸಿದನು. ಹೀಗೆ ಯೋಸೇಫನು ಹೇಳಿದಂತೆಯೇ ಆಯಿತು.
¶ ಅಪರಾಧ ಮಾಡಿದವನು ಮರಣಶಿಕ್ಷೆಯನ್ನು ಹೊಂದಿದ ಮೇಲೆ ನೀವು ಅವನ ಶವವನ್ನು ಮರದ ಕಂಬಕ್ಕೆ ತೂಗುಹಾಕಿದರೆ,
ಅನಂತರ ಆ ಅರಸರನ್ನು ಕೊಲ್ಲಿಸಿ ಐದು ಮರಗಳಿಗೆ ನೇತುಹಾಕಿಸಿದನು. ಅವರ ಶವಗಳು ಸಾಯಂಕಾಲದವರೆಗೂ ಅಲ್ಲೇ ತೂಗಾಡುತ್ತಿದ್ದವು.
ಆತನು ಈ ಹೊತ್ತು ನಿನ್ನನ್ನು ನನ್ನ ಕೈಗೆ ಒಪ್ಪಿಸಿಕೊಡುವನು. ನಾನು ನಿನ್ನನ್ನು ಕೊಂದು ನಿನ್ನ ತಲೆಯನ್ನು ಕಡಿದು ಹಾಕಿ ಫಿಲಿಷ್ಟಿಯ ಸೈನ್ಯದ ಶವಗಳನ್ನು ಮೃಗ ಪಕ್ಷಿಗಳಿಗೆ ಹಂಚಿಕೊಡುವೆನು. ಇದರಿಂದ ಇಸ್ರಾಯೇಲರೊಳಗೆ ದೇವರಿದ್ದಾನೆಂಬುದು ಭೂಲೋಕದವರಿಗೆಲ್ಲಾ ತಿಳಿದುಬರುವುದು.
ಆಗ ಅಯ್ಯಾಹನ ಮಗಳಾದ ರಿಚ್ಪಳು ಒಂದು ಗೋಣಿತಟ್ಟನ್ನು ತೆಗೆದುಕೊಂಡು, ಅದನ್ನು ಬಂಡೆಯ ಮೇಲೆ ಹಾಸಿ, ಸುಗ್ಗಿಯ ಆರಂಭದಿಂದ ಶವಗಳ ಮೇಲೆ ಮಳೆ ಬೀಳುವ ತನಕ ಅದರ ಮೇಲೆ ಕುಳಿತುಕೊಂಡು, ಹಗಲಿನಲ್ಲಿ ಆಕಾಶದ ಪಕ್ಷಿಗಳೂ, ರಾತ್ರಿಯಲ್ಲಿ ಕಾಡು ಮೃಗಗಳೂ ಅವುಗಳನ್ನು ತಿನ್ನದಂತೆ ಕಾಯುತ್ತಿದ್ದಳು.
ನೀನೂ, ನಿನ್ನ ಎಲ್ಲಾ ಸೈನ್ಯದಳಗಳೂ ಮತ್ತು ನಿನ್ನೊಂದಿಗಿರುವ ನಿನ್ನ ಜನರೂ ಇಸ್ರಾಯೇಲಿನ ಪರ್ವತಗಳಲ್ಲಿ ಬೀಳುವಿರಿ; ನಾನು ನಿಮ್ಮನ್ನು ಹದ್ದುಗಳಿಗೂ, ಪಕ್ಷಿಗಳಿಗೂ ಕಾಡಿನ ಮೃಗಗಳಿಗೂ, ಬಯಲಿನ ಭೂಜಂತುಗಳಿಗೂ ಆಹಾರವಾಗುವಂತೆ ನಾನು ನಿನ್ನನ್ನು ಕೊಡುವೆನು.
¶ ಯೇಸು ಕ್ರಿಸ್ತನು ನಮನ್ನು ಶಾಪದಿಂದ ಬಿಡಿಸುವುದಕ್ಕಾಗಿ ತಾನೇ ಶಾಪಗ್ರಸ್ತನಾದನು. ಏಕೆಂದರೆ ಮೋಶೆಯ ಧರ್ಮಶಾಸ್ತ್ರದಲ್ಲಿ ಬರೆದಿರುವ ಪ್ರಕಾರ “ಮರಕ್ಕೆ ತೂಗುಹಾಕಲ್ಪಟ್ಟು ಪ್ರತಿಯೊಬ್ಬನು ಶಾಪಗ್ರಸ್ತನು” ಎಂದು ತಿಳಿದಿದ್ದೇವೆ.