¶ ಅವರು ಅವನಿಗೆ, “ನಮಗೆ ಕನಸುಬಿತ್ತು. ಅದರ ಅರ್ಥವನ್ನು ಹೇಳುವವರು ಯಾರೂ ಇಲ್ಲ” ಎಂದು ಹೇಳಲು ಯೋಸೇಫನು ಅವರಿಗೆ, “ಕನಸುಗಳ ಅರ್ಥವು ದೇವರಿಂದ ದೊರಕಬಹುದಲ್ಲವೇ? ದಯಮಾಡಿ ನಿಮ್ಮ ಕನಸನ್ನು ನನಗೆ ತಿಳಿಸಿರಿ” ಎಂದು ಹೇಳಿದನು.
TSK
TSK · ಆದಿಕಾಂಡ 41:25
Treasury of Scripture Knowledge references in ಕನ್ನಡ IRV.
ಈ ಸಾರಿ ನಾನು ನನ್ನ ವಶದಲ್ಲಿರುವ ಈ ಬಾಧೆಗಳನ್ನು ನಿನ್ನ ಪ್ರಜಾಪರಿವಾರದವರಿಗೆ ಉಂಟಾಗುವಂತೆಯೂ, ನಿನ್ನ ಹೃದಯಕ್ಕೂ ತಗಲುವಂತೆಯೂ ಮಾಡುವೆನು. ಆದುದರಿಂದ ಸಮಸ್ತ ಲೋಕದಲ್ಲಿ ನನಗೆ ಸಮಾನರು ಬೇರೆ ಯಾರೂ ಇಲ್ಲವೆಂದು ನನ್ನ ವಿಷಯದಲ್ಲಿ ತಿಳಿದುಕೊಳ್ಳುವಿ.
ಯೆಹೋವನು ತನ್ನ ರಕ್ಷಣೆಯನ್ನು ಪ್ರಕಟಿಸಿದ್ದಾನೆ; ಜನಾಂಗಗಳೆದುರಿಗೆ ತನ್ನ ನೀತಿಯನ್ನು ತೋರ್ಪಡಿಸಿದ್ದಾನೆ.
ಎಲ್ಲಾ ಜನಾಂಗಗಳು ಒಟ್ಟಿಗೆ ಬರಲಿ, ಸಕಲದೇಶೀಯರು ನೆರೆಯಲಿ, ಇವರ ದೇವರುಗಳಲ್ಲಿ ಯಾರು ಈ ಸಂಗತಿಯನ್ನು ಮುಂತಿಳಿಸಬಲ್ಲರು? ನಡೆದ ಸಂಗತಿಗಳನ್ನು ಯಾರು ವಿವರಿಸಾರು? ತಾವು ಸತ್ಯವಂತರೆಂದು ಸ್ಥಾಪಿಸಿಕೊಳ್ಳುವುದಕ್ಕೆ ಸಾಕ್ಷಿಗಳನ್ನು ಕರೆದುತರಲಿ. ಆ ಸಾಕ್ಷಿಗಳು ಇವರ ಮಾತನ್ನು ಕೇಳಿ ‘ಇದು ನಿಜ’ ಎಂದು ಹೇಳಲಿ.
ಬೆಟ್ಟದೊಳಗಿಂದ ಒಂದು ಗುಂಡು ಬಂಡೆಯು ಕೈಯಿಲ್ಲದೆ ಒಡೆಯಲ್ಪಟ್ಟು ಕಬ್ಬಿಣ, ತಾಮ್ರ, ಮಣ್ಣು, ಬೆಳ್ಳಿಬಂಗಾರಗಳನ್ನು ಚೂರುಚೂರು ಮಾಡಿದ್ದು ನಿನ್ನ ಕಣ್ಣಿಗೆ ಬಿತ್ತಲ್ಲಾ. ಇದರಿಂದ ಪರಲೋಕದೇವರು ಮುಂದೆ ನಡೆಯುವ ವಿಷಯಗಳನ್ನು ರಾಜನಿಗೆ ತಿಳಿಯಪಡಿಸಿದ್ದಾನೆ. ಕನಸು ನಿಜ, ಅದರ ಅರ್ಥವು ನಂಬತಕ್ಕದು” ಎಂದು ಹೇಳಿದನು.
ನಿಶ್ಚಯವಾಗಿ ತನ್ನ ಸೇವಕರಾದ ಪ್ರವಾದಿಗಳಿಗೆ ತನ್ನ ಯೋಜನೆಯನ್ನು ತಿಳಿಸದೆ ಯೆಹೋವನಾದ ದೇವರು ಏನನ್ನೂ ಮಾಡುವುದಿಲ್ಲ.
‹ನೀವಂತೂ ಜಾಗರೂಕರಾಗಿರಿ. ನಾನು ನಿಮಗೆ ಎಲ್ಲವುಗಳನ್ನು ಮುಂದಾಗಿಯೇ”› ಹೇಳಿದ್ದೇನೆ.
¶ ಆನಂತರ ನಾನು ನೋಡಿದಾಗ, ಪರಲೋಕದಲ್ಲಿ ತೆರೆದಿರುವ ಒಂದು ಬಾಗಿಲು ಕಾಣಿಸಿತು. ಮೊದಲು ನನ್ನೊಡನೆ ಮಾತನಾಡಿದ ವಾಣಿಯು ತುತ್ತೂರಿಯಂತೆ ಮಾತನಾಡುತ್ತದೋ ಎಂಬಂತೆ ನನಗೆ ಕೇಳಿಸಿತು. ಅದು, ‹“ಇಲ್ಲಿಗೆ ಏರಿ ಬಾ,›‹ಮುಂದೆ ಸಂಭವಿಸಬೇಕಾದವುಗಳನ್ನು ನಿನಗೆ ತೋರಿಸಿ ಕೊಡುವೆನು”› ಎಂದು ಹೇಳಿತು.