¶ “ಎಜ್ರನೇ, ನಿನ್ನ ಕೈಯಲ್ಲಿರುವ ನಿನ್ನ ದೇವರ ಜ್ಞಾನೋಪದೇಶಗ್ರಂಥಕ್ಕೆ ಅನುಸಾರವಾಗಿ ನ್ಯಾಯಾಧೀಶರನ್ನೂ ಮತ್ತು ಪಂಚಾಯತರನ್ನೂ ನೇಮಿಸು. ಅವರು ಹೊಳೆಯಾಚೆಯ ಇಸ್ರಾಯೇಲರಲ್ಲಿ ನಿನ್ನ ದೇವರ ಧರ್ಮವನ್ನು ಅರಿತಿರುವವರೆಲ್ಲರ ವ್ಯಾಜ್ಯಗಳನ್ನು ತೀರಿಸಲಿ. ಅರಿಯದವರಿಗೆ ನೀವು ಅದನ್ನು ಕಲಿಸಬೇಕು.
TSK
TSK · ಆದಿಕಾಂಡ 41:38
Treasury of Scripture Knowledge references in ಕನ್ನಡ IRV.
ಜಾಣನಾದ ಸೇವಕನಿಗೆ ರಾಜನ ಕೃಪೆ, ಮಾನಗೇಡಿಗೆ ರಾಜನ ರೌದ್ರ.
ಆದುದರಿಂದ ಕನಸಿನ ಅರ್ಥವನ್ನು ನನಗೆ ತಿಳಿಸಲಿಕ್ಕೆ ಬಾಬೆಲಿನ ವಿದ್ವಾಂಸರೆಲ್ಲರನ್ನೂ ಕರೆದುತರುವ ಹಾಗೆ ಆಜ್ಞಾಪಿಸಿದೆನು.
ರಾಜನಾದ ನೆಬೂಕದ್ನೆಚ್ಚರನೆಂಬ ನಾನು ಈ ಕನಸನ್ನು ಕಂಡೆನು; ಬೇಲ್ತೆಶಚ್ಚರನೇ, ನನ್ನ ರಾಜ್ಯದ ಸಕಲ ವಿದ್ವಾಂಸರಲ್ಲಿ ಯಾರೂ ಅದರ ಅರ್ಥವನ್ನು ತಿಳಿಸಲಾರರು; ನೀನು ಅದನ್ನು ತಿಳಿಸು; ಪರಿಶುದ್ಧ ದೇವರುಗಳ ಆತ್ಮವು ನಿನ್ನಲ್ಲಿ ನೆಲೆಸಿರುವುದರಿಂದ ನೀನೇ ಅದಕ್ಕೆ ಶಕ್ತನು.”
ದೇವರುಗಳ ಆತ್ಮವು ನಿನ್ನಲ್ಲಿ ನೆಲಸಿ ಪರಮಜ್ಞಾನವೂ, ವಿವೇಕವೂ, ಬುದ್ಧಿಪ್ರಕಾಶವೂ ನಿನಗುಂಟೆಂದು ಕೇಳಿದ್ದೇನೆ.
¶ ಹೀಗಿರಲು ಮುಖ್ಯಾಧಿಕಾರಿಗಳೂ, ದೇಶಾಧಿಪತಿಗಳೂ ಅಸೂಯೆಯಿಂದ ರಾಜ್ಯಭಾರದ ವಿಷಯವಾಗಿ ದಾನಿಯೇಲನ ಮೇಲೆ ತಪ್ಪುಹೊರಿಸುವುದಕ್ಕೆ ಸಂದರ್ಭ ಹುಡುಕುತ್ತಿದ್ದರು. ಆದರೆ ತಪ್ಪುಹೊರಿಸುವ ಯಾವ ಸಂದರ್ಭವನ್ನೂ, ಯಾವ ತಪ್ಪನ್ನೂ ಕಾಣಲಾರದೆ ಹೋದರು. ಅವನು ನಂಬಿಗಸ್ತನೇ ಆಗಿದ್ದನು, ಅವನಲ್ಲಿ ಆಲಸ್ಯವಾಗಲಿ, ಅಕ್ರಮವಾಗಲಿ ಸಿಕ್ಕಲಿಲ್ಲ.