TSK

TSK · ಆದಿಕಾಂಡ 41:42

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಆಗ ಅರಸನು ತನ್ನ ಕೈಯಲ್ಲಿದ್ದ ಮುದ್ರೆಯುಂಗುರವನ್ನು ತೆಗೆದು ಅಗಾಗನ ವಂಶದವನೂ ಹಮ್ಮೆದಾತನ ಮಗನೂ ಯೆಹೂದ್ಯರ ದ್ವೇಷಿಯೂ ಆದ ಹಾಮಾನನಿಗೆ ಒಪ್ಪಿಸಿದನು.

ಅದಕ್ಕೆ ಹಾಮಾನನು, “ಅರಸನು ನನ್ನನ್ನಲ್ಲದೆ ಇನ್ನಾರನ್ನು ಸನ್ಮಾನಿಸುವುದಕ್ಕೆ ಇಷ್ಟವುಳ್ಳವನಾಗಿರುವನು” ಅಂದುಕೊಂಡನು.

ಆದುದರಿಂದ ಯೆಹೂದ್ಯರ ವಿಷಯವಾಗಿ ನಿಮಗೆ ಸರಿತೋರುವುದನ್ನು ಅರಸನ ಹೆಸರಿನಲ್ಲಿ ನೀವೂ ಬರೆಯಿಸಿ, ಅದಕ್ಕೆ ರಾಜಮುದ್ರೆಯನ್ನು ಹಾಕಿರಿ” ಎಂದು ಹೇಳಿದನು.

¶ ಮೊರ್ದೆಕೈಯಾದರೋ ನೀಲಿ ಮತ್ತು ಶುಭ್ರವರ್ಣಗಳುಳ್ಳ ರಾಜವಸ್ತ್ರಗಳನ್ನು ಧರಿಸಿಕೊಂಡು, ಬಂಗಾರದ ದೊಡ್ಡ ಕಿರೀಟವನ್ನು ಇಟ್ಟುಕೊಂಡು, ರಕ್ತವರ್ಣದ ನಾರಿನ ನಿಲುವಂಗಿಯನ್ನು ಹೊದ್ದುಕೊಂಡು ರಾಜಸನ್ನಿಧಿಯಿಂದ ಹೊರಟನು. ಶೂಷನ್ ಪಟ್ಟಣದಲ್ಲಿ ಸಂತೋಷದ ಆರ್ಭಟವು ಕೇಳಿಸಿತು.

ಹಚ್ಚಡಗಳನ್ನು ನೆಯ್ದು ಮಾರಾಟಮಾಡುವಳು, ನಡುಕಟ್ಟುಗಳನ್ನು ವರ್ತಕನಿಗೆ ಒದಗಿಸುವಳು.

ಕೈಗನ್ನಡಿ, ನಾರುಮಡಿ, ಮುಡಿ ಮುಕುಟ, ಮೇಲ್ಹೊದಿಕೆ ಈ ಸೊಗಸಾದ ಭೂಷಣಗಳನ್ನೆಲ್ಲಾ ತೆಗೆದುಹಾಕುವನು.

ಇದಲ್ಲದೆ ನಾನು ಕಸೂತಿಯ ಬಟ್ಟೆಯನ್ನು ನಿನಗೆ ತೊಡಿಸಿ, ಕಡಲಪ್ರಾಣಿಯ ಕೆಂಪು ಚರ್ಮದ ಕೆರಗಳನ್ನು ನಿನ್ನ ಕಾಲಿಗೆ ಮೆಟ್ಟಿಸಿ, ನಯವಾದ ನಾರು ಮಡಿಯನ್ನು ನಿನಗೆ ಉಡಿಸಿ, ರೇಷ್ಮೆಯ ಹೊದಿಕೆಯನ್ನು ನಿನಗೆ ಹೊದಿಸಿದೆನು.

¶ ಆಗ ರಾಜನಾದ ನೆಬೂಕದ್ನೆಚ್ಚರನು ಅಡ್ಡಬಿದ್ದು, “ದಾನಿಯೇಲನನ್ನು ಪೂಜಿಸಿ, ಅವನಿಗೆ ನೈವೇದ್ಯಮಾಡಿ ಧೂಪ ಹಾಕಬೇಕು” ಎಂದು ಆಜ್ಞಾಪಿಸಿದನು.

ನೀನು, ಗೂಢಾರ್ಥಗಳನ್ನು ವಿವರಿಸಿ ಕಠಿಣವಾದ ಸಂಗತಿಗಳನ್ನು ಬಿಡಿಸಿ ತಿಳಿಸುವವನಾಗಿದ್ದೀ ಎಂಬ ಸಮಾಚಾರವು ನನಗೆ ಮುಟ್ಟಿದೆ; ಈ ಬರಹವನ್ನು ಓದಿ ಇದರ ಅಭಿಪ್ರಾಯವನ್ನು ನನಗೆ ತಿಳಿಸಲು ನಿನ್ನಿಂದಾದರೆ ನಾನೀಗ ನಿನಗೆ ಧೂಮ್ರವಸ್ತ್ರವನ್ನು ಹೊದಿಸಿ, ನಿನ್ನ ಕೊರಳಿಗೆ ಚಿನ್ನದ ಹಾರವನ್ನು ಹಾಕಿಸಿ, ನಿನ್ನನ್ನು ರಾಜ್ಯದ ಮೂವರು ಮುಖ್ಯಾಧಿಕಾರಿಗಳಲ್ಲಿ ಒಬ್ಬನನ್ನಾಗಿ ನೇಮಿಸುವೆನು” ಎಂದು ಹೇಳಿದನು.

‹ತಂದೆಯು ತನ್ನ ಆಳುಗಳಿಗೆ, ‘ಶ್ರೇಷ್ಠವಾದ ನಿಲುವಂಗಿಯನ್ನು ತಟ್ಟನೆ ತಂದು ಇವನಿಗೆ ಉಡಿಸಿ, ಇವನ ಕೈಗೆ ಉಂಗುರವನ್ನು ತೊಡಿಸಿರಿ, ಕಾಲಿಗೆ ಜೋಡು ಮೆಡಿಸಿರಿ,›