¶ ಅವರು ಅವನಿಗೆ, “ನಮಗೆ ಕನಸುಬಿತ್ತು. ಅದರ ಅರ್ಥವನ್ನು ಹೇಳುವವರು ಯಾರೂ ಇಲ್ಲ” ಎಂದು ಹೇಳಲು ಯೋಸೇಫನು ಅವರಿಗೆ, “ಕನಸುಗಳ ಅರ್ಥವು ದೇವರಿಂದ ದೊರಕಬಹುದಲ್ಲವೇ? ದಯಮಾಡಿ ನಿಮ್ಮ ಕನಸನ್ನು ನನಗೆ ತಿಳಿಸಿರಿ” ಎಂದು ಹೇಳಿದನು.
TSK
TSK · ಆದಿಕಾಂಡ 41:15
Treasury of Scripture Knowledge references in ಕನ್ನಡ IRV.
ದೈವಭಕ್ತಿಯನ್ನು ಬೋಧಿಸುತ್ತಿದ್ದ ಜೆಕರ್ಯನ ಜೀವಮಾನಕಾಲದಲ್ಲಿ ಅವನು ದೇವರನ್ನು ಅವಲಂಬಿಸಿಕೊಂಡಿದ್ದನು; ಹೀಗೆ ಅವನು ಯೆಹೋವನನ್ನು ಅವಲಂಬಿಸಿದ್ದ ಕಾಲದಲ್ಲೆಲ್ಲಾ ದೇವರಾದ ಯೆಹೋವನು ಅವನನ್ನು ಅಭಿವೃದ್ಧಿಗೆ ತಂದನು.
ಹೌದು, ಬೇಲ್ತೆಶಚ್ಚರನೆಂಬ ಅಡ್ಡ ಹೆಸರನ್ನು ರಾಜನಿಂದ ಹೊಂದಿದ ಈ ದಾನಿಯೇಲನಲ್ಲಿ ಪರಮಬುದ್ಧಿಯೂ, ಜ್ಞಾನವೂ, ವಿವೇಕವೂ, ಕನಸುಗಳ ಅರ್ಥವನ್ನು ತಿಳಿಸುವ ಜಾಣತನವೂ, ಒಗಟುಬಿಡಿಸುವ ಚಮತ್ಕಾರವೂ, ಕಠಿಣವಾದ ಸಂಗತಿಗಳನ್ನು ತಿಳಿಸುವ ಚಾತುರ್ಯವೂ ತೋರಿಬಂದವು. ಆದುದರಿಂದಲೇ ಆತನನ್ನು ಹಾಗೆ ನೇಮಿಸಿದನು. ಈಗ ಆ ದಾನಿಯೇಲನನ್ನು ಕರೆಯಿಸಿದರೆ ಅವನು ಬರಹದ ಅರ್ಥವನ್ನು ವಿವರಿಸುವನು” ಎಂದಳು.
ನೀನು, ಗೂಢಾರ್ಥಗಳನ್ನು ವಿವರಿಸಿ ಕಠಿಣವಾದ ಸಂಗತಿಗಳನ್ನು ಬಿಡಿಸಿ ತಿಳಿಸುವವನಾಗಿದ್ದೀ ಎಂಬ ಸಮಾಚಾರವು ನನಗೆ ಮುಟ್ಟಿದೆ; ಈ ಬರಹವನ್ನು ಓದಿ ಇದರ ಅಭಿಪ್ರಾಯವನ್ನು ನನಗೆ ತಿಳಿಸಲು ನಿನ್ನಿಂದಾದರೆ ನಾನೀಗ ನಿನಗೆ ಧೂಮ್ರವಸ್ತ್ರವನ್ನು ಹೊದಿಸಿ, ನಿನ್ನ ಕೊರಳಿಗೆ ಚಿನ್ನದ ಹಾರವನ್ನು ಹಾಕಿಸಿ, ನಿನ್ನನ್ನು ರಾಜ್ಯದ ಮೂವರು ಮುಖ್ಯಾಧಿಕಾರಿಗಳಲ್ಲಿ ಒಬ್ಬನನ್ನಾಗಿ ನೇಮಿಸುವೆನು” ಎಂದು ಹೇಳಿದನು.